ಬ್ರೇಕಿಂಗ್ ನ್ಯೂಸ್
05-09-24 12:07 pm HK News Desk ದೇಶ - ವಿದೇಶ
ವಿಂಡರ್, ಸೆ 05: ಹೈಸ್ಕೂಲ್ನಲ್ಲಿ 14 ವರ್ಷದ ವಿದ್ಯಾರ್ಥಿಯೊಬ್ಬ ಗುಂಡಿನ ದಾಳಿ ನಾಲ್ವರನ್ನು ಹತ್ಯೆಗೈದ ಘಟನೆ ಬುಧವಾರ ಜಾರ್ಜಿಯಾ ದೇಶದಲ್ಲಿ ನಡೆದಿದೆ. ದಾಳಿಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳು ಮತ್ತು ಓರ್ವ ಶಿಕ್ಷಕ ಸೇರಿ 19 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಟ್ಲಾಂಟಾ ಹತ್ತಿರದ ವಿಂಡರ್ ನಗರದ ಅಪಾಲಾಚಿ ಹೈಸ್ಕೂಲ್ನಲ್ಲಿ ನಡೆದ ಈ ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಮತ್ತು ಇಬ್ಬರು ಶಿಕ್ಷಕರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಗುಂಡಿನ ದಾಳಿ ವೇಳೆ ಶಾಲೆಯಲ್ಲಿದ್ದ ವಿದ್ಯಾರ್ಥಿಗಳು ರಕ್ಷಿಸಿಕೊಳ್ಳಲು ತರಗತಿ ಕೊಠಡಿಗಳಲ್ಲಿ ಓಡಾಡಿದ್ದಾರೆ. ಬಳಿಕ ವಿದ್ಯಾರ್ಥಿಗಳನ್ನು ಹತ್ತಿರ ಫುಟ್ಬಾಲ್ ಕ್ರೀಡಾಂಗಣಕ್ಕೆ ಸ್ಥಳಾಂತರಿಸಲಾಗಿದೆ. ಇನ್ನು ಘಟನೆ ಬೆನ್ನಲ್ಲೇ ಪೋಷಕರು ತಮ್ಮ ಮಕ್ಕಳ ಸುರಕ್ಷತೆ ಖಚಿತಪಡಿಸಿಕೊಳ್ಳಲು ಸ್ಥಳಕ್ಕೆ ದೌಡಾಯಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುಂಡಿನ ದಾಳಿ ಮಾಡಿದ ವಿದ್ಯಾರ್ಥಿಯನ್ನು ತಕ್ಷಣವೇ ಶಾಲೆಯ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಶಂಕಿತ ವಿದ್ಯಾರ್ಥಿ ಗುಂಡಿನ ದಾಳಿಯಲ್ಲಿ ಬಳಸಿದ ಬಂದೂಕನ್ನು ಹೇಗೆ ಪಡೆದುಕೊಂಡನು ಮತ್ತು ಶಾಲೆಗೆ ಹೇಗೆ ಒಳ ನುಗ್ಗಿದ್ದಾನೆ ಎಂಬುದನ್ನು ತನಿಖೆ ಮಾಡಲಾಗುತ್ತಿದೆ. ದಾಳಿಗೆ ವಿದ್ಯಾರ್ಥಿ ಯಾವ ಬಂದೂಕು ಬಳಸಿದ್ದಾನೆ ಎಂಬುದನ್ನು ಅಧಿಕಾರಿಗಳು ಬಹಿರಂಗಪಡಿಸಿಲ್ಲ.
ಈ ಘಟನೆ ಕುರಿತು ಮಾಧ್ಯಮಗೋಷ್ಠಿಯಲ್ಲಿ ಮಾತನಾಡುವಾಗ ಬಾರೋ ಕೌಂಟಿ ಶೆರಿಫ್ ಜಡ್ ಸ್ಮಿತ್ ಕಣ್ಣೀರು ಹಾಕಿದರು. "ನನ್ನ ಹೃದಯವು ಈ ಮಕ್ಕಳಿಗಾಗಿ ಮಿಡಿಯುತ್ತದೆ. ನನ್ನ ಹೃದಯವು ನಮ್ಮ ಸಮುದಾಯಕ್ಕಾಗಿ ಮಿಡಿಯುತ್ತದೆ. ಆದರೆ ದ್ವೇಷವು ಮೇಲುಗೈ ಸಾಧಿಸುವುದಿಲ್ಲ ಎಂದು ನಾನು ಸ್ಪಷ್ಟವಾಗಿ ಇಲ್ಲಿ ಹೇಳಲು ಬಯಸುತ್ತೇನೆ. ಪ್ರೀತಿ ಮೇಲುಗೈ ಸಾಧಿಸುತ್ತದೆ ಎಂದು ಹೇಳಲು ಬಯಸುತ್ತೇನೆ" ಎಂದು ತಿಳಿಸಿದ್ದಾರೆ.
"ಶಾಲಾ ಆವರಣದಲ್ಲಿ ಗುಂಡಿನ ಶಬ್ದ ಕೇಳಿದಾದ ನಾನು ತರಗತಿಯಲ್ಲಿದ್ದೆ. ತಕ್ಷಣವೇ ಕೊಠಡಿಯ ಬಾಗಿಲುಗಳಿಗೆ ಡೆಸ್ಕ್ ಇಟ್ಟು ರಕ್ಷಿಸಿಕೊಳ್ಳಲು ಪ್ರಯತ್ನಿಸಿದೆವು. ತರಗತಿಯಲ್ಲಿದ್ದ ನನ್ನ ಎಲ್ಲ ಸಹಪಾಠಿಗಳು ಭಯಭೀತರಾಗಿದ್ದು ಒಬ್ಬರಿಗೊಬ್ಬರು ಕೈ ಹಿಡಿದುಕೊಂಡು ರಕ್ಷಣೆಗಾಗಿ ಪೊಲೀಸರಿಗಾಗಿ ಕಾಯುತ್ತಿದ್ದೆವು" ಎಂದು ವಿದ್ಯಾರ್ಥಿಯೊಬ್ಬರು ಘಟನೆಯನ್ನು ನೆನಪಿಸಿಕೊಂಡಿದ್ದಾರೆ.
Four people were killed and nine more were hospitalized with injuries after a shooting Wednesday morning at a high school in northern Georgia, authorities have confirmed.Georgia Bureau of Investigation Director Chris Hosey said at an afternoon news conference that two of the victims who were killed were students and two were teachers at Apalachee High School, located in Winder, Georgia.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm