ಬ್ರೇಕಿಂಗ್ ನ್ಯೂಸ್
30-09-24 11:03 pm HK News Desk ದೇಶ - ವಿದೇಶ
ಅಹಮದಾಬಾದ್, ಸೆ 30: ಬಾಲಿವುಡ್ನ ಹಿರಿಯ ನಟ ಅನುಪಮ್ ಖೇರ್ ಅವರ ಫೋಟೋ ಉಪಯೋಗಿಸಿಕೊಂಡು ಗುಜರಾತ್ನ ಅಹಮದಾಬಾದ್ನ ಚಿನ್ನದ ವ್ಯಾಪಾರಿಗೆ ಇಬ್ಬರು 1.30 ಕೋಟಿ ಉಂಡೆನಾಮ ತಿಕ್ಕಿದ್ದಾರೆ.
ಹೌದು, ಕೇಳಲು ಇದು ವಿಚಿತ್ರವಾದರೂ ಸತ್ಯ. ಅಹಮದಾಬಾದ್ನ ಮಾಣಿಕ್ ಚೌಕ್ನ ಚಿನ್ನದ ವ್ಯಾಪಾರಿ ಮೆಹುಲ್ ಠಕ್ಕರ್ ಅವರ ಬಳಿ ಎರಡು ಕೆಜಿ ಚಿನ್ನ ಖರೀದಿಗೆ ಖತರ್ನಾಕ್ ಕಳ್ಳರಿಬ್ಬರು 1.60 ಕೋಟಿಗೆ ಒಪ್ಪಂದ ಮಾಡಿಕೊಂಡಿದ್ದರು. ಅದ್ರಂತೆ ಮೊದಲ ಕಂತಿನಲ್ಲಿ 1.30 ಕೋಟಿ ಎರಡನೇ ಕಂತಿನಲ್ಲಿ 30 ಲಕ್ಷ ಕೊಡುವುದಾಗಿ ಹೇಳಿದ್ದರು. ಆ ನಂತರ ಕೊಟ್ಟಿರುವ ಮಾತಿನಂತೆ 1.30 ಕೋಟಿ ಹಣ ನೀಡಲು ಬ್ಯಾಗ್ ಸಮೇತ ಬಂದಿದ್ದರು. ಆದರೆ, ಆ ಬ್ಯಾಗ್ ನಲ್ಲಿ ಅಸಲಿ ಹಣವನ್ನು ಇಡದ ಇಬ್ಬರು ಮೆಹುಲ್ ಠಕ್ಕರ್ ಅವರನ್ನು ನಂಬಿಸಲು 500 ರೂಪಾಯಿ ಮುಖಬೆಲೆಯ ನಕಲಿ ನೋಟುಗಳ ಮೇಲೆ ಕೆಲ ಅಸಲಿ ನೋಟುಗಳನ್ನು ಇಟ್ಟಿದ್ದರು. ಆ ನಂತರ ಮೆಹುಲ್ ಠಕ್ಕರ್ ಅವರ ನಂಬಿಕೆಯನ್ನು ಗಳಿಸಿದ ಇಬ್ಬರು, ಇನ್ನೊಂದು ಅಂಗಡಿಯಲ್ಲಿ ಚಿನ್ನ ಖರೀದಿಸಬೇಕಿದೆ ಎಂದು ಕಾಲ್ಕಿತ್ತರು.

ಹೀಗೆ ಹಣ ಸಿಕ್ಕ ಖುಷಿಯಲ್ಲಿ ಯಂತ್ರದ ಸಹಾಯದಿಂದ ಹಣ ಎಣಿಸಲು ಮೆಹುಲ್ ಠಕ್ಕರ್ ಮತ್ತು ಅಂಗಡಿಯಲ್ಲಿ ಕೆಲಸ ಮಾಡುವ ಉದ್ಯೋಗಿ ಭರತ್ ಜೋಶಿ ಮುಂದಾಗಿದ್ದಾರೆ. 26 ಕಟ್ಟುಗಳಿದ್ದ 500 ರೂಪಾಯಿಯಲ್ಲಿ ಮಹಾತ್ಮಾ ಗಾಂಧೀಜಿಯ ಬದಲು ಅನುಪಮ್ ಖೇರ್ ಫೋಟೋ ಕಂಡು ಬೆಚ್ಚಿ ಬಿದ್ದಿದ್ದಾರೆ. ಅಹಮದಾಬಾದ್ನ ನವರಂಗ್ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸೆಪ್ಟೆಂಬರ್ 24ರಂದು ಈ ವಂಚನೆ ನಡೆದಿದ್ದು ಸದ್ಯ ಮೆಹುಲ್ ಠಕ್ಕರ್ ಅವರ ಅಂಗಡಿಯ ಬಳಿ ಇರುವ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಇಬ್ಬರು ಆರೋಪಿಗಳನ್ನು ಗುರುತಿಸಿದ್ದಾರೆ. ಬಂಧನಕ್ಕೆ ಬೆಲೆ ಬೀಸಿದ್ದಾರೆ.
ಸದ್ಯಕ್ಕೆ ಅನುಪಮ್ ಖೇರ್ ಫೋಟೋ ಇರುವ 500 ರೂಪಾಯಿ ಮುಖಬೆಲೆಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಟ್ರೋಲಿಗರಿಗೆ ಆಹಾರವೂ ಆಗಿದೆ. ಇನ್ನೂ ಮಹಾತ್ಮಾ ಗಾಂಧಿ ಅವರ ಬದಲು ತಮ್ಮ ಭಾವಚಿತ್ರವನ್ನು 500 ರೂಪಾಯಿ ಮೇಲಿರುವುದನ್ನು ನೋಡಿರುವ ಅನುಪಮ್ ಖೇರ್, ತಮ್ಮ ಸೋಶಿಯಲ್ ಮೀಡಿಯಾ ಪೇಜ್ನಲ್ಲಿ ಈ ಪ್ರಕರಣದ ಕುರಿತು ಬರೆದುಕೊಂಡಿದ್ಧಾರೆ.ಇದೊಳ್ಳೆ ಕಥೆ ಐನೂರು ರೂಪಾಯಿ ಫೋಟೊ ಮೇಲೆ ಗಾಂಧೀಜಿಯ ಬದಲು ನನ್ನ ಫೋಟೊ, ಇಲ್ಲಿ ಏನ್ ಬೇಕಾದರೂ ಆಗಬಹುದು ಎಂದಿದ್ದಾರೆ. ಟಿವಿ9 ಗುಜರಾತ್ ನ ವರದಿಯನ್ನೂ ಕೂಡ ಅನುಪಮ್ ಖೇರ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
Actor Anupam Kher expressed shock after an Ahmedabad trader was duped with fake ₹500 notes which featured the photo of the actor instead of Mahatma Gandhi.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm