ಬ್ರೇಕಿಂಗ್ ನ್ಯೂಸ್
23-09-24 07:01 pm HK News Desk ದೇಶ - ವಿದೇಶ
ಹೈದರಾಬಾದ್, ಸೆ.23: ತಿರುಪತಿ ಲಡ್ಡು ಪ್ರಾಣಿಜನ್ಯ ಕೊಬ್ಬಿನ ಕಾರಣಕ್ಕೆ ವಿವಾದಕ್ಕೀಡಾಗಿರುವಾಗಲೇ ತಿರುಪತಿ ಲಡ್ಡಿನಲ್ಲಿ ಗುಟ್ಕಾ ಪ್ಯಾಕೆಟ್ ಪತ್ತೆಯಾದ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯಲ್ಲಿ ನಡೆದಿದೆ.
ಖಮ್ಮಂ ಜಿಲ್ಲೆಯ ಗ್ರಾಮಾಂತರ ಮಂಡಲ ವ್ಯಾಪ್ತಿಯ ಗೊಲ್ಲಗುಡೆಂ ಪಂಚಾಯತ್ ಕಾರ್ತಿಕೇಯ ಟೌನ್ಶಿಪ್ನ ನಿವಾಸಿ ಪದ್ಮಾವತಿ ಎಂಬವರು ಸೆಪ್ಟೆಂಬರ್ 19 ರಂದು ತಿರುಮಲ ತಿರುಪತಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದರು. ಹಿಂತಿರುಗುವಾಗ ತನ್ನ ಸಂಬಂಧಿಕರಿಗೆ ಹಂಚಿಕೊಳ್ಳಲು ಶ್ರೀವಾರಿ ಲಡ್ಡು ಪ್ರಸಾದವನ್ನು ತಂದಿದ್ದರು. ಭಾನುವಾರ (ಸೆಪ್ಟೆಂಬರ್ 22) ಪ್ರಸಾದ ಹಂಚಲು ಲಡ್ಡು ತೆಗೆದು ನೋಡಿದಾಗ ಅದರಲ್ಲಿ ಗುಟ್ಕಾ ಪ್ಯಾಕೆಟ್ ಪತ್ತೆಯಾಗಿದೆ.
ಲಡ್ಡುವಿನಲ್ಲಿ ಗೋಡಂಬಿ, ಒಣ ದ್ರಾಕ್ಷಿ, ಬಾದಾಮಿ ಜೊತೆಗೆ ಗುಟ್ಕಾ ಪ್ಯಾಕೆಟ್ ಕೂಡ ಇರುವುದು ಆಶ್ಚರ್ಯವಾಗಿದೆ. ವಿಷಯವನ್ನು ಕುಟುಂಬಸ್ಥರಿಗೆ ತಿಳಿಸಿ, ಅದರ ಫೋಟೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಹೀಗೆ ತಿರುಪತಿ ಲಡ್ಡುವಿನಲ್ಲಿ ಗುಟ್ಕಾ ಪ್ಯಾಕೆಟ್ ಸಿಕ್ಕಿರುವುದು ಇದೇ ಮೊದಲಲ್ಲ. 2012ರಲ್ಲೂ ತಿರುಪತಿ ಲಡ್ಡುವಿನಲ್ಲಿ ಗುಟ್ಕಾ ಪ್ಯಾಕೆಟ್ ಕಾಣಿಸಿಕೊಂಡಿತ್ತು.
ಈಗಾಗಲೇ ಲಡ್ಡು ತಯಾರಿಕೆಯಲ್ಲಿ ಬಳಸುವ ತುಪ್ಪದಲ್ಲಿ ಕಲಬೆರಕೆ ಆಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ಈ ನಡುವೆ ಗುಟ್ಕಾ ಪ್ಯಾಕೆಟ್ ಕಾಣಿಸಿಕೊಂಡಿರುವುದು ಮತ್ತೆ ಕಳಪೆ ಗುಣಮಟ್ಟದ ಲಡ್ಡು ತಯಾರಿ ಚರ್ಚೆಗೆ ಗ್ರಾಸವಾಗಿದೆ.
A devotee from Gollagudem, Khammam district, Donthu Padmavathi, has levelled an allegation that she found a piece of a gutka packet and traces of tobacco in a laddu prasadam that she had brought from Tirumala. Padmavathi, a resident of Karteekeya Township in Khammam Rural mandal, said she had visited Tirumala on September 19 for darshan of Lord Venkateshwara Swamy.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
15-09-26 10:31 am
HK News Staffer
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am