ಬ್ರೇಕಿಂಗ್ ನ್ಯೂಸ್
03-11-24 10:24 pm HK News Desk ದೇಶ - ವಿದೇಶ
ಮುಂಬೈ, ನ.3: ಎನ್ ಸಿಪಿ ನಾಯಕ ಬಾಬಾ ಸಿದ್ದಿಕಿ ಮಾದರಿಯಲ್ಲೇ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಕೊಲ್ಲಲಾಗುವುದು ಎಂದು ಬೆದರಿಕೆ ಸಂದೇಶ ಹಾಕಿದ್ದ ಮುಸ್ಲಿಂ ಮಹಿಳೆಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಫಾತಿಮಾ ಖಾನ್ ಎಂಬ ಮಹಿಳೆಯಾಗಿದ್ದು ಆಕೆ ಸ್ವಲ್ಪ ಮಾನಸಿಕ ಅಸ್ವಸ್ಥೆ ಎಂದು ಪೊಲೀಸರು ತಿಳಿಸಿದ್ದಾರೆ.
ಥಾಣೆ ಜಿಲ್ಲೆಯ ಉಲ್ಲಾಸನಗರ ನಿವಾಸಿಯಾಗಿರುವ 24 ವರ್ಷದ ಮಹಿಳೆ ಬಿಎಸ್ಸಿ ಪೂರೈಸಿದ್ದಾಳೆ. ಎರಡು ದಿನಗಳ ಹಿಂದೆ ಮುಂಬೈ ಟ್ರಾಫಿಕ್ ಪೊಲೀಸರ ವಾಟ್ಸಪ್ ನಂಬರಿಗೆ ಅಪರಿಚಿತ ನಂಬರಿನಿಂದ ಮೆಸೇಜ್ ಬಂದಿತ್ತು. ಇನ್ನು ಹತ್ತು ದಿನದಲ್ಲಿ ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶ ಸಿಎಂ ಸ್ಥಾನವನ್ನು ಬಿಟ್ಟು ಇಳಿಯದಿದ್ದಲ್ಲಿ ಬಾಬಾ ಸಿದ್ದಿಕಿ ರೀತಿಯಲ್ಲೇ ಕೊಲ್ಲಲ್ಪಡುತ್ತಾರೆ ಎಂದು ಬೆದರಿಕೆ ಹಾಕಲಾಗಿತ್ತು. ವೂರ್ಲಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದ ಪೊಲೀಸರು ತನಿಖೆ ಆರಂಭಿಸಿದ್ದರು.
ಅಲ್ಲದೆ, ಏಂಟಿ ಟೆರರಿಸ್ಟ್ ತಂಡ ಕೂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಆರಂಭಿಸಿತ್ತು. ಇದೀಗ ಉಲ್ಲಾಸನಗರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಮಹಿಳೆಯನ್ನು ಬಂಧಿಸಲಾಗಿದೆ. ನವೆಂಬರ್ 20ರಂದು ಮಹಾರಾಷ್ಟ್ರ ಚುನಾವಣೆ ಪ್ರಚಾರಕ್ಕಾಗಿ ಯೋಗಿ ಆದಿತ್ಯನಾಥ್ ಮುಂಬೈಗೆ ಬರಲಿದ್ದು, ಇಂತಹ ಸಂದರ್ಭದಲ್ಲಿಯೇ ಬೆದರಿಕೆ ಬಂದಿರುವುದರಿಂದ ಪೊಲೀಸರು ಅಲರ್ಟ್ ಆಗಿದ್ದಾರೆ.
The Mumbai Police said it received a death threat against Uttar Pradesh Chief Minister Yogi Adityanath on Saturday. The Chief Minister's security has been beefed up following the message.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm