ಬ್ರೇಕಿಂಗ್ ನ್ಯೂಸ್
12-09-24 09:12 pm HK News Desk ದೇಶ - ವಿದೇಶ
ನವದೆಹಲಿ, ಸೆ.12: ಭಾರತೀಯ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್ವಾದ) ಪ್ರಧಾನ ಕಾರ್ಯದರ್ಶಿ ಹಾಗೂ ಹಿರಿಯ ನಾಯಕರಾದ ಸೀತಾರಾಂ ಯೆಚೂರಿ (72) ಅವರು ಅನಾರೋಗ್ಯದ ಬಳಿಕ ದೆಹಲಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಆಗಸ್ಟ್ 19ರಂದು ನ್ಯುಮೋನಿಯಾ, ಎದೆ ಸೋಂಕಿನ ಚಿಕಿತ್ಸೆಗಾಗಿ ಅವರನ್ನು ನವದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೆಂಟಿಲೇಟರ್ನಲ್ಲಿ ಇರಿಸಿದ್ದ ವೈದ್ಯರು, ಅವರ ಆರೋಗ್ಯದ ಮೇಲೆ ತೀವ್ರ ನಿಗಾ ವಹಿಸಿದ್ದರು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.
40 ವರ್ಷಗಳಿಂದ ದೇಶದ ರಾಜಕೀಯದಲ್ಲಿ ಗುರುತಿಸಿಕೊಂಡಿದ್ದ ಅವರು, 32 ವರ್ಷಗಳಿಂದ ಸಿಪಿಎಂ ಕೇಂದ್ರೀಯ ಸಮಿತಿ ಪಾಲಿಟ್ ಬ್ಯೂರೊ ಸದಸ್ಯರಾಗಿದ್ದರು. 2015ರಿಂದ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದರು. 2005-2017ರ ವರೆಗೆ ಪಶ್ಚಿಮ ಬಂಗಾಳದಿಂದ ರಾಜ್ಯಸಭಾ ಸದಸ್ಯರಾಗಿಯೂ ಆಯ್ಕೆಗೊಂಡಿದ್ದರು.
1952ರ ಆಗಸ್ಟ್ 12ರಂದು ಚೆನ್ನೈನಲ್ಲಿ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದ ಅವರ ಮೂಲ ಹೆಸರು, ಯೆಚೂರಿ ಸೀತಾರಾಮ ರಾವ್. ಸಿಪಿಎಂನ ಮೊದಲ ಪ್ರಧಾನ ಕಾರ್ಯದರ್ಶಿ ಪಿ. ಸುಂದರಯ್ಯ (ಸುಂದರ ರಾಮ ರೆಡ್ಡಿ) ಅವರಿಂದ ಪ್ರಭಾವಿತರಾಗಿ, ತಮ್ಮ ಹೆಸರಿನಲ್ಲಿದ್ದ ಜಾತಿ ಸೂಚಕ ನಾಮವನ್ನು ತೆಗೆದು ಸೀತಾರಾಂ ಯೆಚೂರಿ ಎಂದು ಬದಲಿಸಿದ್ದರು. ಕಮ್ಯುನಿಸ್ಟ್ ತತ್ವಗಳ ವಿಚಾರದಲ್ಲಿ ಅವರು ನಿಷ್ಠುರವಾದಿಯಾಗಿದ್ದರು.
Veteran Left leader and CPM general secretary Sitaram Yechury died this afternoon. He was 72 and was undergoing treatment for pneumonia at Delhi's All India Institute of Medical Sciences (AIIMS). The CPM leader was admitted to the emergency ward of AIIMS on August 19 and later shifted to the Intensive Care Unit (ICU).
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm