ಬ್ರೇಕಿಂಗ್ ನ್ಯೂಸ್
07-09-24 10:44 pm HK News Desk ದೇಶ - ವಿದೇಶ
ನವದೆಹಲಿ, ಸೆ.7: ಕೇಂದ್ರ ಸರ್ಕಾರವು ಐಎಎಸ್ ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್ ಅವರನ್ನ ತಕ್ಷಣದಿಂದಲೇ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಿದೆ.
ವಿಶೇಷಚೇತನ ಹಾಗೂ ಒಬಿಸಿ ಕೋಟಾ ದುರ್ಬಳಕೆ ಮಾಡಿದ್ದಾರೆಂಬ ಆರೋಪದಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ವಿರುದ್ಧ ಕೇಂದ್ರ ಲೋಕಸೇವಾ ಆಯೋಗ ಈ ಹಿಂದೆ ಎಫ್ಐಆರ್ ದಾಖಲಿಸಿತ್ತು. ಹಾಗಿದ್ದರೂ, ಪೂಜಾ ಯುಪಿಎಸ್ಸಿ ಅಧಿಕಾರಿಗಳಿಗೆ ಸವಾಲೊಡ್ಡುವ ಮಾತನ್ನಾಡಿದ್ದರು. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಪೂಜಾ ಅವರ ಆಯ್ಕೆಯನ್ನು ರದ್ದುಪಡಿಸಿ ಸೇವೆಯುಂದ ವಜಾ ಮಾಡಿದೆ.
ಉದ್ಯೋಗ ಭದ್ರತೆಗಾಗಿ ಪೂಜಾ ಖೇಡ್ಕರ್ ನಕಲಿ ದಾಖಲೆ, ಪ್ರಮಾಣ ಪತ್ರಗಳನ್ನ ಸಲ್ಲಿಸಿದ್ದಾರೆ. ಅಲ್ಲದೆ, ತಮ್ಮ ಖಾಸಗಿ ಆಡಿ ಕಾರಿಗೆ ರೆಡ್ಲೈಟ್ ಮತ್ತು ಮಹಾರಾಷ್ಟ್ರ ಸರ್ಕಾರದ ಲಾಂಛನ ಬಳಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಎಲ್ಲ ಕಾರಣಗಳಿಂದಾಗಿ ಮಹಾರಾಷ್ಟ್ರ ಸರ್ಕಾರ ಅವರ ತರಬೇತಿಯನ್ನು ತಡೆಹಿಡಿದಿತ್ತು. ಈ ಬಗ್ಗೆ ಯುಪಿಎಸ್ಸಿ ಕಡೆಯಿಂದ ವಿಚಾರಣೆಗೆ ಮಸ್ಸೂರಿಯಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರೀ ನ್ಯಾಷನಲ್ ಅಕಾಡೆಮಿಗೆ ಬರುವಂತೆ ಸೂಚಿಸಲಾಗಿತ್ತು. ವಿಚಾರಣೆ ಬಳಿಕ ಜು.19ರಂದು ಎಫ್ಐಆರ್ ದಾಖಲಿಸಿತ್ತು.
2023ನೇ ಸಾಲಿನ ಐಎಎಸ್ ಅಧಿಕಾರಿಯಾಗಿರುವ ಪೂಜಾ ಖೇಡ್ಕರ್ ಅವರು ಮಹಾರಾಷ್ಟ್ರದ ವಾಶೀಂ ಜಿಲ್ಲೆಯಲ್ಲಿ ಪ್ರೊಬೇಷನರಿಯಾಗಿ ನಿಯೋಜನೆಗೊಂಡಿದ್ದರು. ಕೇಂದ್ರ ಲೋಕಸೇವಾ ಆಯೋಗಕ್ಕೆ ಸಲ್ಲಿಸಿದ್ದ ವೈದ್ಯಕೀಯ ಪ್ರಮಾಣ ಪತ್ರದಲ್ಲಿ ತಾವು ಭಾಗಶಃ ಅಂಗವಿಕಲತೆ ಹೊಂದಿರುವುದಾಗಿ ಹೇಳಿಕೊಂಡಿದ್ದರು. ಈ ಮೂಲಕ ಅಂಗವೈಕಲ್ಯ ಕೋಟಾ ಬಳಸಿದ್ದರು. ಅಲ್ಲದೇ ಹಿಂದುಳಿದ ವರ್ಗಗಳ ಅಡಿಯಲ್ಲಿ ಮೀಸಲಾತಿ ಕೋಟಾವನ್ನೂ ದುರ್ಬಳಕೆ ಮಾಡಿದ್ದಾರೆ. ಜಾತಿ ಮತ್ತು ವೈದ್ಯಕೀಯ ಪ್ರಮಾಣ ಪತ್ರಗಳನ್ನು ನಕಲು ಮಾಡಿದ್ದಾರೆ ಎಂಬ ಆರೋಪ ಇತ್ತು.
The Department of Personnel and Training (DoPT) has discharged probationer Indian Administrative Service (IAS) officer Puja Khedkar from service, more than a month after her candidature was cancelled by the Union Public Service Commission (UPSC) and Delhi Police registered a criminal case against her.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:20 pm
HK News Desk
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
11-11-25 10:15 pm
Mangalore Correspondent
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm