ಬ್ರೇಕಿಂಗ್ ನ್ಯೂಸ್
04-09-24 05:44 pm HK News Desk ದೇಶ - ವಿದೇಶ
ಟೆಕ್ಸಾಸ್, ಸೆ 04: ಅಮೆರಿಕದ ಅನ್ನಾದಲ್ಲಿ ಆ. 30ರಂದು ವಾಹನಗಳ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ತೆಲಂಗಾಣದ ಮೂವರು ಸೇರಿದಂತೆ ನಾಲ್ವರು ಭಾರತೀಯರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಮೃತ ದುರ್ದೈವಿಗಳು ಹೈದರಾಬಾದ್ನ ಕುಕಟ್ಪಲ್ಲಿ ಉಪನಗರದ ಆರ್ಯನ್ ರಘುನಾಥ್ ಒರಂಪಟ್ಟಿ, ಅವರ ಸ್ನೇಹಿತ ಫಾರೂಕ್ ಶೇಖ್, ಲೋಕೇಶ್ ಪಾಲಾಚಾರ್ಲಾ ಮತ್ತು ತಮಿಳುನಾಡಿನ ದರ್ಶಿನಿ ವಾಸುದೇವ್ ಎಂದು ಗುರುತಿಸಲಾಗಿದೆ.
ಬೆಂಟೊನ್ವಿಲ್ಲೆಗೆ ಪ್ರಯಾಣಿಸಲು ನಾಲ್ವರು ಕಾರ್ಪೂಲಿಂಗ್ ಅಪ್ಲಿಕೇಶನ್ ಮೂಲಕ ಸಂಪರ್ಕ ಹೊಂದಿದ್ದರು. ಐದು ವಾಹನಗಳ ಘರ್ಷಣೆಯ ವೇಳೆ ವೇಗವಾಗಿ ಬಂದ ಟ್ರಕ್ ಅಪ್ಪಳಿಸಿ ಭೀಕರ ಅವಘಡ ಸಂಭವಿಸಿದೆ. ಭಾರತೀಯರು ಪ್ರಯಾಣಿಸುತ್ತಿದ್ದ ಎಸ್ ಯುವಿ ಗೆ ಅಪ್ಪಳಿಸಿದ ಪರಿಣಾಮ ಬೆಂಕಿ ಹೊತ್ತಿಕೊಂಡು ನಾಲ್ವರು ಸುಟ್ಟು ಕರಕಲಾಗಿದ್ದಾರೆ.
ಓರಂಪಟ್ಟಿ ಮತ್ತು ಶೇಖ್ ಅವರು ಡಲ್ಲಾಸ್ನಲ್ಲಿರುವ ಸೋದರ ಸಂಬಂಧಿಯನ್ನು ಭೇಟಿ ಮಾಡಿ ಹಿಂತಿರುಗುತ್ತಿದ್ದರು. ದರ್ಶಿನಿ ವಾಸುದೇವ್ ಟೆಕ್ಸಾಸ್ ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿ ಅರ್ಕಾನ್ಸಾಸ್ನಲ್ಲಿರುವ ಚಿಕ್ಕಪ್ಪನನ್ನು ಭೇಟಿ ಮಾಡಲು ಹೊರಟಿದ್ದರು.
ಓರಂಪತಿ ತಂದೆ ಸುಭಾಷ್ ಚಂದ್ರ ರೆಡ್ಡಿ ಅವರು ಹೈದರಾಬಾದ್ ಮೂಲದ ಮ್ಯಾಕ್ಸ್ ಅಗ್ರಿ ಜೆನೆಟಿಕ್ಸ್ ಪ್ರೈವೇಟ್ ಲಿಮಿಟೆಡ್ ಎಂಬ ಸಂಸ್ಥೆಯನ್ನು ಹೊಂದಿದ್ದಾರೆ. ಆರ್ಯನ್ ಕೊಯಮತ್ತೂರಿನ ಅಮೃತ ವಿಶ್ವ ವಿದ್ಯಾಪೀಠದಲ್ಲಿ ಇಂಜಿನಿಯರಿಂಗ್ ಪದವಿ ಮುಗಿಸಿದ್ದರು. ಟೆಕ್ಸಾಸ್ ವಿಶ್ವವಿದ್ಯಾನಿಲಯದಲ್ಲಿ ಘಟಿಕೋತ್ಸವಕ್ಕಾಗಿ ಅವರ ಪೋಷಕರು ಮೇ ತಿಂಗಳಲ್ಲಿ ಯುಎಸ್ನಲ್ಲಿದ್ದರು. ಘಟಿಕೋತ್ಸವದ ನಂತರ ಅವರು ಭಾರತಕ್ಕೆ ಮರಳುವುದಿತ್ತು ಎಂದು ಸಂಬಂಧಿಕರು ಹೇಳಿಕೊಂಡಿದ್ದಾರೆ.
A multi-vehicle collision in Anna, Texas, has claimed the lives of four Indian nationals, including three from Telangana. The four had connected through a carpooling app for their journey to Bentonville, US. The collision, which involved five vehicles, occurred when a speeding truck reportedly failed to slow down and rear-ended the SUV they were travelling in, causing it to burst into flames.
22-01-25 11:00 am
HK News Desk
Priyanka, Mohan Bhagwat; ಬೆಳಗಾವಿ ; ಮೋಹನ್ ಭಾಗವ...
21-01-25 10:59 pm
BJP MLA BP Harish, B. Y. Vijayendra, Yatnal:...
20-01-25 07:00 pm
Hassan Suicide, Online Gaming: ಅಮ್ಮಾ ನನ್ನನ್ನು...
20-01-25 04:24 pm
ಕೇಸರಿ ಮನೆಯಲ್ಲಿ ಬಣ ಬಡಿದಾಟ ಜೋರು ; ಯತ್ನಾಳ್ ಬಣದ ಎ...
19-01-25 08:30 pm
21-01-25 11:02 pm
HK News Desk
ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ; ಸಿಲಿಂಡರ್ಗಳ ನಿರಂತ...
19-01-25 08:17 pm
Israel War: ಕಡೆಗೂ ಕದನ ವಿರಾಮ ಘೋಷಿಸಿದ ಇಸ್ರೇಲ್ ;...
19-01-25 06:35 pm
ಮಂಗಳೂರಿನ ಕುದುರೆಮುಖ ಕಬ್ಬಿಣ ಅದಿರು ಕಂಪನಿ ಎನ್ಎಂಡಿ...
18-01-25 06:20 pm
Vijay Kiran Anand 2025: ಮಹಾ ಕುಂಭ ಮೇಳದ ಮುಖ್ಯ ಉ...
16-01-25 09:01 pm
21-01-25 11:51 pm
Mangalore Correspondent
Mangalore Praveen Nettaru murder case, NIA ar...
21-01-25 09:43 pm
Mangalore University, Phd courses: ಪಿಎಚ್ ಡಿ ಪ...
21-01-25 08:11 pm
Mangalore Kotekar bank robbery, president: 15...
21-01-25 07:43 pm
Mangalore Kotekar Bank Robbery, Accused Photo...
21-01-25 12:21 pm
22-01-25 11:04 am
Mangalore Correspondent
Kotekar Bank Robbery, Police Shoot: ಬ್ಯಾಂಕ್ ದ...
21-01-25 06:00 pm
Hubballi Bank Robbery, Kotekar, Bidar: ಬೀದರ್...
20-01-25 10:18 pm
Mangalore Kotekar Bank Robbery, Three Arreste...
20-01-25 07:19 pm
Mangalore Kotekar Robbery, Davanagere: ಮಂಗಳೂರ...
20-01-25 05:20 pm