ಬ್ರೇಕಿಂಗ್ ನ್ಯೂಸ್
09-12-20 06:25 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.9: ದೆಹಲಿ ಮತ್ತು ಹರ್ಯಾಣದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯನ್ನು ತೀವ್ರಗೊಳಿಸಲು ರೈತ ಸಂಘಟನೆಗಳು ನಿರ್ಧರಿಸಿವೆ. ನಿನ್ನೆ ರಾತ್ರಿ ಗೃಹ ಸಚಿವ ಅಮಿತ್ ಷಾ ಜೊತೆಗಿನ ಸಭೆಯ ಬಳಿಕ ಕೇಂದ್ರ ಸರಕಾರ ಮಸೂದೆಯಲ್ಲಿ ಕೆಲವು ಬದಲಾವಣೆಗಳನ್ನು ತರಲು ಸಿದ್ಧ ಇರುವುದಾಗಿ ಹೇಳಿ ಲಿಖಿತ ಪ್ರಸ್ತಾವನೆಯನ್ನು ರೈತ ಮುಖಂಡರಿಗೆ ನೀಡಿತ್ತು. ಆದರೆ, ಕೇಂದ್ರ ಸರಕಾರದ ಪ್ರಸ್ತಾವವನ್ನು ತಿರಸ್ಕರಿಸಿರುವ ರೈತ ಸಂಘಟನೆಗ ನಾಯಕರು ಡಿ.12 ಮತ್ತು 14ರಂದು ದೇಶವ್ಯಾಪಿ ರೈತರು ಧರಣಿ ನಡೆಸಲಿದ್ದಾರೆ ಎಂದು ಪ್ರಕಟಿಸಿದ್ದಾರೆ.

ಡಿ.12ರಂದು ದೆಹಲಿ ಘೆರಾವೋ ನಡೆಸಲಾಗುವುದು. ದೆಹಲಿ- ಜೈಪುರ್ ಮತ್ತು ದೆಹಲಿ – ಆಗ್ರಾ ನಡುವಿನ ಹೆದ್ದಾರಿಯನ್ನು ತಡೆದು ರಾಸ್ತಾ ರೋಕೊ ನಡೆಸಲಾಗುವುದು. ಅಲ್ಲದೆ, ದೇಶಾದ್ಯಂತ ಇರುವ ಟೋಲ್ ಗೇಟ್ ಗಳಲ್ಲಿ ಪ್ರತಿಭಟನೆ ನಡೆಸಿ, ಸುಂಕ ವಸೂಲಿ ಮಾಡದಂತೆ ತಡೆಯಲಾಗುವುದು. ವಾಹನಗಳನ್ನು ಮುಕ್ತವಾಗಿ ಸಂಚರಿಸುವಂತೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಮಂಗಳವಾರ ರಾತ್ರಿ 13 ರೈತ ಸಂಘಟನೆಗಳ ಪ್ರತಿನಿಧಿಗಳ ಜೊತೆಗೆ ಕೇಂದ್ರ ಗೃಹ ಸಚಿವರು ಸುದೀರ್ಘ ನಾಲ್ಕು ಗಂಟೆಗಳ ಕಾಲ ಮಾತುಕತೆ ನಡೆಸಿದ್ದರು. ಆದರೆ, ಬುಧವಾರ ಕೇಂದ್ರ ಸರಕಾರದ ಮುಂದಿಟ್ಟಿರುವ ಪ್ರಸ್ತಾವ ತಿರಸ್ಕರಿಸಿದ ಆಲ್ ಇಂಡಿಯಾ ಕಿಸಾನ್ ಸಂಘರ್ಷ್ ಕೋಆರ್ಡಿನೇಶನ್ ಕಮಿಟಿ (ಎಐಕೆಎಸ್ ಸಿಸಿ) ಮುಖಂಡರು, ಮೋದಿ ಸರಕಾರ ರೈತರ ಅಹವಾಲು ಕೇಳುವ ಬದಲು ವ್ಯತಿರಿಕ್ತವಾಗಿ ವರ್ತಿಸುತ್ತಿದೆ. ಎಲ್ಲ ರೈತ ಸಂಘಟನೆಗಳ ಪ್ರತಿನಿಧಿಗಳು ಸರಕಾರ ಇಟ್ಟಿರುವ ಹೊಸ ಮಾದರಿಯ ಹಳೆಯ ಪ್ರಸ್ತಾಪಗಳನ್ನು ತಿರಸ್ಕರಿಸಿದ್ದಾರೆ. ಪ್ರಸ್ತಾವಿತ ಮಸೂದೆಯನ್ನು ತಿರಸ್ಕರಿಸುವುದೇ ನಮ್ಮ ಬೇಡಿಕೆ ಎಂದಿದ್ದಾರೆ.

ಡಿ.12ರಂದು ದೇಶಾದ್ಯಂತ ಟಾಲ್ ಗೇಟ್ ಘೆರಾವೋ ನಡೆಸಲಾಗುವುದು. 14ರಂದು ಎಲ್ಲ ರಾಜ್ಯಗಳ ಪ್ರತೀ ಜಿಲ್ಲಾ ಕೇಂದ್ರಗಳಲ್ಲಿ ರೈತರು ಪ್ರತಿಭಟನಾ ಧರಣಿ ನಡೆಸಲಿದ್ದಾರೆ. ದೆಹಲಿ, ಪಂಜಾಬ್, ಮಧ್ಯಪ್ರದೇಶ, ಉತ್ತರ ಪ್ರದೇಶ, ರಾಜಸ್ಥಾನ, ಉತ್ತರಾಖಂಡ ರಾಜ್ಯಗಳ ರೈತರು ಒಂದು ದಿನದ ಮುಷ್ಕರ ನಡೆಸಲಿದ್ದಾರೆ. ಇದೇ ವೇಳೆ, ದೇಶದ ಎಲ್ಲ ರೈತರು ರಿಲಯನ್ಸ್ ಸಿಮ್ ಗಳನ್ನು ಬಾಯ್ಕಾಟ್ ಮಾಡಬೇಕು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದೇ ವೇಳೆ, ದೆಹಲಿ, ಹರ್ಯಾಣದಲ್ಲಿ ರೈತರ ಪ್ರತಿಭಟನೆ 14ನೇ ದಿನಕ್ಕೆ ಪ್ರವೇಶ ಮಾಡಿದೆ.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am