ಬ್ರೇಕಿಂಗ್ ನ್ಯೂಸ್
05-11-24 11:41 am HK News Desk ದೇಶ - ವಿದೇಶ
ಕಾಸರಗೋಡು, ನ.5: ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಗಳು ಸಂಚರಿಸುತ್ತಿದ್ದ ಕಾರನ್ನು ಅಡ್ಡಗಟ್ಟಿ ದುಷ್ಕರ್ಮಿಗಳು ದಾಳಿ ನಡೆಸಿರುವ ಘಟನೆ ಬದಿಯಡ್ಕ ಸಮೀಪದ ಬೋವಿಕ್ಕಾನದಲ್ಲಿ ನಡೆದಿದೆ.
ಭಾನುವಾರ ಸಂಜೆ ಕಾರ್ಯಕ್ರಮ ನಿಮಿತ್ತ ಸ್ವಾಮೀಜಿ ತಮ್ಮ ಕಾರಿನಲ್ಲಿ ಬೋವಿಕ್ಕಾನ - ಇರಿಯಣ್ಣಿ ಮಾರ್ಗ ಮಧ್ಯೆ ಸಂಚರಿಸುತ್ತಿದ್ದಾಗ ಪುಂಡರ ತಂಡ ಅಡ್ಡಹಾಕಿದೆ. ವಾಹನ ತಡೆದು ತಗಾದೆ ತೆಗೆದಿದ್ದು ಬಳಿಕ ಸ್ವಾಮೀಜಿ ಮಾತನಾಡದೆ ಮುಂದುವರಿದಿದ್ದರು. ಕಾರ್ಯಕ್ರಮ ಮುಗಿಸಿ ಅದೇ ದಾರಿಯಲ್ಲಿ ಹಿಂತಿರುಗುತ್ತಿದ್ದಾಗ ಅಡ್ಡಹಾಕಿದ ದುಷ್ಕರ್ಮಿಗಳ ತಂಡವು ದೊಣ್ಣೆಯಲ್ಲಿ ಕಾರಿನ ಗ್ಲಾಸ್ ಪುಡಿಗಟ್ಟಿ ಹಲ್ಲೆಗೆ ಯತ್ನಿಸಿದೆ. ಕಾರನ್ನು ಹಿಂಬಾಲಿಸಿ ಬಂದಿದ್ದ ತಂಡವು ಬಾವಿಕ್ಕೆರೆ ಎಂಬಲ್ಲಿ ಕೃತ್ಯ ನಡೆಸಿದೆ.
ಕಾರಿನ ಮುಂದಿನ ಗಾಜಿಗೆ ದೊಣ್ಣೆಯಲ್ಲಿ ಹೊಡೆದು ಹಾನಿ ಮಾಡಿದ್ದಾರೆ. ಅಲ್ಲದೆ, ಸ್ವಾಮೀಜಿಗೆ ಬೆದರಿಕೆ ಹಾಕಿ ಸ್ಥಳದಲ್ಲಿ ಭಯ ಮೂಡಿಸಿದ್ದಾರೆ. ಸ್ವಾಮೀಜಿ ಬಳಿಕ ಅಲ್ಲಿಂದ ಜಾಗ ಖಾಲಿ ಮಾಡಿದ್ದಾರೆ. ದುಷ್ಕರ್ಮಿಗಳ ಕೃತ್ಯವನ್ನು ಖಂಡಿಸಿ ಇಂದು ಬೋವಿಕ್ಕಾನದಲ್ಲಿ ಹಿಂದು ಐಕ್ಯವೇದಿ ಕಾರ್ಯಕರ್ತರು ಪ್ರತಿಭಟನೆಗೆ ಕರೆ ನೀಡಿದ್ದಾರೆ. ಹಿಂದು ಶ್ರದ್ಧಾಕೇಂದ್ರದ ಗುರುಗಳಿಗೆ ಅಪಮಾನ ಎಸಗಿದರೆ ಸಾಮಾನ್ಯ ಜನರ ಪಾಡೇನು ಎಂದು ಐಕ್ಯವೇದಿ ಪ್ರಶ್ನಿಸಿದ್ದು ಹಿಂದು ಸಂಘಟನೆಗಳು ಪ್ರತಿಭಟನೆಗೆ ಸಜ್ಜಾಗಿದೆ.
Edneer Math Swamiji car attacked in Kerala Kasaragod. The incident occurred on Sunday while he was on hisbway to kerala after which Miscreants attacked his car.
19-10-25 07:00 pm
HK News Desk
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
19-10-25 11:09 pm
Mangalore Correspondent
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm
Fake Gold Scam, Belthangady Anugraha Society:...
18-10-25 03:27 pm