ಬ್ರೇಕಿಂಗ್ ನ್ಯೂಸ್
07-09-24 10:44 pm HK News Desk ದೇಶ - ವಿದೇಶ
ನವದೆಹಲಿ, ಸೆ.7: ಕೇಂದ್ರ ಸರ್ಕಾರವು ಐಎಎಸ್ ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್ ಅವರನ್ನ ತಕ್ಷಣದಿಂದಲೇ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಿದೆ.
ವಿಶೇಷಚೇತನ ಹಾಗೂ ಒಬಿಸಿ ಕೋಟಾ ದುರ್ಬಳಕೆ ಮಾಡಿದ್ದಾರೆಂಬ ಆರೋಪದಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ವಿರುದ್ಧ ಕೇಂದ್ರ ಲೋಕಸೇವಾ ಆಯೋಗ ಈ ಹಿಂದೆ ಎಫ್ಐಆರ್ ದಾಖಲಿಸಿತ್ತು. ಹಾಗಿದ್ದರೂ, ಪೂಜಾ ಯುಪಿಎಸ್ಸಿ ಅಧಿಕಾರಿಗಳಿಗೆ ಸವಾಲೊಡ್ಡುವ ಮಾತನ್ನಾಡಿದ್ದರು. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಪೂಜಾ ಅವರ ಆಯ್ಕೆಯನ್ನು ರದ್ದುಪಡಿಸಿ ಸೇವೆಯುಂದ ವಜಾ ಮಾಡಿದೆ.
ಉದ್ಯೋಗ ಭದ್ರತೆಗಾಗಿ ಪೂಜಾ ಖೇಡ್ಕರ್ ನಕಲಿ ದಾಖಲೆ, ಪ್ರಮಾಣ ಪತ್ರಗಳನ್ನ ಸಲ್ಲಿಸಿದ್ದಾರೆ. ಅಲ್ಲದೆ, ತಮ್ಮ ಖಾಸಗಿ ಆಡಿ ಕಾರಿಗೆ ರೆಡ್ಲೈಟ್ ಮತ್ತು ಮಹಾರಾಷ್ಟ್ರ ಸರ್ಕಾರದ ಲಾಂಛನ ಬಳಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಎಲ್ಲ ಕಾರಣಗಳಿಂದಾಗಿ ಮಹಾರಾಷ್ಟ್ರ ಸರ್ಕಾರ ಅವರ ತರಬೇತಿಯನ್ನು ತಡೆಹಿಡಿದಿತ್ತು. ಈ ಬಗ್ಗೆ ಯುಪಿಎಸ್ಸಿ ಕಡೆಯಿಂದ ವಿಚಾರಣೆಗೆ ಮಸ್ಸೂರಿಯಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರೀ ನ್ಯಾಷನಲ್ ಅಕಾಡೆಮಿಗೆ ಬರುವಂತೆ ಸೂಚಿಸಲಾಗಿತ್ತು. ವಿಚಾರಣೆ ಬಳಿಕ ಜು.19ರಂದು ಎಫ್ಐಆರ್ ದಾಖಲಿಸಿತ್ತು.
2023ನೇ ಸಾಲಿನ ಐಎಎಸ್ ಅಧಿಕಾರಿಯಾಗಿರುವ ಪೂಜಾ ಖೇಡ್ಕರ್ ಅವರು ಮಹಾರಾಷ್ಟ್ರದ ವಾಶೀಂ ಜಿಲ್ಲೆಯಲ್ಲಿ ಪ್ರೊಬೇಷನರಿಯಾಗಿ ನಿಯೋಜನೆಗೊಂಡಿದ್ದರು. ಕೇಂದ್ರ ಲೋಕಸೇವಾ ಆಯೋಗಕ್ಕೆ ಸಲ್ಲಿಸಿದ್ದ ವೈದ್ಯಕೀಯ ಪ್ರಮಾಣ ಪತ್ರದಲ್ಲಿ ತಾವು ಭಾಗಶಃ ಅಂಗವಿಕಲತೆ ಹೊಂದಿರುವುದಾಗಿ ಹೇಳಿಕೊಂಡಿದ್ದರು. ಈ ಮೂಲಕ ಅಂಗವೈಕಲ್ಯ ಕೋಟಾ ಬಳಸಿದ್ದರು. ಅಲ್ಲದೇ ಹಿಂದುಳಿದ ವರ್ಗಗಳ ಅಡಿಯಲ್ಲಿ ಮೀಸಲಾತಿ ಕೋಟಾವನ್ನೂ ದುರ್ಬಳಕೆ ಮಾಡಿದ್ದಾರೆ. ಜಾತಿ ಮತ್ತು ವೈದ್ಯಕೀಯ ಪ್ರಮಾಣ ಪತ್ರಗಳನ್ನು ನಕಲು ಮಾಡಿದ್ದಾರೆ ಎಂಬ ಆರೋಪ ಇತ್ತು.
The Department of Personnel and Training (DoPT) has discharged probationer Indian Administrative Service (IAS) officer Puja Khedkar from service, more than a month after her candidature was cancelled by the Union Public Service Commission (UPSC) and Delhi Police registered a criminal case against her.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
15-09-26 10:31 am
HK News Staffer
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am