ಬ್ರೇಕಿಂಗ್ ನ್ಯೂಸ್
21-09-24 08:05 pm HK News Desk ದೇಶ - ವಿದೇಶ
ಅಂಕೋಲಾ, ಸೆ.21: ಶಿರೂರು ಭೂಕುಸಿತದ ಬಳಿಕ ಗಂಗಾವಳಿ ನದಿಯಾಳದಲ್ಲಿ ನಾಪತ್ತೆಯಾಗಿದ್ದ ಕೇರಳದ ಅರ್ಜುನ್ ಚಲಾಯಿಸುತ್ತಿದ್ದ ಟ್ರಕ್ ಕೊನೆಗೂ ಮಣ್ಣಿನಡಿಯಲ್ಲಿ ಪತ್ತೆಯಾಗಿದೆ.
ಜುಲೈ 16 ರಂದು ಭೂ ಕುಸಿತ ಸಂಭವಿಸಿದ ಬಳಿಕ ಕೇರಳದ ಅರ್ಜುನ್ ಚಲಾಯಿಸುತ್ತಿದ್ದ ಟ್ರಕ್ ಗಂಗಾವಳಿ ನದಿಗೆ ಬಿದ್ದಿತ್ತು. ನದಿಯಲ್ಲಿ ನೀರಿನ ಪ್ರಮಾಣ ಜಾಸ್ತಿ ಇದ್ದ ಕಾರಣ ಟ್ರಕ್ ಪತ್ತೆ ಮಾಡಲು ಕಷ್ಟವಾಗಿತ್ತು. ಮುಳುಗು ತಜ್ಞ ಈಶ್ವರ ಮಲ್ಪೆ ಅವರು ಟ್ರಕ್ ಪತ್ತೆಗೆ ನಿರಂತರ ಪ್ರಯತ್ನ ನಡೆಸುತ್ತಿದ್ದರು.
ಟ್ರಕ್ ಗುಡ್ಡ ಕುಸಿತಗೊಂಡ ಜಾಗದ ಬಳಿಯೇ ನದಿಯಾಳದಲ್ಲಿ ಸಿಕ್ಕಿ ಬಿದ್ದಿದೆ. ಟ್ರಕ್ ಮೇಲೆ ಸಾಕಷ್ಟು ಕಲ್ಲು ಮತ್ತು ಮಣ್ಣು ಬಿದ್ದಿದೆ. ಹೀಗಾಗಿ ಅವುಗಳನ್ನು ತೆಗೆದು ಟ್ರಕ್ ಮೇಲಕ್ಕೆ ಎತ್ತಲು ಸಿದ್ಧತೆ ನಡೆಯುತ್ತಿದೆ.
ಜುಲೈ 16 ರಂದು ಭೂಕುಸಿತ ಸಂಭವಿಸಿದಾಗ ಕೇರಳ ಮೂಲದ ಅರ್ಜುನ್ ಜೋಯಿಡಾದಿಂದ ಮರ ತುಂಬಿಸಿಕೊಂಡು ಟ್ರಕ್ನಲ್ಲಿ ಕೋಝಿಕ್ಕೋಡ್ ಕಡೆಗೆ ತೆರಳುತ್ತಿದ್ದರು. ಶಿರೂರು ಗುಡ್ಡದ ಬಳಿ ನಿಲ್ಲಿಸಿದ್ದಾಗಲೇ ಲಾರಿ ಸಮೇತ ಗುಡ್ಡದ ಜೊತೆಗೆ ಕುಸಿದು ಬಿದ್ದಿತ್ತು. ಆನಂತರ ಕೇರಳದ ಶಾಸಕರು, ಎನ್ ಡಿಆರ್ ಎಫ್, ನೌಕಾಪಡೆ ಸಿಬಂದಿ ಬಂದು ಕಾರ್ಯಾಚರಣೆ ನಡೆಸಿದರೂ, ಚಾಲಕ ಅರ್ಜುನ್ ಮತ್ತು ಆತನ ಲಾರಿ ಪತ್ತೆಯಾಗಿರಲಿಲ್ಲ. ಭಾರೀ ಮಳೆ ಮತ್ತು ನದಿಯಲ್ಲಿ ಹೆಚ್ಚಿದ್ದ ನೀರಿನಿಂದಾಗಿ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು. ಶುಕ್ರವಾರದಿಂದ ಗೋವಾದಿಂದ ದೊಡ್ಡ ಬಾರ್ಜ್ ತರಿಸಿ ಮಣ್ಣು ತೆರವು ಕಾರ್ಯ ಆರಂಭಿಸಲಾಗಿತ್ತು.
The truck of Kerala lorry driver Arjun who went missing following a landslide at Shirur village in Uttara Kannada district was discovered on Saturday, September 21 afternoon.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm