ಬ್ರೇಕಿಂಗ್ ನ್ಯೂಸ್
14-11-24 11:11 pm HK News Desk ದೇಶ - ವಿದೇಶ
ನವದೆಹಲಿ, ನ.15: ಭಾರತೀಯ ರೈಲ್ವೇ ಹೊಸ ಇತಿಹಾಸ ನಿರ್ಮಿಸಲು ಹೊರಟಿದೆ. ಇಲೆಕ್ಟ್ರಿಸಿಟಿ ಬೇಡ, ಡೀಸೆಲ್ ಕೂಡ ಬೇಡ. ಕೇವಲ ನೀರಿನಿಂದಲೇ ಸಂಚರಿಸಬಲ್ಲ ರೈಲನ್ನು ಚಾಲ್ತಿಗೆ ತರಲಿದೆ. ಹೌದು, ಭಾರತೀಯ ರೈಲ್ವೇಯಿಂದ ಮೊದಲ ಹೈಡ್ರೋಜನ್ ಟ್ರೈನ್ ಸೇವೆ ಆರಂಭಿಸಲಿದೆ. ಎಲ್ಲವೂ ಅಂದ್ಕೊಂಡ ರೀತಿಯಲ್ಲೇ ಆದಲ್ಲಿ ಇದೇ ಡಿಸೆಂಬರ್ ನಲ್ಲಿ ಹೊಸ ರೈಲು ಟ್ರಯಲ್ ರನ್ ಆರಂಭಿಸಲಿದೆ.
ಈ ರೈಲಿಗೆ ನೀರೇ ಇಂಧನ. ಇದು ಹೈಡ್ರೋಜನ್ ಪವರ್ ನಲ್ಲಿ ಸಾಗಬಲ್ಲ ಎಂಜಿನ್ ರೈಲಾಗಿದ್ದು ನೀರು ಹಾಗೂ ಬಿಸಿ ಹವೆ ಮೂಲಕ ಮುಂದೆ ಸಾಗಲಿದೆ. ವಿಶೇಷ ಅಂದರೆ ಇದರಿಂದ ಮಾಲಿನ್ಯ ಶೂನ್ಯವಾಗಿರುತ್ತದೆ. ಪರಿಸರ ಸ್ನೇಹಿ ಅಷ್ಟೇ ಅಲ್ಲ, ಡೀಸೆಲ್ ಎಂಜಿನ್ಗೆ ಹೋಲಿಸಿದರೆ ಶೇಕಡಾ 60 ರಷ್ಟು ಶಬ್ದವೂ ಕಡಿಮೆ. ಮೊದಲ ಹಂತದಲ್ಲಿ ದೇಶಾದ್ಯಂತ 35 ಹೈಡ್ರೋಜನ್ ರೈಲು ಸೇವೆ ಆರಂಭಿಸಲು ರೈಲ್ವೇ ಸಚಿವಾಲಯ ನಿರ್ಧರಿಸಿದೆ.
ನೀರಿನಲ್ಲಿ ಚಲಿಸುವ ರೈಲು ಅನ್ನೋ ಕಾರಣ ಇದರ ವೇಗದಲ್ಲಿ ರಾಜಿಯಿಲ್ಲ. ಗಂಟೆಗೆ 140 ಕಿ.ಮೀ. ವೇಗದಲ್ಲಿ ಹೈಡ್ರೋಜನ್ ರೈಲು ಓಡಲಿದೆಯಂತೆ. ಒಂದು ಬಾರಿ ನೀರು ತುಂಬಿಸಿ ಪ್ರಯಾಣ ಆರಂಭಿಸಿದರೆ 1,000 ಕಿ.ಮೀ. ದೂರ ಕ್ರಮಿಸಲಿದೆ ಎನ್ನುವುದು ಲೆಕ್ಕಾಚಾರ. ನೀರು ತುಂಬಿಸುವುದು ಸವಾಲೇ ಅಲ್ಲ. ಹಾಗಾಗಿ ಅತಿ ಕಡಿಮೆ ವೆಚ್ಚದಲ್ಲಿ ರೈಲು ಓಡಲಿದ್ದು ಎಲ್ಲಾ ದೃಷ್ಟಿಯಿಂದಲೂ ಭಾರತೀಯ ಸಾರಿಗೆಯಲ್ಲಿ ಹೊಸ ಕ್ರಾಂತಿ ಮಾಡಲಿದೆ.
ಮೊದಲ ಹಂತದಲ್ಲಿ ಹೈಡ್ರೋಜನ್ ರೈಲು ಹರ್ಯಾಣದ ಜಿಂದ್-ಸೋನಿಪತ್ ನಡುವಿನ ಮಾರ್ಗದಲ್ಲಿ ಸಂಚರಿಸಲಿದೆ. 90 ಕಿಲೋಮೀಟರ್ ಉದ್ದಕ್ಕೆ ಸಂಚಾರ ಮಾಡಲಿದೆ. ಆರಂಭದಲ್ಲಿ ಡಾರ್ಜಲಿಂಗ್ ಹಿಮಾಲಯನ್ ರೈಲ್ವೇ, ನೀಲಗಿರಿ ಮೌಂಟೈನ್ ರೈಲ್ವೇ, ಕಾಲ್ಕಾ ಶಿಮ್ಲಾ ರೈಲ್ವೇ ಸೇರಿದಂತೆ ಹಲವು ಇಕೋ ಸೆನ್ಸೀಟೀವ್ ವಲಯದಲ್ಲಿ ರೈಲು ಸಂಚರಿಸಲಿದೆ. ಮಳೆ, ಬಿಸಿಲು ಸೇರಿದಂತೆ ಎಲ್ಲ ರೀತಿಯ ಹವಾಮಾನಗಳಲ್ಲೂ ಈ ರೈಲು ಓಡಿದರೆ, ಭಾರತದಲ್ಲಿ ಹೊಸ ಕ್ರಾಂತಿಯೇ ಆಗಲಿದೆ.
Indian Railways, one of the largest rail networks in the world, is all set to transform travel with a new, eco-friendly train that won’t need diesel or electricity.This upcoming “water-powered" hydrogen train will soon be hitting the tracks, showcasing the next step in rail transport for India.
14-12-25 03:19 pm
Bangalore Correspondent
ನೀವು ನಮ್ಮ ಪ್ರತಿನಿಧಿ ಹೊರತು ಯಜಮಾನರಲ್ಲ, ಮಂತ್ರಿಗಳ...
14-12-25 02:37 pm
Earthqake, Davangere, Vijayanagara: ದಾವಣಗೆರೆ,...
13-12-25 10:47 pm
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
14-12-25 07:20 pm
HK News Desk
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಯುಡಿಎಫ್ ಅತಿ ಹೆ...
13-12-25 08:34 pm
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
14-12-25 05:48 pm
Mangalore Correspondent
ಕೇಶವನ ಬದುಕು ಬದಲಿಸಿದ ರಕ್ತಬೀಜ ! ಅಸುರೀತನದ ಜೀವನಕ್...
13-12-25 11:02 pm
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
14-12-25 05:33 pm
Udupi Correspondent
Shivamogga Double Murder: ಶಿವಮೊಗ್ಗದಲ್ಲಿ ಡಬಲ್...
13-12-25 12:51 pm
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm