ಬ್ರೇಕಿಂಗ್ ನ್ಯೂಸ್
14-11-24 11:11 pm HK News Desk ದೇಶ - ವಿದೇಶ
ನವದೆಹಲಿ, ನ.15: ಭಾರತೀಯ ರೈಲ್ವೇ ಹೊಸ ಇತಿಹಾಸ ನಿರ್ಮಿಸಲು ಹೊರಟಿದೆ. ಇಲೆಕ್ಟ್ರಿಸಿಟಿ ಬೇಡ, ಡೀಸೆಲ್ ಕೂಡ ಬೇಡ. ಕೇವಲ ನೀರಿನಿಂದಲೇ ಸಂಚರಿಸಬಲ್ಲ ರೈಲನ್ನು ಚಾಲ್ತಿಗೆ ತರಲಿದೆ. ಹೌದು, ಭಾರತೀಯ ರೈಲ್ವೇಯಿಂದ ಮೊದಲ ಹೈಡ್ರೋಜನ್ ಟ್ರೈನ್ ಸೇವೆ ಆರಂಭಿಸಲಿದೆ. ಎಲ್ಲವೂ ಅಂದ್ಕೊಂಡ ರೀತಿಯಲ್ಲೇ ಆದಲ್ಲಿ ಇದೇ ಡಿಸೆಂಬರ್ ನಲ್ಲಿ ಹೊಸ ರೈಲು ಟ್ರಯಲ್ ರನ್ ಆರಂಭಿಸಲಿದೆ.
ಈ ರೈಲಿಗೆ ನೀರೇ ಇಂಧನ. ಇದು ಹೈಡ್ರೋಜನ್ ಪವರ್ ನಲ್ಲಿ ಸಾಗಬಲ್ಲ ಎಂಜಿನ್ ರೈಲಾಗಿದ್ದು ನೀರು ಹಾಗೂ ಬಿಸಿ ಹವೆ ಮೂಲಕ ಮುಂದೆ ಸಾಗಲಿದೆ. ವಿಶೇಷ ಅಂದರೆ ಇದರಿಂದ ಮಾಲಿನ್ಯ ಶೂನ್ಯವಾಗಿರುತ್ತದೆ. ಪರಿಸರ ಸ್ನೇಹಿ ಅಷ್ಟೇ ಅಲ್ಲ, ಡೀಸೆಲ್ ಎಂಜಿನ್ಗೆ ಹೋಲಿಸಿದರೆ ಶೇಕಡಾ 60 ರಷ್ಟು ಶಬ್ದವೂ ಕಡಿಮೆ. ಮೊದಲ ಹಂತದಲ್ಲಿ ದೇಶಾದ್ಯಂತ 35 ಹೈಡ್ರೋಜನ್ ರೈಲು ಸೇವೆ ಆರಂಭಿಸಲು ರೈಲ್ವೇ ಸಚಿವಾಲಯ ನಿರ್ಧರಿಸಿದೆ.
ನೀರಿನಲ್ಲಿ ಚಲಿಸುವ ರೈಲು ಅನ್ನೋ ಕಾರಣ ಇದರ ವೇಗದಲ್ಲಿ ರಾಜಿಯಿಲ್ಲ. ಗಂಟೆಗೆ 140 ಕಿ.ಮೀ. ವೇಗದಲ್ಲಿ ಹೈಡ್ರೋಜನ್ ರೈಲು ಓಡಲಿದೆಯಂತೆ. ಒಂದು ಬಾರಿ ನೀರು ತುಂಬಿಸಿ ಪ್ರಯಾಣ ಆರಂಭಿಸಿದರೆ 1,000 ಕಿ.ಮೀ. ದೂರ ಕ್ರಮಿಸಲಿದೆ ಎನ್ನುವುದು ಲೆಕ್ಕಾಚಾರ. ನೀರು ತುಂಬಿಸುವುದು ಸವಾಲೇ ಅಲ್ಲ. ಹಾಗಾಗಿ ಅತಿ ಕಡಿಮೆ ವೆಚ್ಚದಲ್ಲಿ ರೈಲು ಓಡಲಿದ್ದು ಎಲ್ಲಾ ದೃಷ್ಟಿಯಿಂದಲೂ ಭಾರತೀಯ ಸಾರಿಗೆಯಲ್ಲಿ ಹೊಸ ಕ್ರಾಂತಿ ಮಾಡಲಿದೆ.
ಮೊದಲ ಹಂತದಲ್ಲಿ ಹೈಡ್ರೋಜನ್ ರೈಲು ಹರ್ಯಾಣದ ಜಿಂದ್-ಸೋನಿಪತ್ ನಡುವಿನ ಮಾರ್ಗದಲ್ಲಿ ಸಂಚರಿಸಲಿದೆ. 90 ಕಿಲೋಮೀಟರ್ ಉದ್ದಕ್ಕೆ ಸಂಚಾರ ಮಾಡಲಿದೆ. ಆರಂಭದಲ್ಲಿ ಡಾರ್ಜಲಿಂಗ್ ಹಿಮಾಲಯನ್ ರೈಲ್ವೇ, ನೀಲಗಿರಿ ಮೌಂಟೈನ್ ರೈಲ್ವೇ, ಕಾಲ್ಕಾ ಶಿಮ್ಲಾ ರೈಲ್ವೇ ಸೇರಿದಂತೆ ಹಲವು ಇಕೋ ಸೆನ್ಸೀಟೀವ್ ವಲಯದಲ್ಲಿ ರೈಲು ಸಂಚರಿಸಲಿದೆ. ಮಳೆ, ಬಿಸಿಲು ಸೇರಿದಂತೆ ಎಲ್ಲ ರೀತಿಯ ಹವಾಮಾನಗಳಲ್ಲೂ ಈ ರೈಲು ಓಡಿದರೆ, ಭಾರತದಲ್ಲಿ ಹೊಸ ಕ್ರಾಂತಿಯೇ ಆಗಲಿದೆ.
Indian Railways, one of the largest rail networks in the world, is all set to transform travel with a new, eco-friendly train that won’t need diesel or electricity.This upcoming “water-powered" hydrogen train will soon be hitting the tracks, showcasing the next step in rail transport for India.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm