ಬ್ರೇಕಿಂಗ್ ನ್ಯೂಸ್
08-08-20 12:08 pm Headline Karnataka News Network ದೇಶ - ವಿದೇಶ
ಜೊಹಾನ್ಸ್ಬರ್ಗ್: ಜಪಾನ್ನ ಎಂ.ವಿ.ವಕಾಶಿಯೊ ಎಂಬ ಹೆಸರಿನ ಹಡಗಿನಿಂದ ಇಂಧನ ಸೋರಿಕೆಯಾಗಿರುವುದು ತಿಳಿಯುತ್ತಿದ್ದಂತೆ ಮಾರಿಷಸ್ ಸರ್ಕಾರವು ಶುಕ್ರವಾರ ಪರಿಸರ ತುರ್ತು ಪರಿಸ್ಥಿತಿ ಘೋಷಿಸಿದೆ.
ಇತ್ತೀಚೆಗೆ ತನ್ನ ಆಗ್ನೇಯ ಕರಾವಳಿ ಮೂಲಕ ಸಾಗಿರುವ ವಕಾಶಿಯೊ ಹಡಗಿನಲ್ಲಿ ಸುಮಾರು 4,000 ಟನ್ಗಳಷ್ಟು ಇಂಧನವಿತ್ತು. ನಮ್ಮ ಪರಿಸರ ಪ್ರದೇಶದ ಸಮೀಪದಲ್ಲೇ ಇಂಧನ ಸೋರಿಕೆಯಾಗಿರುವುದು ಉಪಗ್ರಹ ಚಿತ್ರಗಳಿಂದ ಸ್ಪಷ್ಟವಾಗಿದೆ’ ಎಂದು ಮಾರಿಷಸ್ ಸರ್ಕಾರ ತಿಳಿಸಿದೆ.
ನೀರಿನಲ್ಲಿ ಅಪಾರ ಪ್ರಮಾಣದ ಇಂಧನ ಬೆರೆತಿದೆ. ಈ ಪರಿಸ್ಥಿತಿಯನ್ನು ಹೇಗೆ ನಿಭಾಯಿಸಬೇಕೆಂಬುದೇ ನಮಗೆ ತೋಚುತ್ತಿಲ್ಲ. ಹೀಗಾಗಿ ಫ್ರಾನ್ಸ್ ಸರ್ಕಾರದ ನೆರವು ಕೋರಿದ್ದೇವೆ. ಆ ದೇಶದ ಅಧ್ಯಕ್ಷ ಎಮ್ಯಾನುವೆಲ್ ಮ್ಯಾಕ್ರನ್ ಅವರಿಗೂ ಮನವಿ ಮಾಡಿದ್ದೇವೆ’ ಎಂದು ಮಾರಿಷಸ್ನ ಪ್ರಧಾನ ಮಂತ್ರಿ ಪ್ರವಿಂದ್ ಜುಗ್ನಾಥ್ ತಿಳಿಸಿದ್ದಾರೆ.
ಇಂಧನ ಸೋರಿಕೆಯಿಂದ ಬ್ಲೂ ಬೇ ಮರಿನ್ ಪಾರ್ಕ್ ಹಾಗೂ ಇತರ ಪ್ರದೇಶಗಳ ನೀರು ರಾಸಾಯನಿಕಯುಕ್ತವಾಗಿದೆ. ನಾವೀಗ ಪರಿಸರ ಬಿಕ್ಕಟ್ಟು ಎದುರಿಸುತ್ತಿದ್ದೇವೆ’ ಎಂದು ಮಾರಿಷಸ್ನ ಪರಿಸರ ಸಚಿವ ಕ್ಯಾವಿ ರಮಣೊ ಹೇಳಿದ್ದಾರೆ.
ಈ ಹಡಗು ಜಪಾನ್ನ ಒಕಿಯೊ ಮಾರಿಟೈಮ್ ಕಾರ್ಪೊರೇಷನ್ ಆ್ಯಂಡ್ ನಾಗಸಾಕಿ ಶಿಪ್ಪಿಂಗ್ ಕಂಪನಿ ಲಿಮಿಟೆಡ್ಗೆ ಸೇರಿದ್ದಾಗಿದೆ. ಈ ಕಂಪನಿಯ ವಿರುದ್ಧ ನಿರ್ಲಕ್ಷ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಹಡಗು ಜುಲೈ 25ರಂದು ನಮ್ಮ ಆಗ್ನೇಯ ಕರಾವಳಿ ಭಾಗದಲ್ಲಿ ಸಂಚರಿಸಿದೆ’ ಎಂದು ಸರ್ಕಾರದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹಡಗಿನಿಂದ ದೊಡ್ಡ ಪ್ರಮಾಣದಲ್ಲಿ ಡೀಸೆಲ್ ಮತ್ತು ತೈಲ ಸೋರಿಕೆಯಾಗಿದ್ದು ಅದು ನೀರಿನಲ್ಲೂ ಬೆರೆತಿದೆ. ಇದರಿಂದ ಜೀವ ಸಂಕುಲಕ್ಕೆ ಅಪಾಯ ಎದುರಾಗಿದೆ. ಮಾರಿಷಸ್ನ ಆರ್ಥಿಕತೆ ಹಾಗೂ ಆಹಾರ ಭದ್ರತೆಯ ಮೇಲೆ ಇದು ಭೀಕರ ಪರಿಣಾಮ ಉಂಟುಮಾಡಲಿದೆ. ಆರೋಗ್ಯದ ಮೇಲೂ ದುಷ್ಪರಿಣಾಮ ಬೀರಲಿದೆ’ ಎಂದು ಗ್ರೀನ್ಪೀಸ್ ಆಫ್ರಿಕಾ ಸಂಸ್ಥೆಯ ಮ್ಯಾನೇಜರ್ (ಕ್ಲೈಮೇಟ್ ಆ್ಯಂಡ್ ಎನರ್ಜಿ) ಹ್ಯಾಪಿ ಖಾಂಬುಲೆ ಪ್ರಕಟಣೆಯಲ್ಲಿ ಹೇಳಿದ್ದಾರೆ.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
18-08-26 02:42 pm
HK News Staffer
ನಿತಿನ್ ನಬಿನ್ ಸಾರಥ್ಯದಲ್ಲಿ ಬಿಜೆಪಿಗೆ ಹೊಸ ಟೀಮ್ ;...
17-08-26 09:45 pm
ಪ್ರಧಾನಿ ‘ದಿಮಾಗಿ ನಕ್ಸಲರು’ ಹೇಳಿಕೆಗೆ ರಿಜಿಜು ಅರ್ಥ...
17-08-26 05:38 pm
ನೀಟ್ ಪರೀಕ್ಷೆ ರದ್ದುಗೊಳಿಸಲು ತಮಿಳುನಾಡು ವಿಧಾನಸಭೆಯ...
11-08-26 10:25 pm
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
17-08-26 05:07 pm
HK News Staffer
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
18-08-26 10:06 pm
HK News Staffer
ಮೊಬೈಲ್ ಗೀಳು ಬೇಡ ಎಂದಿದ್ದ ಅಜ್ಜನನ್ನೇ ಕೊಲ್ಲಿಸಿದ 1...
18-08-26 06:02 pm
ಚಿಕ್ಕಬಾಣಾವರ ತಂದೆ, ಮಗು ಸಾವಿಗೆ ರೋಚಕ ಟ್ವಿಸ್ಟ್ ;...
18-08-26 03:00 pm
ಬೆಳಗಾವಿಯಲ್ಲಿ ಬೀದಿ ನಾಯಿಗಳ ಅಟ್ಟಹಾಸ ; ವೃದ್ಧನ ಮೇಲ...
17-08-26 10:04 pm
ದಾಂಡೇಲಿ ವೈಲ್ಡರ್ ನೆಸ್ಟ್ ರೆಸಾರ್ಟ್ಗೆ ನುಗ್ಗಿದ ಬ್...
17-08-26 10:02 pm