ಬ್ರೇಕಿಂಗ್ ನ್ಯೂಸ್
25-10-24 03:03 pm HK News Desk ದೇಶ - ವಿದೇಶ
ಕಾಸರಗೋಡು, ಅ.25: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಹಲವರಿಂದ ಲಕ್ಷಾಂತರ ರೂಪಾಯಿ ಪಡೆದು ಒಟ್ಟು ಎರಡು ಕೋಟಿಗೂ ಹೆಚ್ಚು ವಂಚನೆ ನಡೆಸಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಶಾಲಾ ಶಿಕ್ಷಕಿ, ಪೆರ್ಲ ಮೂಲದ ಡಿವೈಎಫ್ಐ ನಾಯಕಿ ಸಚಿತಾ ರೈ ಅವರನ್ಜು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ.
12ಕ್ಕೂ ಹೆಚ್ಚು ಮಂದಿಗೆ ಸರ್ಕಾರಿ ಉದ್ಯೋಗ ಕೊಡುವುದಾಗಿ ವಂಚಿಸಿದ ಬಗ್ಗೆ ವಿವಿಧೆಡೆ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ವಿದ್ಯಾನಗರ ಪೊಲೀಸರು ಆರೋಪಿ ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ಆಕೆಯ ವಿರುದ್ಧ ಉಪ್ಪಿನಂಗಡಿ, ಬದಿಯಡ್ಕ, ಕುಂಬಳೆ, ಮಂಜೇಶ್ವರ, ಕಾಸರಗೋಡು, ಆದೂರು, ಮೇಲ್ಪರಂಬ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿದೆ. ಪ್ರಕರಣದ ಹಿನ್ನೆಲೆಯಲ್ಲಿ ಕೆಲವು ದಿನಗಳಿಂದ ಸಚಿತಾ ರೈ ತಲೆಮರೆಸಿಕೊಂಡಿದ್ದರು. ಗುರುವಾರ ಸಂಜೆ ನ್ಯಾಯಾಲಯಕ್ಕೆ ಶರಣಾಗಿ ಜಾಮೀನು ಪಡೆಯಲು ಯತ್ನಿಸುತ್ತಿದ್ದಾಗಲೇ ಆಕೆಯನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ.
ಕಾಸರಗೋಡು ಸಿಪಿಸಿಆರ್ಐ, ಕೇಂದ್ರೀಯ ವಿದ್ಯಾಲಯ, ಕರ್ನಾಟಕ ಅಬಕಾರಿ ಇಲಾಖೆ, ಅರಣ್ಯ ಇಲಾಖೆ, ಎಸ್ಬಿಐ ಮುಂತಾದ ವಿವಿಧ ಇಲಾಖೆ, ಬ್ಯಾಂಕುಗಳಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿ ಹಲವು ವ್ಯಕ್ತಿಗಳಿಂದ 10ರಿಂದ 20 ಲಕ್ಷದಷ್ಟು ಮೊತ್ತವನ್ನು ಸಚಿತಾ ಸಂಗ್ರಹಿಸಿದ್ದರು. ಕುಂಬಳೆ ಕಿದೂರಿನ ನಿಶ್ಮಿತಾ ಶೆಟ್ಟಿ ಎಂಬವರು ಮೊದಲ ದೂರು ದಾಖಲಿಸಿದ್ದರು. ಇದರ ಬೆನ್ನಲ್ಲೇ ಇತರ ವಂಚನೆ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಸಿಪಿಸಿಆರ್ಐನಲ್ಲಿ ಕೆಲಸ ಕೊಡಿಸುವುದಾಗಿ ಸಚಿತಾ ನಿಶ್ಮಿತಾ ಶೆಟ್ಟಿಗೆ ಸುಮಾರು 15 ಲಕ್ಷ ರೂಪಾಯಿ ವಂಚಿಸಿದ್ದಾರೆ. ಅಲ್ಲದೆ ಕೇಂದ್ರೀಯ ವಿದ್ಯಾಲಯದಲ್ಲಿ ಕೆಲಸ ಕೊಡಿಸುವುದಾಗಿ ದೇಲಂಪಾಡಿಯ ಸುಚಿತ್ರಾ ರಾವ್ ಎಂಬವರಿಂದ 7,31,500 ರೂ. ವಂಚಿಸಿದ್ದಾರೆ. ಸಚಿತಾ ರೈ ಡಿವೈಎಫ್ಐ ಜಿಲ್ಲಾ ಸಮಿತಿಯ ಸದಸ್ಯೆಯಾಗಿದ್ದು, ಪೆರ್ಲ ಬಾಡೂರಿನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.
The Vidyanagar police on Thursday evening arrested a school teacher accused of defrauding people by promising them jobs in exchange for large sums of money.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm