ಬ್ರೇಕಿಂಗ್ ನ್ಯೂಸ್
28-10-24 08:38 pm HK News Desk ದೇಶ - ವಿದೇಶ
ಎರ್ನಾಕುಲಂ, ಅ.28: ಕೇರಳದಲ್ಲಿ ಅಡುಗೆ ಸಂಬಂಧಿತ ಯೂಟ್ಯೂಬರ್ ಆಗಿ ಹೆಸರು ಮಾಡಿದ್ದ ದಂಪತಿ ದಿಢೀರ್ ಸಾವಿಗೆ ಶರಣಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಎರ್ನಾಕುಲಂ ಜಿಲ್ಲೆಯ ಪರಶ್ಶಲಾ ಗ್ರಾಮದಲ್ಲಿ ನಡೆದಿದೆ. ಸೆಲ್ಲು ಫ್ಯಾಮಿಲಿ ಹೆಸರಿನ ಯೂಟ್ಯೂಬ್ ನಡೆಸುತ್ತಿದ್ದ ಪ್ರಿಯಾ (38) ಮತ್ತು ಆಕೆಯ ಪತಿ ಸೆಲ್ವರಾಜ್ (45) ಮೃತರು.
ದಂಪತಿಯ ಮಗ ಎರ್ನಾಕುಲಂನಲ್ಲಿ ನರ್ಸಿಂಗ್ ಓದುತ್ತಿದ್ದು, ಶುಕ್ರವಾರ ರಾತ್ರಿ ಫೋನಲ್ಲಿ ಮಾತನಾಡಿದ್ದ. ಮರುದಿನ ಫೋನ್ ರಿಸೀವ್ ಮಾಡುತ್ತಿರಲಿಲ್ಲ. ಹೀಗಾಗಿ ಶನಿವಾರ ಸಂಜೆಯ ವೇಳೆಗೆ ಮಗ ಮನೆಗೆ ಆಗಮಿಸಿದ್ದು, ತಾಯಿ ಪ್ರಿಯಾ ಬೆಡ್ ನಲ್ಲಿ ಸಾವನ್ನಪ್ಪಿದ ಸ್ಥಿತಿಯಲ್ಲಿದ್ದರೆ, ತಂದೆ ನೇಣಿಗೆ ಶರಣಾಗಿರುವ ರೀತಿ ಪತ್ತೆಯಾಗಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸೆಲ್ಲು ಫ್ಯಾಮಿಲಿ ಹೆಸರಿನ ಯೂಟ್ಯೂಬ್ ನಲ್ಲಿ ದಿನವೂ ಇವರು ವಿಡಿಯೋ ಅಪ್ಲೋಡ್ ಮಾಡುತ್ತಿದ್ದರು. ಶುಕ್ರವಾರ ರಾತ್ರಿ 9 ಗಂಟೆಗೆ 55 ಸೆಕೆಂಡಿನ ವಿಡಿಯೋ ಹಾಕಿದ್ದು, ಅದರಲ್ಲಿ ಸಾವಿನ ಕಡೆಗೆ ಅಂತಿಮ ಯಾತ್ರೆ ಎನ್ನುವ ಅರ್ಥವುಳ್ಳ ಸಾಲುಗಳ ಸಾಂಗ್ ಬಳಸಿದ್ದರು. ಹೀಗಾಗಿ ಇವರು ಮೊದಲೇ ಸಾವಿಗೆ ಶರಣಾಗುವ ಬಗ್ಗೆ ಪ್ಲಾನ್ ಮಾಡಿಕೊಂಡಿದ್ದರೇ ಅನ್ನುವ ಅನುಮಾನ ಬಂದಿದೆ. ಪರಿಸರದ ನಿವಾಸಿಗಳು ಇವರ ದಿಢೀರ್ ಸಾವಿನ ಬಗ್ಗೆ ಅಚ್ಚರಿಗೊಂಡಿದ್ದಾರೆ. ಮನೆಗೆ ಮಕ್ಕಳು ಬಿಟ್ಟರೆ, ಪ್ರಿಯಾ ತಾಯಿ ಮಾತ್ರ ಬರುತ್ತಿದ್ದರು. ವರ್ಷದ ಹಿಂದೆ ಮಗಳಿಗೆ ಮದುವೆಯಾಗಿತ್ತು. ಮನೆಯಲ್ಲಿ ಇಬ್ಬರೇ ಹೆಚ್ಚಾಗಿ ಇರುತ್ತಿದ್ದರು. ಮನೆ ಕಟ್ಟುವುದಕ್ಕಾಗಿ ಜಾಗ ಖರೀದಿಯನ್ನೂ ಮಾಡಿದ್ದರು ಎಂದು ಸ್ಥಳೀಯರು ಮನೋರಮಾ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.
ಪ್ರಿಯಾ ಹಿಂದೆ ಕುಟುಂಬಶ್ರೀಯಲ್ಲಿ ಸಕ್ರಿಯವಾಗಿದ್ದರು. ಆನಂತರ, ಅದನ್ನು ಬಿಟ್ಟು ಯೂಟ್ಯೂಬಲ್ಲಿ ಮಾತ್ರ ಸಕ್ರಿಯವಾಗಿದ್ದರು. ಸಾಮಾಜಿಕವಾಗಿ ಹೆಚ್ಚು ಬೆರೆಯುತ್ತಿರಲಿಲ್ಲ. ಈಕೆಯ ಪತಿ ಸೆಲ್ವರಾಜ್ ಮೇಸ್ತ್ರಿಯಾಗಿದ್ದು, ಸ್ಥಳೀಯರ ಜೊತೆಗೆ ಮಾತ್ರ ಬೆರೆಯುತ್ತಿದ್ದರು. ಸಂಬಂಧಿಕರ ಜೊತೆಗೆ ಹೆಚ್ಚು ಬೆರೆಯುತ್ತಿರಲಿಲ್ಲ ಎಂದು ಸ್ಥಳೀಯರು ಹೇಳಿದ್ದಾರೆ.
A couple, who ran a YouTube channel, was found dead at their residence in Kerala's Parassala town on Sunday, with the police suspecting it as a case of death by suicide. The incident came to light after their neighbours, who noticed an unusual absence, alerted the police.
19-02-26 03:11 pm
HK News Desk
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
19-02-26 04:09 pm
Mangalore Correspondent
ಐರ್ಲೆಂಡಿನಲ್ಲಿ ಕಡಬ ಮೂಲದ ಯುವಕ ನಿಗೂಢ ಸಾವು ; ಆತ್ಮ...
19-02-26 03:54 pm
ಮಂಜನಾಡಿ ದುರಂತ ; ಇಬ್ಬರು ಮಕ್ಕಳು, ತನ್ನೆರಡು ಕಾಲುಗ...
18-02-26 11:24 pm
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್...
18-02-26 10:46 pm
MIR Group, Mangalore: ಮಂಗಳೂರಿನಲ್ಲಿ ಇಟಲಿಯ ಮೀರ್...
18-02-26 10:24 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm