ಬ್ರೇಕಿಂಗ್ ನ್ಯೂಸ್
11-10-24 03:35 pm HK News Desk ದೇಶ - ವಿದೇಶ
ನವದೆಹಲಿ, ಅ.11: ಟಾಟಾ ಗ್ರೂಪ್ ಹೊಸ ಅಧ್ಯಕ್ಷರಾಗಿ ರತನ್ ಟಾಟಾ ಅವರ ಮಲ ಸಹೋದರ ನೋಯೆಲ್ ಟಾಟಾ ಅವರನ್ನು ನೇಮಕ ಮಾಡಲಾಗಿದೆ. ಶುಕ್ರವಾರ ನಡೆದ ಟಾಟಾ ಟ್ರಸ್ಟ್ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ನೋಯೆಲ್ ಟಾಟಾ ಅವರು ರತನ್ ಟಾಟಾ ಅವರ ಮಲ ಸಹೋದರ. ಟಾಟಾ ಟ್ರಸ್ಟ್ ತುರ್ತಾಗಿ ಎರಡು ಸಭೆಗಳನ್ನು ನಡೆಸಿದ್ದು, ಒಂದು ಸಭೆಯಲ್ಲಿ ರತನ್ ಟಾಟಾ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಗಿದ್ದರೆ, ಮತ್ತೊಂದರಲ್ಲಿ ಟಾಟಾ ಟ್ರಸ್ಟ್ ಹೊಸ ಅಧ್ಯಕ್ಷರ ನೇಮಕಾತಿ ವಿಚಾರ ಚರ್ಚೆ ನಡೆದು ನೋಯೆಲ್ ಟಾಟಾ ಹೆಸರು ಅಂತಿಮಗೊಳಿಸಲಾಗಿದೆ.
ನೋಯೆಲ್ ಟಾಟಾ ಅವರು ರತನ್ ಟಾಟಾ ಅವರ ತಂದೆ ನವಾಲ್ ಟಾಟಾ ಅವರ ಎರಡನೇ ಪತ್ನಿ ಸಿಮೋನ್ ಟಾಟಾ ಅವರ ಪುತ್ರ. ಈಗಾಗಲೇ ನೋಯೆಲ್ ಟಾಟಾ ಅವರು ದೊರಾಬ್ಜಿ ಮತ್ತು ರತನ್ ಟಾಟಾ ಟ್ರಸ್ಟ್ಗಳಲ್ಲಿ ಟ್ರಸ್ಟಿ ಆಗಿದ್ದರು. ಈ ಎರಡು ಟ್ರಸ್ಟ್ಗಳು ಟಾಟಾ ಸನ್ಸ್ನಲ್ಲಿ 66% ಪಾಲನ್ನು ಹೊಂದಿವೆ.
ಟಾಟಾ ಟ್ರಸ್ಟ್ ಚೇರ್ಮನ್ ಪಟ್ಟಕ್ಕೆ ಹಲವರ ಹೆಸರು ಚಾಲ್ತಿಯಲ್ಲಿತ್ತು. ನೋಯೆಲ್ ಟಾಟಾ ಅವರ ಹೊರತಾಗಿ ಮೆಹಲಿ ಮಿಸ್ತ್ರಿ ಅವರ ಹೆಸರು ಮುಂಚೂಣಿಯಲ್ಲಿತ್ತು. ಮೆಹಲಿ ಮಿಸ್ತ್ರಿ ಅವರು ರತನ್ ಟಾಟಾ ಆಪ್ತರೆಂದು ನಂಬಲಾಗಿದೆ. 2000ನೇ ಇಸವಿಯಿಂದಲೂ ಎರಡೂ ಟಾಟಾ ಟ್ರಸ್ಟ್ಗಳಲ್ಲಿ ಮಿಸ್ತ್ರಿ ಸಕ್ರಿಯರಾಗಿದ್ದರು. 2022ರ ಅಕ್ಟೋಬರ್ನಲ್ಲಿ ಅವರನ್ನು ಟ್ರಸ್ಟಿ ಎಂದು ಸೇರ್ಪಡೆಗೊಳಿಸಲಾಗಿದೆ.
ನೋಯೆಲ್ ಟಾಟಾ ಅವರು ಕಳೆದ 40 ವರ್ಷಗಳಿಂದ ಟಾಟಾ ಸಮೂಹದ ಭಾಗವಾಗಿದ್ದಾರೆ. ಅವರು ಟ್ರೆಂಟ್ನಂತಹ ಅನೇಕ ದೊಡ್ಡ ಕಂಪನಿಗಳನ್ನು ಮುನ್ನಡೆಸಿದ್ದಾರೆ. ಪ್ರಸ್ತುತ, ಟಾಟಾ ಗ್ರೂಪ್ ಕಂಪನಿಗಳ ಮಂಡಳಿಯ ಸದಸ್ಯರಾಗಿದ್ದಾರೆ. ಪ್ರಸ್ತುತ ಟಾಟಾ ಸ್ಟೀಲ್ ಮತ್ತು ಟೈಟಾನ್ ಕಂಪನಿ ಲಿಮಿಟೆಡ್ನಲ್ಲಿ ಉಪಾಧ್ಯಕ್ಷ.
ನೋಯೆಲ್ ಟಾಟಾ ಅವರು ಆಗಸ್ಟ್ 2010 ರಿಂದ ನವೆಂಬರ್ 2021ರ ವರೆಗೆ ಟ್ರೆಂಟ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಅವರ ನಾಯಕತ್ವದಲ್ಲಿ, ಟ್ರೆಂಟ್ನ ವಹಿವಾಟು 500 ಮಿಲಿಯನ್ ಡಾಲರ್ನಿಂದ 3 ಬಿಲಿಯನ್ ಡಾಲರ್ಗೆ ಏರಿತ್ತು. ನೋಯೆಲ್ ಟಾಟಾ ಅವರು ಸಸೆಕ್ಸ್ ವಿಶ್ವವಿದ್ಯಾಲಯದಿಂದ ಪದವಿ ಪಡೆದಿದ್ದಾರೆ.
Noel Tata, the half-brother of Ratan Tata, has been appointed Chairman of Tata Trust, following a board meeting held in Mumbai today. Noel succeeds Ratan Tata who died at the age of 86 in a Mumbai hospital on Wednesday.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm