ಬ್ರೇಕಿಂಗ್ ನ್ಯೂಸ್
08-11-24 10:49 pm HK News Desk ದೇಶ - ವಿದೇಶ
ಮುಂಬೈ, ನ.8: ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯಿ, ದಾವೂದ್ ಇಬ್ರಾಹಿಂ ಅವರ ಭಾವಚಿತ್ರವುಳ್ಳ ಟೀ ಶರ್ಟ್ ಮಾರಾಟಕ್ಕಿಟ್ಟಿರುವ ಆನ್ಲೈನ್ ಕಂಪನಿಗಳ ವಿರುದ್ಧ ಮುಂಬೈನಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಕ್ರಿಮಿನಲ್ ಹಿನ್ನೆಲೆಯುಳ್ಳ ವ್ಯಕ್ತಿಗಳ ಟೀ ಶರ್ಟ್ ಸೇಲ್ ಮಾಡುವ ಮೂಲಕ ಸಮಾಜಕ್ಕೆ ನೆಗೆಟಿವ್ ಸಂದೇಶ ನೀಡಲಾಗುತ್ತಿದೆ ಎಂದು ಆರೋಪಿಸಿ ಪ್ರಕರಣ ದಾಖಲು ಮಾಡಲಾಗಿದೆ.
ಇ-ಕಾಮರ್ಸ್ ಪ್ಲಾಟ್ ಫಾರಂಗಳಾದ ಫ್ಲಿಪ್ ಕಾರ್ಟ್, ಆಲಿ ಎಕ್ಸ್ ಪ್ರೆಸ್, ಟೀ ಶಾಪರ್, ಇಟ್ಸಿ ಎನ್ನುವ ಆನ್ಲೈನ್ ಕಂಪನಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಸ್ಪೆಷಲ್ ಐಜಿಪಿ ಕಚೇರಿಯ ಅಧಿಕಾರಿಗಳು ಮಹಾರಾಷ್ಟ್ರ ಸ್ಟೇಟ್ ಸೈಬರ್ ವಿಭಾಗದಲ್ಲಿ ಕೇಸು ದಾಖಲಿಸಿದ್ದಾರೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ರೀತಿಯ ಜಾಲತಾಣ ಪೋಸ್ಟ್, ಆನ್ಲೈನ್ ಕಂಟೆಂಟ್ ಬಗ್ಗೆ ಸೈಬರ್ ಅಪರಾಧ ವಿಭಾಗದವರು ನಿಗಾ ಇಡುತ್ತಾರೆ. ಎರಡು ದಿನಗಳ ಹಿಂದೆ ಲಾರೆನ್ಸ್ ಬಿಷ್ಣೋಯಿ ಟೀ ಶರ್ಟ್ ಮಾರುಕಟ್ಟೆಗೆ ಬಂದ ಬೆನ್ನಲ್ಲೇ ದಾವೂದ್ ಇಬ್ರಾಹಿಂ ಚಿತ್ರವುಳ್ಳ ಟೀಶರ್ಟ್ ಕೂಡ ಮಾರುಕಟ್ಟೆಗೆ ಬಂದಿದ್ದವು.
ಜನಪ್ರಿಯ ಆನ್ಲೈನ್ ಮಾರುಕಟ್ಟೆಯಲ್ಲಿ ಇಂತಹ ಟೀಶರ್ಟ್ ಗಳನ್ನು ಮಾರಾಟಕ್ಕಿಡುವ ಮೂಲಕ ಯುವಕರ ಮನಸ್ಸು ಕೆಡಿಸಿ, ಅಪರಾಧ ಲೋಕದತ್ತ ಸೆಳೆಯುತ್ತದೆ. ಅಪರಾಧ ಲೋಕದವರನ್ನು ತಮ್ಮ ಐಕಾನ್ ಆಗುವಂತೆ ಪ್ರೇರೇಪಣೆ ನೀಡುತ್ತದೆ. ಅಲ್ಲದೆ, ದಾವೂದ್ ಇಬ್ರಾಹಿಂ ಮತ್ತು ಲಾರೆನ್ಸ್ ಬಿಷ್ಣೋಯಿ ಅವರಂಥ ಕ್ರಿಮಿನಲ್ ಗಳು ಮಾಡಿರುವ ಅಪರಾಧಗಳನ್ನು ಸಮಾಜಕಂಟಕ ಅಲ್ಲ ಎನ್ನುವ ಭಾವನೆ ಜನರಲ್ಲಿ ಮೂಡಿಸುತ್ತದೆ. ಈ ರೀತಿಯ ನಡೆಗಳು ಯುವಕರಲ್ಲಿ ಅಪಾಯಕಾರಿ ಸಂದೇಶವನ್ನು ನೀಡುತ್ತದೆ ಎಂದು ಸೈಬರ್ ಅಪರಾಧ ವಿಭಾಗದ ಅಧಿಕಾರಿಗಳು ಪ್ರಕರಣ ದಾಖಲು ಮಾಡಿದ್ದಾರೆ.
ಟೀ ಶರ್ಟ್ ಉತ್ಪಾದಕರು ಮತ್ತು ಅದನ್ನು ಮಾರಾಟಕ್ಕಿಟ್ಟವರು ಇದರ ಹೊಣೆ ಹೊರಬೇಕಾಗುತ್ತದೆ ಎಂದು ಅವರಿಬ್ಬರ ಮೇಲೂ ಐಟಿ ಏಕ್ಟ್ 67 ಸೇರಿದಂತೆ ಸೈಬರ್ ಅಪರಾಧ ಸೆಕ್ಷನ್ ಗಳಾದ 192, 196, 353 ಅಡಿ ಕೇಸು ದಾಖಲಿಸಲಾಗಿದೆ.
The Maharashtra cyber police Wednesday registered a First Information Report (FIR) against several e-commerce platforms and sellers for selling t-shirts that glorify gangsters, including Lawrence Bishnoi and Dawood Ibrahim.
19-02-26 03:11 pm
HK News Desk
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
19-02-26 04:09 pm
Mangalore Correspondent
ಐರ್ಲೆಂಡಿನಲ್ಲಿ ಕಡಬ ಮೂಲದ ಯುವಕ ನಿಗೂಢ ಸಾವು ; ಆತ್ಮ...
19-02-26 03:54 pm
ಮಂಜನಾಡಿ ದುರಂತ ; ಇಬ್ಬರು ಮಕ್ಕಳು, ತನ್ನೆರಡು ಕಾಲುಗ...
18-02-26 11:24 pm
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್...
18-02-26 10:46 pm
MIR Group, Mangalore: ಮಂಗಳೂರಿನಲ್ಲಿ ಇಟಲಿಯ ಮೀರ್...
18-02-26 10:24 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm