ಬ್ರೇಕಿಂಗ್ ನ್ಯೂಸ್
11-10-24 06:23 pm HK News Desk ದೇಶ - ವಿದೇಶ
ನವದೆಹಲಿ, ಅ.11: ಅಖಂಡ ಭಾರತದ 51 ಶಕ್ತಿಪೀಠಗಳಲ್ಲಿ ಒಂದೆನಿಸಿರುವ ಬಾಂಗ್ಲಾದೇಶದ ಜೆಹೋರೇಶ್ವರಿ ದೇವಿ ದೇವಸ್ಥಾನಕ್ಕೆ ಪ್ರಧಾನಿ ನರೇಂದ್ರ ಮೋದಿ ದಾನ ನೀಡಿದ್ದ ಸ್ವರ್ಣ ಕಿರೀಟವನ್ನು ಕಳ್ಳರು ಕದ್ದೊಯ್ದಿದ್ದಾರೆ. 2021ರಲ್ಲಿ ಬಾಂಗ್ಲಾಕ್ಕೆ ಭೇಟಿ ನೀಡಿದ್ದ ಪ್ರಧಾನಿ ಮೋದಿ, ಸಕ್ತಿರಾ ಪ್ರದೇಶದ ಕಾಳಿ ದೇವಿಗೆ ಸ್ವರ್ಣ ಕಿರೀಟ ಅರ್ಪಿಸಿ ಪೂಜೆಗೈದಿದ್ದರು.
ಗುರುವಾರ ಮಧ್ಯಾಹ್ನ ಕಾಳಿ ದೇವಿಯ ಮುಕುಟದಲ್ಲಿದ್ದ ಕಿರೀಟವನ್ನು ಕಿಡಿಗೇಡಿಗಳು ಕಳವು ಮಾಡಿದ್ದಾರೆ. ಅರ್ಚಕ ದಿಲೀಪ್ ಮುಖರ್ಜಿ ಮಧ್ಯಾಹ್ನ ಪೂಜೆ ಮಾಡಿ ಹಿಂತಿರುಗಿದ್ದರು. ಸಂಜೆಯ ವೇಳೆಗೆ ಸ್ವಚ್ಛ ಮಾಡುವುದಕ್ಕಾಗಿ ಸಿಬಂದಿ ಆಗಮಿಸಿದ್ದಾಗ ವಿಗ್ರಹದಲ್ಲಿದ್ದ ಕಿರೀಟ ನಾಪತ್ತೆಯಾಗಿತ್ತು. ಪೊಲೀಸರು ತನಿಖೆ ನಡೆಸಿದಾಗ, ಸಿಸಿಟಿವಿಯಲ್ಲಿ ಕಳ್ಳನೊಬ್ಬ ಕಿರೀಟ ಕಳವು ಮಾಡಿರುವುದು ಪತ್ತೆಯಾಗಿದೆ. ಭಾರತೀಯ ಹೈಕಮಿಶನ್, ಘಟನೆ ಬಗ್ಗೆ ತನಿಖೆ ನಡೆಸಲು ಒತ್ತಾಯ ಮಾಡಿದೆ.
)
ಭಾರತ, ಪಾಕಿಸ್ತಾನ, ಬಾಂಗ್ಲಾದೇಶದಲ್ಲಿ ದೇವಿಯರ 51 ಶಕ್ತಿಪೀಠಗಳು ಹರಡಿಕೊಂಡಿದ್ದು, ಅದರಲ್ಲಿ ಒಂದೆನಿಸಿರುವ ಜೆಹೋರೇಶ್ವರಿ ದೇವಿ ದೇವಸ್ಥಾನಕ್ಕೆ ಭಾರೀ ಮಹತ್ವ ಇದೆ. ದೇವಿ ಕಾಳಿಯಾಗಿ ಇಲ್ಲಿ ಪೂಜಿಸಲ್ಪಡುತ್ತಾಳೆ. ನವರಾತ್ರಿ ಸಂದರ್ಭದಲ್ಲಿ ದುರ್ಗೆಯಾಗಿ ಪೂಜಿಸಲ್ಪಡುತ್ತಿದ್ದು, ಹಬ್ಬದ ಹೊತ್ತಲ್ಲಿಯೇ ದೇವಿಯ ಕಿರೀಟವನ್ನು ಕಳವು ಮಾಡಲಾಗಿದೆ. 12ನೇ ಶತಮಾನದಲ್ಲಿ ಸ್ಥಾಪನೆಗೊಂಡಿರುವ ಈ ದೇಗುಲದಲ್ಲಿ ನೂರು ಬಾಗಿಲುಗಳಿದ್ದವು. ಆನಂತರ ರಾಜಾ ಲಕ್ಷ್ಮಣ್ ಸೇನ್ 13ನೇ ಶತಮಾನದಲ್ಲಿ ದೇಗುಲವನ್ನು ನವೀಕರಣ ಮಾಡಿದ್ದ. 16ನೇ ಶತಮಾನದಲ್ಲಿ ರಾಜಾ ಪ್ರತಾಪಾದಿತ್ಯ ಅದೇ ದೇಗುಲವನ್ನು ಮತ್ತೆ ಮರು ನಿರ್ಮಾಣ ಮಾಡಿದ್ದ. 2021ರಲ್ಲಿ ಮೋದಿ ಈ ಶಕ್ತಿಪೀಠಕ್ಕೆ ಭೇಟಿ ನೀಡಿದ್ದಾಗ, ಭಾರತ ಸರಕಾರದ ವತಿಯಿಂದ ದೇಗುಲ ಪರಿಸರದಲ್ಲಿ ಬೃಹತ್ ಸಮುದಾಯ ಭವನ ಕಟ್ಟಿಸಿಕೊಡುವುದಾಗಿ ಭರವಸೆ ನೀಡಿದ್ದರು.
ಬಾಂಗ್ಲಾದಲ್ಲಿ ಹಿಂದು ಮಂದಿರ, ಹಿಂದುಗಳನ್ನು ಗುರಿಯಾಗಿಸಿ ದಾಳಿ ಘಟನೆಗಳು ನಡೆಯುತ್ತಿರುವ ಹೊತ್ತಲ್ಲಿಯೇ ದೇವಿಯ ಕಿರೀಟವನ್ನು ಕಳವು ಮಾಡಲಾಗಿದೆ.
A crown of Goddess Kali at the Jeshoreshwari Temple in Bangladesh’s Satkhira, gifted by Prime Minister Narendra Modi, has been stolen, according to reportsThe silver, gold-plated crown was reportedly stolen on Thursday between 2.00 pm and 2.30 pm when Temple Priest Dilip Mukherjee left following the day’s worship. The cleaning staff later found that the crown was missing from the deity’s head, Bangladeshi newspaper The Daily Star claimed.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm