ಬ್ರೇಕಿಂಗ್ ನ್ಯೂಸ್
04-11-24 03:28 pm HK News Desk ದೇಶ - ವಿದೇಶ
ಲಕ್ನೋ, ನ.4: ಹೊಟ್ಟೆ ನೋವೆಂದು ವೈದ್ಯರಲ್ಲಿಗೆ ಬಂದಿದ್ದ 15 ವರ್ಷದ ಬಾಲಕನ ಹೊಟ್ಟೆಯಲ್ಲಿ ಬ್ಯಾಟರಿ, ಬ್ಲೇಡ್, ಉಗುರು, ವಾಚ್, ಲೋಹದ ಮಾದರಿ ಸೇರಿದಂತೆ 56 ವಸ್ತುಗಳು ಪತ್ತೆಯಾದ ಘಟನೆ ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದಿದೆ. 9ನೇ ತರಗತಿ ಓದುತ್ತಿದ್ದ ಆದಿತ್ಯ ಹೆಸರಿನ ವಿದ್ಯಾರ್ಥಿ ವೈದ್ಯರು ಸರ್ಜರಿ ನಡೆಸಿದ ಬಳಿಕ ಮೃತಪಟ್ಟಿದ್ದಾನೆ.
ತೀವ್ರ ಹೊಟ್ಟೆನೋವು ಮತ್ತು ಉಸಿರಾಟದ ತೊಂದರೆ ಅನುಭವಿಸುತ್ತಿದ್ದ ಆತನನ್ನು ಹತ್ರಾಸ್ ಮತ್ತು ಆಬಳಿಕ ಜೈಪುರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಪಡೆದ ಬಳಿಕವೂ ಬಾಲಕನ ಸ್ಥಿತಿ ಸುಧಾರಿಸಿರಲಿಲ್ಲ. ಆನಂತರ, ಬಾಲಕನ್ನು ಆಲೀಗಢದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಉಸಿರಾಟದ ತೊಂದರೆ ಇದ್ದುದರಿಂದ ಮೂಗಿನ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಉಸಿರಾಟದ ಸಮಸ್ಯೆ ಸರಿಯಾದರೂ, ಹೊಟ್ಟೆ ನೋವು ಕಡಿಮೆಯಾಗಿರಲಿಲ್ಲ.
ಬಳಿಕ ಆಲ್ಟ್ರಾಸೌಂಡ್ ನಡೆಸಿದಾಗ, ಹೊಟ್ಟೆಯಲ್ಲಿ 19 ಲೋಹದ ವಸ್ತುಗಳು ಪತ್ತೆಯಾಗಿದ್ದವು. ಹೀಗಾಗಿ ನೋಯ್ಡಾದಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗುವಂತೆ ಶಿಫಾರಸು ಮಾಡಲಾಗಿತ್ತು. ನೋಯ್ಡಾದಲ್ಲಿ ಸ್ಕ್ಯಾನ್ ಮಾಡಿದಾಗ, ಸುಮಾರು 56 ಮಾದರಿಯ ವಸ್ತುಗಳು ಹೊಟ್ಟೆಯಲ್ಲಿ ತುಂಬಿಕೊಂಡಿರುವುದು ಕಂಡುಬಂದಿತ್ತು. ಅಲ್ಲಿನ ವೈದ್ಯರ ಸೂಚನೆಯಂತೆ, ದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆಯಲ್ಲಿ ದಾಖಲಿಸಿ ಅ.27ರಂದು ಸರ್ಜರಿ ನಡೆಸಲಾಗಿತ್ತು. ಒಂದು ದಿನದ ಬಳಿಕ ಬಾಲಕನ ಎದೆ ಬಡಿತ ಹೆಚ್ಚು ಕಮ್ಮಿ ಆಗಿ ಮೃತಪಟ್ಟಿದ್ದ.
ಇಷ್ಟೊಂದು ಲೋಹದ ವಸ್ತುಗಳು ಬಾಲಕನ ಹೊಟ್ಟೆ ಸೇರಿದ್ದು ಹೇಗೆ ಎನ್ನುವುದು ವೈದ್ಯರು ಮತ್ತು ಹುಡುಗನ ಹೆತ್ತವರಿಗೆ ಅಚ್ಚರಿಯಾಗಿದೆ. ಹುಡುಗ ಬಾಯಿ ಮೂಲಕ ನುಂಗಿದ್ದರೂ, ಶ್ವಾಸಕೋಶಕ್ಕೆ ಪೆಟ್ಟಾಗಬೇಕಿತ್ತು. ಆದರೆ ಕುತ್ತಿಗೆ ಅಥವಾ ಶ್ವಾಸಕೋಶದಲ್ಲಿ ಯಾವುದೇ ಗಾಯದ ಗುರುತು ಕಂಡುಬಂದಿಲ್ಲ ಎಂದು ವೈದ್ಯರು ಹೇಳುತ್ತಾರೆ.
As many as 56 objects, including watch batteries, blades, nails, and other metal particles, were removed from the stomach of a 15-year-old boy in Uttar Pradesh’s Hathras after he complained of stomach pain and difficulty in breathing. However, the boy, a Class 9 student, died during treatment after the surgery.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm