ಬ್ರೇಕಿಂಗ್ ನ್ಯೂಸ್
04-09-24 05:44 pm HK News Desk ದೇಶ - ವಿದೇಶ
ಟೆಕ್ಸಾಸ್, ಸೆ 04: ಅಮೆರಿಕದ ಅನ್ನಾದಲ್ಲಿ ಆ. 30ರಂದು ವಾಹನಗಳ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ತೆಲಂಗಾಣದ ಮೂವರು ಸೇರಿದಂತೆ ನಾಲ್ವರು ಭಾರತೀಯರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಮೃತ ದುರ್ದೈವಿಗಳು ಹೈದರಾಬಾದ್ನ ಕುಕಟ್ಪಲ್ಲಿ ಉಪನಗರದ ಆರ್ಯನ್ ರಘುನಾಥ್ ಒರಂಪಟ್ಟಿ, ಅವರ ಸ್ನೇಹಿತ ಫಾರೂಕ್ ಶೇಖ್, ಲೋಕೇಶ್ ಪಾಲಾಚಾರ್ಲಾ ಮತ್ತು ತಮಿಳುನಾಡಿನ ದರ್ಶಿನಿ ವಾಸುದೇವ್ ಎಂದು ಗುರುತಿಸಲಾಗಿದೆ.
ಬೆಂಟೊನ್ವಿಲ್ಲೆಗೆ ಪ್ರಯಾಣಿಸಲು ನಾಲ್ವರು ಕಾರ್ಪೂಲಿಂಗ್ ಅಪ್ಲಿಕೇಶನ್ ಮೂಲಕ ಸಂಪರ್ಕ ಹೊಂದಿದ್ದರು. ಐದು ವಾಹನಗಳ ಘರ್ಷಣೆಯ ವೇಳೆ ವೇಗವಾಗಿ ಬಂದ ಟ್ರಕ್ ಅಪ್ಪಳಿಸಿ ಭೀಕರ ಅವಘಡ ಸಂಭವಿಸಿದೆ. ಭಾರತೀಯರು ಪ್ರಯಾಣಿಸುತ್ತಿದ್ದ ಎಸ್ ಯುವಿ ಗೆ ಅಪ್ಪಳಿಸಿದ ಪರಿಣಾಮ ಬೆಂಕಿ ಹೊತ್ತಿಕೊಂಡು ನಾಲ್ವರು ಸುಟ್ಟು ಕರಕಲಾಗಿದ್ದಾರೆ.
ಓರಂಪಟ್ಟಿ ಮತ್ತು ಶೇಖ್ ಅವರು ಡಲ್ಲಾಸ್ನಲ್ಲಿರುವ ಸೋದರ ಸಂಬಂಧಿಯನ್ನು ಭೇಟಿ ಮಾಡಿ ಹಿಂತಿರುಗುತ್ತಿದ್ದರು. ದರ್ಶಿನಿ ವಾಸುದೇವ್ ಟೆಕ್ಸಾಸ್ ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿ ಅರ್ಕಾನ್ಸಾಸ್ನಲ್ಲಿರುವ ಚಿಕ್ಕಪ್ಪನನ್ನು ಭೇಟಿ ಮಾಡಲು ಹೊರಟಿದ್ದರು.
ಓರಂಪತಿ ತಂದೆ ಸುಭಾಷ್ ಚಂದ್ರ ರೆಡ್ಡಿ ಅವರು ಹೈದರಾಬಾದ್ ಮೂಲದ ಮ್ಯಾಕ್ಸ್ ಅಗ್ರಿ ಜೆನೆಟಿಕ್ಸ್ ಪ್ರೈವೇಟ್ ಲಿಮಿಟೆಡ್ ಎಂಬ ಸಂಸ್ಥೆಯನ್ನು ಹೊಂದಿದ್ದಾರೆ. ಆರ್ಯನ್ ಕೊಯಮತ್ತೂರಿನ ಅಮೃತ ವಿಶ್ವ ವಿದ್ಯಾಪೀಠದಲ್ಲಿ ಇಂಜಿನಿಯರಿಂಗ್ ಪದವಿ ಮುಗಿಸಿದ್ದರು. ಟೆಕ್ಸಾಸ್ ವಿಶ್ವವಿದ್ಯಾನಿಲಯದಲ್ಲಿ ಘಟಿಕೋತ್ಸವಕ್ಕಾಗಿ ಅವರ ಪೋಷಕರು ಮೇ ತಿಂಗಳಲ್ಲಿ ಯುಎಸ್ನಲ್ಲಿದ್ದರು. ಘಟಿಕೋತ್ಸವದ ನಂತರ ಅವರು ಭಾರತಕ್ಕೆ ಮರಳುವುದಿತ್ತು ಎಂದು ಸಂಬಂಧಿಕರು ಹೇಳಿಕೊಂಡಿದ್ದಾರೆ.
A multi-vehicle collision in Anna, Texas, has claimed the lives of four Indian nationals, including three from Telangana. The four had connected through a carpooling app for their journey to Bentonville, US. The collision, which involved five vehicles, occurred when a speeding truck reportedly failed to slow down and rear-ended the SUV they were travelling in, causing it to burst into flames.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
15-09-26 10:31 am
HK News Staffer
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am