ಬ್ರೇಕಿಂಗ್ ನ್ಯೂಸ್
10-11-24 11:33 am HK News Desk ದೇಶ - ವಿದೇಶ
ನವದೆಹಲಿ, ನ.10: ದೇಶದಲ್ಲಿ ಭಾರತೀಯ ಜನತಾ ಪಾರ್ಟಿ ಇರುವ ವರೆಗೂ ಧರ್ಮಾಧರಿತ ಮೀಸಲಾತಿ ವ್ಯವಸ್ಥೆಯನ್ನು ಜಾರಿಗೆ ತರಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ವಾರ್ನ್ ಮಾಡಿದ್ದಾರೆ.
ಜಾರ್ಖಂಡ್ ರಾಜ್ಯದ ಪಲಮು ಎಂಬಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡ ಅಮಿತ್ ಷಾ, ಕಾಂಗ್ರೆಸ್ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡುವ ಬಗ್ಗೆ ಭರವಸೆ ನೀಡಿರುವುದನ್ನು ಪ್ರಸ್ತಾಪಿಸಿ ಮಾತನಾಡಿದರು. ಸಂವಿಧಾನದಲ್ಲಿ ಧರ್ಮಾಧರಿತ ಮೀಸಲಾತಿ ನೀಡುವುದಕ್ಕೆ ಅವಕಾಶ ಇಲ್ಲ. ನಾವು ಯಾವುದೇ ಒಂದು ನಿರ್ದಿಷ್ಟ ಧರ್ಮಕ್ಕೆ ಮೀಸಲಾತಿ ನೀಡಲು ಸಾಧ್ಯವಿಲ್ಲ. ಮಹಾರಾಷ್ಟ್ರದಲ್ಲಿ ಉಲೇಮಾಗಳ ಒಂದು ಗುಂಪು ಅಲ್ಲಿನ ಕಾಂಗ್ರೆಸ್ ಅಧ್ಯಕ್ಷರಿಗೆ ಮನವಿ ನೀಡಿ, ಹತ್ತು ಶೇಕಡಾ ಮೀಸಲಾತಿ ನೀಡಲು ಬೇಡಿಕೆ ಇಟ್ಟಿದೆ. ಅದಕ್ಕೆ ಕಾಂಗ್ರೆಸ್ ನಾಯಕರು, ಬೇಡಿಕೆಯನ್ನು ಜಾರಿಗೆ ತರಲು ಸಹಾಯ ಮಾಡುತ್ತೇವೆ ಎಂದಿದ್ದಾರೆ.
ಮುಸ್ಲಿಮರಿಗೆ ಹತ್ತು ಶೇಕಡಾ ಮೀಸಲಾತಿ ನೀಡಿದರೆ, ಯಾರ ಮೀಸಲಾತಿಯನ್ನು ಕಡಿತ ಮಾಡಬೇಕಾಗುತ್ತದೆ ಎಂದು ದೇಶದ ಜನರಲ್ಲಿ ಕೇಳಬಯಸುತ್ತೇನೆ. ಹಿಂದುಳಿದ ವರ್ಗ, ದಲಿತರು ಮತ್ತು ಬುಡಕಟ್ಟು ಜನರಿಗೆ ನೀಡಲಾಗುತ್ತಿರುವ ಮೀಸಲಾತಿಯನ್ನು ಕಡಿತ ಮಾಡಬೇಕಾಗುತ್ತದೆ. ರಾಹುಲ್ ಬಾಬಾನಿಗೆ ನಾನು ಇಲ್ಲಿಂದಲೇ ಎಚ್ಚರಿಕೆ ನೀಡುತ್ತೇನೆ, ನಿಮ್ಮ ತಲೆಯಲ್ಲಿ ಅದ್ಯಾವುದೇ ಹುನ್ನಾರ ಇದ್ದರೂ ಇರಬಹುದು. ಆದರೆ ಬಿಜೆಪಿ ಈ ದೇಶದಲ್ಲಿ ಇರೋ ವರೆಗೂ ಅಲ್ಪಸಂಖ್ಯಾತರಿಗೆ ಮೀಸಲಾತಿ ವ್ಯವಸ್ಥೆ ಜಾರಿಗೆ ತರಲು ಸಾಧ್ಯವಿಲ್ಲ ಎಂದು ಹೇಳಿದರು.
ಕಾಂಗ್ರೆಸ್ ಒಂದು ಏಂಟಿ ಓಬಿಸಿ ಪಾರ್ಟಿಯಾಗಿದೆ. ಪ್ರತಿ ಬಾರಿ ಅಧಿಕಾರಕ್ಕೆ ಬಂದಾಗಲೂ ಕಾಂಗ್ರೆಸ್ ಓಬಿಸಿ ಜನರಿಗೆ ಅನ್ಯಾಯ ಮಾಡಿದೆ. 1950ರಲ್ಲಿ ಓಬಿಸಿ ಜನರ ಕಲ್ಯಾಣಕ್ಕಾಗಿ ಕಾಕಾ ಕಲೇಳ್ಕರ್ ಸಮಿತಿಯನ್ನು ಮಾಡಲಾಗಿತ್ತು. ಆದರೆ, ಅವರು ನೀಡಿದ್ದ ವರದಿಯನ್ನೇ ಮಾಯ ಮಾಡಲಾಗಿತ್ತು. ಆಬಳಿಕ ಮಂಡಲ್ ಕಮಿಶನ್ ಓಬಿಸಿಗಳಿಗೆ ಮೀಸಲಾತಿ ನೀಡಬೇಕೆಂದು ವರದಿ ನೀಡಿದರೂ, ಇಂದಿರಾ ಮತ್ತು ರಾಜೀವ ಗಾಂಧಿ ಅದರ ಜಾರಿಗೆ ವಿರೋಧಿಸಿದ್ದರು. ಕೇಂದ್ರ ಸರಕಾರದ ಸಂಸ್ಥೆಗಳಲ್ಲಿ ಓಬಿಸಿಗೆ 27 ಪರ್ಸೆಂಟ್ ಮೀಸಲಾತಿ ನೀಡಲು ಕಾಂಗ್ರೆಸ್ ಮುಂದಾಗಿರಲಿಲ್ಲ. 2014ರಲ್ಲಿ ಮೋದಿ ಸರಕಾರ ಬಂದ ಬಳಿಕ ಸುದೀರ್ಘ ಕಾಲದ ಬೇಡಿಕೆಯನ್ನು ಒಪ್ಪಿ ಓಬಿಸಿಗೆ 27 ಶೇಕಡಾ ಮೀಸಲಾತಿ ನೀಡಿತ್ತು. ಅಲ್ಲದೆ, ನ್ಯಾಶನಲ್ ಕಮಿಷನ್ ಫಾರ್ ಬ್ಯಾಕ್ ವರ್ಡ್ ಕ್ಲಾಸಸ್ (ಹಿಂದುಳಿದ ವರ್ಗದ ಆಯೋಗ) ಜಾರಿಗೆ ತಂದು ಸಾಂವಿಧಾನಿಕ ಮಾನ್ಯತೆ ಕೊಟ್ಟಿದ್ದು ಮೋದಿ ಸರಕಾರ ಎಂದು ಅಮಿತ್ ಷಾ ಹೇಳಿದರು.
Shah said that Congress wants to give reservation to Muslims by decreasing the reservation limit of OBCs, Dalits and tribal. Addressing a public rally in PaIamu, Jharkhand, Amit Shah said, "Congress talks about reservation, but in our constitution, there is no such provision to give reservation on the basis of religion.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm