ಬ್ರೇಕಿಂಗ್ ನ್ಯೂಸ್
05-11-24 11:41 am HK News Desk ದೇಶ - ವಿದೇಶ
ಕಾಸರಗೋಡು, ನ.5: ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಗಳು ಸಂಚರಿಸುತ್ತಿದ್ದ ಕಾರನ್ನು ಅಡ್ಡಗಟ್ಟಿ ದುಷ್ಕರ್ಮಿಗಳು ದಾಳಿ ನಡೆಸಿರುವ ಘಟನೆ ಬದಿಯಡ್ಕ ಸಮೀಪದ ಬೋವಿಕ್ಕಾನದಲ್ಲಿ ನಡೆದಿದೆ.
ಭಾನುವಾರ ಸಂಜೆ ಕಾರ್ಯಕ್ರಮ ನಿಮಿತ್ತ ಸ್ವಾಮೀಜಿ ತಮ್ಮ ಕಾರಿನಲ್ಲಿ ಬೋವಿಕ್ಕಾನ - ಇರಿಯಣ್ಣಿ ಮಾರ್ಗ ಮಧ್ಯೆ ಸಂಚರಿಸುತ್ತಿದ್ದಾಗ ಪುಂಡರ ತಂಡ ಅಡ್ಡಹಾಕಿದೆ. ವಾಹನ ತಡೆದು ತಗಾದೆ ತೆಗೆದಿದ್ದು ಬಳಿಕ ಸ್ವಾಮೀಜಿ ಮಾತನಾಡದೆ ಮುಂದುವರಿದಿದ್ದರು. ಕಾರ್ಯಕ್ರಮ ಮುಗಿಸಿ ಅದೇ ದಾರಿಯಲ್ಲಿ ಹಿಂತಿರುಗುತ್ತಿದ್ದಾಗ ಅಡ್ಡಹಾಕಿದ ದುಷ್ಕರ್ಮಿಗಳ ತಂಡವು ದೊಣ್ಣೆಯಲ್ಲಿ ಕಾರಿನ ಗ್ಲಾಸ್ ಪುಡಿಗಟ್ಟಿ ಹಲ್ಲೆಗೆ ಯತ್ನಿಸಿದೆ. ಕಾರನ್ನು ಹಿಂಬಾಲಿಸಿ ಬಂದಿದ್ದ ತಂಡವು ಬಾವಿಕ್ಕೆರೆ ಎಂಬಲ್ಲಿ ಕೃತ್ಯ ನಡೆಸಿದೆ.
ಕಾರಿನ ಮುಂದಿನ ಗಾಜಿಗೆ ದೊಣ್ಣೆಯಲ್ಲಿ ಹೊಡೆದು ಹಾನಿ ಮಾಡಿದ್ದಾರೆ. ಅಲ್ಲದೆ, ಸ್ವಾಮೀಜಿಗೆ ಬೆದರಿಕೆ ಹಾಕಿ ಸ್ಥಳದಲ್ಲಿ ಭಯ ಮೂಡಿಸಿದ್ದಾರೆ. ಸ್ವಾಮೀಜಿ ಬಳಿಕ ಅಲ್ಲಿಂದ ಜಾಗ ಖಾಲಿ ಮಾಡಿದ್ದಾರೆ. ದುಷ್ಕರ್ಮಿಗಳ ಕೃತ್ಯವನ್ನು ಖಂಡಿಸಿ ಇಂದು ಬೋವಿಕ್ಕಾನದಲ್ಲಿ ಹಿಂದು ಐಕ್ಯವೇದಿ ಕಾರ್ಯಕರ್ತರು ಪ್ರತಿಭಟನೆಗೆ ಕರೆ ನೀಡಿದ್ದಾರೆ. ಹಿಂದು ಶ್ರದ್ಧಾಕೇಂದ್ರದ ಗುರುಗಳಿಗೆ ಅಪಮಾನ ಎಸಗಿದರೆ ಸಾಮಾನ್ಯ ಜನರ ಪಾಡೇನು ಎಂದು ಐಕ್ಯವೇದಿ ಪ್ರಶ್ನಿಸಿದ್ದು ಹಿಂದು ಸಂಘಟನೆಗಳು ಪ್ರತಿಭಟನೆಗೆ ಸಜ್ಜಾಗಿದೆ.
Edneer Math Swamiji car attacked in Kerala Kasaragod. The incident occurred on Sunday while he was on hisbway to kerala after which Miscreants attacked his car.
18-03-26 11:00 pm
Supritha Jain
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
ಯುಗಾದಿ ಹಬ್ಬಕ್ಕೆ ಬಸ್ ದರ ಏರಿಕೆ ; ಜೀವಂತ ವ್ಯಕ್ತಿಯ...
18-03-26 03:41 pm
18-03-26 07:11 pm
HK News Staffer
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
19-03-26 01:05 pm
HK News Staffer
ಪಿಲಿಕುಳದಲ್ಲಿ ಏಳು ಮುದ್ದಾದ ಮಕ್ಕಳ ತಾಯಿಯಾದ 'ಗೀತಾ'...
18-03-26 10:42 pm
ಬೋಳೂರಿನಲ್ಲಿ ದೈವನರ್ತನ ಮಾಡಿದ್ದು ಕ್ರಿಸ್ತಿಯನ್ ಅಲ್...
18-03-26 03:38 pm
SCS Hospital, Case: ಹೆರಿಗೆ ವೇಳೆ ನವಜಾತ ಶಿಶು ಸಾ...
18-03-26 09:41 am
ಭೂ ವ್ಯವಹಾರದ ವೈಷಮ್ಯ ; ಮೋಸ ಮಾಡಿದ ಸಿಟ್ಟಿನಲ್ಲಿ ಇನ...
17-03-26 10:54 pm
19-03-26 12:16 pm
HK News Staffer
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm