ಬ್ರೇಕಿಂಗ್ ನ್ಯೂಸ್
08-08-20 07:46 am Headline Karnataka News Network ದೇಶ - ವಿದೇಶ
ಕೋಳಿಕ್ಕೋಡ್, ಆಗಸ್ಟ್ 8: ಶುಕ್ರವಾರ ರಾತ್ರಿ ದುಬೈನಿಂದ ಕೋಳಿಕ್ಕೋಡ್ಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ವಿಮಾನ ಪತನಗೊಂಡಿದ್ದು, ಸುಮಾರು 18 ಜನರು ಮೃತಪಟ್ಟಿರುವುದಾಗಿ ಅಧಿಕಾರಿಗಳು ವರದಿ ನೀಡಿದ್ದಾರೆ.
ಮೃತಪಟ್ಟ 18 ಜನರ ಪೈಕಿ ಓರ್ವ ವ್ಯಕ್ತಿಗೆ ಕೊರೊನಾ ವೈರಸ್ ಪಾಸಿಟಿವ್ ಇತ್ತು ಎನ್ನುವುದು ಬೆಳಕಿಗೆ ಬಂದಿದೆ. ಈ ವಿಚಾರವನ್ನು ಕೇರಳ ಸಚಿವ ಕೆಟಿ ಜಲೀಲ್ ಹೇಳಿದ್ದಾರೆ.
ಈ ಹಿನ್ನೆಲೆ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ದುರಂತದ ರಕ್ಷಣಾ ಕಾರ್ಯಾಚರಣೆಯಲ್ಲಿ ಬದುಕಿಳಿದವರೆಲ್ಲರೂ ಕ್ವಾರಂಟೈನ್ಗೆ ಹೋಗಬೇಕು. ಮತ್ತು ಎಲ್ಲರಿಗೂ ಕೊರೊನಾ ಪರೀಕ್ಷೆ ಕಡ್ಡಾಯ ಎಂದು ಕೇರಳ ಆರೋಗ್ಯ ಸಚಿವೆ ಶೈಲಜಾ ಟೀಚರ್ ಹೇಳಿದ್ದಾರೆ.
ಇಬ್ಬರು ಪೈಲೆಟ್ ಹಾಗೂ ನಾಲ್ಕು ಸಿಬ್ಬಂದಿ ಒಟ್ಟು 190 ಪ್ರಯಾಣಿಕರು ಈ ವಿಮಾನದಲ್ಲಿ ಪ್ರಯಾಣ ಮಾಡುತ್ತಿದ್ದರು. ಗಾಯಗೊಂಡ 149 ಪ್ರಯಾಣಿಕರನ್ನು ಮಲಪ್ಪುರಂ ಮತ್ತು ಕೋಳಿಕ್ಕಡ್ ಜಿಲ್ಲೆಗಳ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ. ಅದರಲ್ಲಿ 22 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಪ್ರಥಮ ಚಿಕಿತ್ಸಾ ನಂತರ 22 ಜನರನ್ನು ಬಿಡುಗಡೆ ಮಾಡಲಾಗಿದೆ.
ಕೇರಳ ಗವರ್ನರ್, ಆರಿಫ್ ಮೊಹಮ್ಮದ್ ಖಾನ್ ಇಂದು ಬೆಳಗ್ಗೆ ಕೋಳಿಕ್ಕಡ್ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೊರೊನಾ ಲಾಕ್ಡೌನ್ ಆದ ಹಿನ್ನೆಲೆ ಭಾರತಕ್ಕೆ ಬರಲಾಗದೆ ದುಬೈನಲ್ಲಿ ಉಳಿದುಕೊಂಡಿದ್ದವರನ್ನು ವಂದೇ ಭಾರತ್ ಮಿಷನ್ ಅಡಿಯಲ್ಲಿ ವಾಪಸ್ ಕರೆತರಲಾಗುತ್ತಿತ್ತು. ದುರಾದೃಷ್ಟವಶಾತ್ ಲ್ಯಾಂಡಿಂಗ್ ವೇಳೆ ಅನಾಹುತ ಸಂಭವಿಸಿದೆ.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
18-08-26 02:42 pm
HK News Staffer
ನಿತಿನ್ ನಬಿನ್ ಸಾರಥ್ಯದಲ್ಲಿ ಬಿಜೆಪಿಗೆ ಹೊಸ ಟೀಮ್ ;...
17-08-26 09:45 pm
ಪ್ರಧಾನಿ ‘ದಿಮಾಗಿ ನಕ್ಸಲರು’ ಹೇಳಿಕೆಗೆ ರಿಜಿಜು ಅರ್ಥ...
17-08-26 05:38 pm
ನೀಟ್ ಪರೀಕ್ಷೆ ರದ್ದುಗೊಳಿಸಲು ತಮಿಳುನಾಡು ವಿಧಾನಸಭೆಯ...
11-08-26 10:25 pm
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
17-08-26 05:07 pm
HK News Staffer
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
18-08-26 10:06 pm
HK News Staffer
ಮೊಬೈಲ್ ಗೀಳು ಬೇಡ ಎಂದಿದ್ದ ಅಜ್ಜನನ್ನೇ ಕೊಲ್ಲಿಸಿದ 1...
18-08-26 06:02 pm
ಚಿಕ್ಕಬಾಣಾವರ ತಂದೆ, ಮಗು ಸಾವಿಗೆ ರೋಚಕ ಟ್ವಿಸ್ಟ್ ;...
18-08-26 03:00 pm
ಬೆಳಗಾವಿಯಲ್ಲಿ ಬೀದಿ ನಾಯಿಗಳ ಅಟ್ಟಹಾಸ ; ವೃದ್ಧನ ಮೇಲ...
17-08-26 10:04 pm
ದಾಂಡೇಲಿ ವೈಲ್ಡರ್ ನೆಸ್ಟ್ ರೆಸಾರ್ಟ್ಗೆ ನುಗ್ಗಿದ ಬ್...
17-08-26 10:02 pm