ಬ್ರೇಕಿಂಗ್ ನ್ಯೂಸ್
04-09-24 05:44 pm HK News Desk ದೇಶ - ವಿದೇಶ
ಟೆಕ್ಸಾಸ್, ಸೆ 04: ಅಮೆರಿಕದ ಅನ್ನಾದಲ್ಲಿ ಆ. 30ರಂದು ವಾಹನಗಳ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ತೆಲಂಗಾಣದ ಮೂವರು ಸೇರಿದಂತೆ ನಾಲ್ವರು ಭಾರತೀಯರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಮೃತ ದುರ್ದೈವಿಗಳು ಹೈದರಾಬಾದ್ನ ಕುಕಟ್ಪಲ್ಲಿ ಉಪನಗರದ ಆರ್ಯನ್ ರಘುನಾಥ್ ಒರಂಪಟ್ಟಿ, ಅವರ ಸ್ನೇಹಿತ ಫಾರೂಕ್ ಶೇಖ್, ಲೋಕೇಶ್ ಪಾಲಾಚಾರ್ಲಾ ಮತ್ತು ತಮಿಳುನಾಡಿನ ದರ್ಶಿನಿ ವಾಸುದೇವ್ ಎಂದು ಗುರುತಿಸಲಾಗಿದೆ.
ಬೆಂಟೊನ್ವಿಲ್ಲೆಗೆ ಪ್ರಯಾಣಿಸಲು ನಾಲ್ವರು ಕಾರ್ಪೂಲಿಂಗ್ ಅಪ್ಲಿಕೇಶನ್ ಮೂಲಕ ಸಂಪರ್ಕ ಹೊಂದಿದ್ದರು. ಐದು ವಾಹನಗಳ ಘರ್ಷಣೆಯ ವೇಳೆ ವೇಗವಾಗಿ ಬಂದ ಟ್ರಕ್ ಅಪ್ಪಳಿಸಿ ಭೀಕರ ಅವಘಡ ಸಂಭವಿಸಿದೆ. ಭಾರತೀಯರು ಪ್ರಯಾಣಿಸುತ್ತಿದ್ದ ಎಸ್ ಯುವಿ ಗೆ ಅಪ್ಪಳಿಸಿದ ಪರಿಣಾಮ ಬೆಂಕಿ ಹೊತ್ತಿಕೊಂಡು ನಾಲ್ವರು ಸುಟ್ಟು ಕರಕಲಾಗಿದ್ದಾರೆ.
ಓರಂಪಟ್ಟಿ ಮತ್ತು ಶೇಖ್ ಅವರು ಡಲ್ಲಾಸ್ನಲ್ಲಿರುವ ಸೋದರ ಸಂಬಂಧಿಯನ್ನು ಭೇಟಿ ಮಾಡಿ ಹಿಂತಿರುಗುತ್ತಿದ್ದರು. ದರ್ಶಿನಿ ವಾಸುದೇವ್ ಟೆಕ್ಸಾಸ್ ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿ ಅರ್ಕಾನ್ಸಾಸ್ನಲ್ಲಿರುವ ಚಿಕ್ಕಪ್ಪನನ್ನು ಭೇಟಿ ಮಾಡಲು ಹೊರಟಿದ್ದರು.
ಓರಂಪತಿ ತಂದೆ ಸುಭಾಷ್ ಚಂದ್ರ ರೆಡ್ಡಿ ಅವರು ಹೈದರಾಬಾದ್ ಮೂಲದ ಮ್ಯಾಕ್ಸ್ ಅಗ್ರಿ ಜೆನೆಟಿಕ್ಸ್ ಪ್ರೈವೇಟ್ ಲಿಮಿಟೆಡ್ ಎಂಬ ಸಂಸ್ಥೆಯನ್ನು ಹೊಂದಿದ್ದಾರೆ. ಆರ್ಯನ್ ಕೊಯಮತ್ತೂರಿನ ಅಮೃತ ವಿಶ್ವ ವಿದ್ಯಾಪೀಠದಲ್ಲಿ ಇಂಜಿನಿಯರಿಂಗ್ ಪದವಿ ಮುಗಿಸಿದ್ದರು. ಟೆಕ್ಸಾಸ್ ವಿಶ್ವವಿದ್ಯಾನಿಲಯದಲ್ಲಿ ಘಟಿಕೋತ್ಸವಕ್ಕಾಗಿ ಅವರ ಪೋಷಕರು ಮೇ ತಿಂಗಳಲ್ಲಿ ಯುಎಸ್ನಲ್ಲಿದ್ದರು. ಘಟಿಕೋತ್ಸವದ ನಂತರ ಅವರು ಭಾರತಕ್ಕೆ ಮರಳುವುದಿತ್ತು ಎಂದು ಸಂಬಂಧಿಕರು ಹೇಳಿಕೊಂಡಿದ್ದಾರೆ.
A multi-vehicle collision in Anna, Texas, has claimed the lives of four Indian nationals, including three from Telangana. The four had connected through a carpooling app for their journey to Bentonville, US. The collision, which involved five vehicles, occurred when a speeding truck reportedly failed to slow down and rear-ended the SUV they were travelling in, causing it to burst into flames.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm