ಬ್ರೇಕಿಂಗ್ ನ್ಯೂಸ್
04-11-24 03:28 pm HK News Desk ದೇಶ - ವಿದೇಶ
ಲಕ್ನೋ, ನ.4: ಹೊಟ್ಟೆ ನೋವೆಂದು ವೈದ್ಯರಲ್ಲಿಗೆ ಬಂದಿದ್ದ 15 ವರ್ಷದ ಬಾಲಕನ ಹೊಟ್ಟೆಯಲ್ಲಿ ಬ್ಯಾಟರಿ, ಬ್ಲೇಡ್, ಉಗುರು, ವಾಚ್, ಲೋಹದ ಮಾದರಿ ಸೇರಿದಂತೆ 56 ವಸ್ತುಗಳು ಪತ್ತೆಯಾದ ಘಟನೆ ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದಿದೆ. 9ನೇ ತರಗತಿ ಓದುತ್ತಿದ್ದ ಆದಿತ್ಯ ಹೆಸರಿನ ವಿದ್ಯಾರ್ಥಿ ವೈದ್ಯರು ಸರ್ಜರಿ ನಡೆಸಿದ ಬಳಿಕ ಮೃತಪಟ್ಟಿದ್ದಾನೆ.
ತೀವ್ರ ಹೊಟ್ಟೆನೋವು ಮತ್ತು ಉಸಿರಾಟದ ತೊಂದರೆ ಅನುಭವಿಸುತ್ತಿದ್ದ ಆತನನ್ನು ಹತ್ರಾಸ್ ಮತ್ತು ಆಬಳಿಕ ಜೈಪುರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಪಡೆದ ಬಳಿಕವೂ ಬಾಲಕನ ಸ್ಥಿತಿ ಸುಧಾರಿಸಿರಲಿಲ್ಲ. ಆನಂತರ, ಬಾಲಕನ್ನು ಆಲೀಗಢದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಉಸಿರಾಟದ ತೊಂದರೆ ಇದ್ದುದರಿಂದ ಮೂಗಿನ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಉಸಿರಾಟದ ಸಮಸ್ಯೆ ಸರಿಯಾದರೂ, ಹೊಟ್ಟೆ ನೋವು ಕಡಿಮೆಯಾಗಿರಲಿಲ್ಲ.
ಬಳಿಕ ಆಲ್ಟ್ರಾಸೌಂಡ್ ನಡೆಸಿದಾಗ, ಹೊಟ್ಟೆಯಲ್ಲಿ 19 ಲೋಹದ ವಸ್ತುಗಳು ಪತ್ತೆಯಾಗಿದ್ದವು. ಹೀಗಾಗಿ ನೋಯ್ಡಾದಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗುವಂತೆ ಶಿಫಾರಸು ಮಾಡಲಾಗಿತ್ತು. ನೋಯ್ಡಾದಲ್ಲಿ ಸ್ಕ್ಯಾನ್ ಮಾಡಿದಾಗ, ಸುಮಾರು 56 ಮಾದರಿಯ ವಸ್ತುಗಳು ಹೊಟ್ಟೆಯಲ್ಲಿ ತುಂಬಿಕೊಂಡಿರುವುದು ಕಂಡುಬಂದಿತ್ತು. ಅಲ್ಲಿನ ವೈದ್ಯರ ಸೂಚನೆಯಂತೆ, ದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆಯಲ್ಲಿ ದಾಖಲಿಸಿ ಅ.27ರಂದು ಸರ್ಜರಿ ನಡೆಸಲಾಗಿತ್ತು. ಒಂದು ದಿನದ ಬಳಿಕ ಬಾಲಕನ ಎದೆ ಬಡಿತ ಹೆಚ್ಚು ಕಮ್ಮಿ ಆಗಿ ಮೃತಪಟ್ಟಿದ್ದ.
ಇಷ್ಟೊಂದು ಲೋಹದ ವಸ್ತುಗಳು ಬಾಲಕನ ಹೊಟ್ಟೆ ಸೇರಿದ್ದು ಹೇಗೆ ಎನ್ನುವುದು ವೈದ್ಯರು ಮತ್ತು ಹುಡುಗನ ಹೆತ್ತವರಿಗೆ ಅಚ್ಚರಿಯಾಗಿದೆ. ಹುಡುಗ ಬಾಯಿ ಮೂಲಕ ನುಂಗಿದ್ದರೂ, ಶ್ವಾಸಕೋಶಕ್ಕೆ ಪೆಟ್ಟಾಗಬೇಕಿತ್ತು. ಆದರೆ ಕುತ್ತಿಗೆ ಅಥವಾ ಶ್ವಾಸಕೋಶದಲ್ಲಿ ಯಾವುದೇ ಗಾಯದ ಗುರುತು ಕಂಡುಬಂದಿಲ್ಲ ಎಂದು ವೈದ್ಯರು ಹೇಳುತ್ತಾರೆ.
As many as 56 objects, including watch batteries, blades, nails, and other metal particles, were removed from the stomach of a 15-year-old boy in Uttar Pradesh’s Hathras after he complained of stomach pain and difficulty in breathing. However, the boy, a Class 9 student, died during treatment after the surgery.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
ಗಣೇಶ ಹಬ್ಬದ ಮುಗಿಸಿ ಬೆಂಗಳೂರಿಗೆ ತೆರಳುತ್ತಿದ್ದ ವೇಳ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm