ಬ್ರೇಕಿಂಗ್ ನ್ಯೂಸ್
14-11-24 11:11 pm HK News Desk ದೇಶ - ವಿದೇಶ
ನವದೆಹಲಿ, ನ.15: ಭಾರತೀಯ ರೈಲ್ವೇ ಹೊಸ ಇತಿಹಾಸ ನಿರ್ಮಿಸಲು ಹೊರಟಿದೆ. ಇಲೆಕ್ಟ್ರಿಸಿಟಿ ಬೇಡ, ಡೀಸೆಲ್ ಕೂಡ ಬೇಡ. ಕೇವಲ ನೀರಿನಿಂದಲೇ ಸಂಚರಿಸಬಲ್ಲ ರೈಲನ್ನು ಚಾಲ್ತಿಗೆ ತರಲಿದೆ. ಹೌದು, ಭಾರತೀಯ ರೈಲ್ವೇಯಿಂದ ಮೊದಲ ಹೈಡ್ರೋಜನ್ ಟ್ರೈನ್ ಸೇವೆ ಆರಂಭಿಸಲಿದೆ. ಎಲ್ಲವೂ ಅಂದ್ಕೊಂಡ ರೀತಿಯಲ್ಲೇ ಆದಲ್ಲಿ ಇದೇ ಡಿಸೆಂಬರ್ ನಲ್ಲಿ ಹೊಸ ರೈಲು ಟ್ರಯಲ್ ರನ್ ಆರಂಭಿಸಲಿದೆ.
ಈ ರೈಲಿಗೆ ನೀರೇ ಇಂಧನ. ಇದು ಹೈಡ್ರೋಜನ್ ಪವರ್ ನಲ್ಲಿ ಸಾಗಬಲ್ಲ ಎಂಜಿನ್ ರೈಲಾಗಿದ್ದು ನೀರು ಹಾಗೂ ಬಿಸಿ ಹವೆ ಮೂಲಕ ಮುಂದೆ ಸಾಗಲಿದೆ. ವಿಶೇಷ ಅಂದರೆ ಇದರಿಂದ ಮಾಲಿನ್ಯ ಶೂನ್ಯವಾಗಿರುತ್ತದೆ. ಪರಿಸರ ಸ್ನೇಹಿ ಅಷ್ಟೇ ಅಲ್ಲ, ಡೀಸೆಲ್ ಎಂಜಿನ್ಗೆ ಹೋಲಿಸಿದರೆ ಶೇಕಡಾ 60 ರಷ್ಟು ಶಬ್ದವೂ ಕಡಿಮೆ. ಮೊದಲ ಹಂತದಲ್ಲಿ ದೇಶಾದ್ಯಂತ 35 ಹೈಡ್ರೋಜನ್ ರೈಲು ಸೇವೆ ಆರಂಭಿಸಲು ರೈಲ್ವೇ ಸಚಿವಾಲಯ ನಿರ್ಧರಿಸಿದೆ.
ನೀರಿನಲ್ಲಿ ಚಲಿಸುವ ರೈಲು ಅನ್ನೋ ಕಾರಣ ಇದರ ವೇಗದಲ್ಲಿ ರಾಜಿಯಿಲ್ಲ. ಗಂಟೆಗೆ 140 ಕಿ.ಮೀ. ವೇಗದಲ್ಲಿ ಹೈಡ್ರೋಜನ್ ರೈಲು ಓಡಲಿದೆಯಂತೆ. ಒಂದು ಬಾರಿ ನೀರು ತುಂಬಿಸಿ ಪ್ರಯಾಣ ಆರಂಭಿಸಿದರೆ 1,000 ಕಿ.ಮೀ. ದೂರ ಕ್ರಮಿಸಲಿದೆ ಎನ್ನುವುದು ಲೆಕ್ಕಾಚಾರ. ನೀರು ತುಂಬಿಸುವುದು ಸವಾಲೇ ಅಲ್ಲ. ಹಾಗಾಗಿ ಅತಿ ಕಡಿಮೆ ವೆಚ್ಚದಲ್ಲಿ ರೈಲು ಓಡಲಿದ್ದು ಎಲ್ಲಾ ದೃಷ್ಟಿಯಿಂದಲೂ ಭಾರತೀಯ ಸಾರಿಗೆಯಲ್ಲಿ ಹೊಸ ಕ್ರಾಂತಿ ಮಾಡಲಿದೆ.
ಮೊದಲ ಹಂತದಲ್ಲಿ ಹೈಡ್ರೋಜನ್ ರೈಲು ಹರ್ಯಾಣದ ಜಿಂದ್-ಸೋನಿಪತ್ ನಡುವಿನ ಮಾರ್ಗದಲ್ಲಿ ಸಂಚರಿಸಲಿದೆ. 90 ಕಿಲೋಮೀಟರ್ ಉದ್ದಕ್ಕೆ ಸಂಚಾರ ಮಾಡಲಿದೆ. ಆರಂಭದಲ್ಲಿ ಡಾರ್ಜಲಿಂಗ್ ಹಿಮಾಲಯನ್ ರೈಲ್ವೇ, ನೀಲಗಿರಿ ಮೌಂಟೈನ್ ರೈಲ್ವೇ, ಕಾಲ್ಕಾ ಶಿಮ್ಲಾ ರೈಲ್ವೇ ಸೇರಿದಂತೆ ಹಲವು ಇಕೋ ಸೆನ್ಸೀಟೀವ್ ವಲಯದಲ್ಲಿ ರೈಲು ಸಂಚರಿಸಲಿದೆ. ಮಳೆ, ಬಿಸಿಲು ಸೇರಿದಂತೆ ಎಲ್ಲ ರೀತಿಯ ಹವಾಮಾನಗಳಲ್ಲೂ ಈ ರೈಲು ಓಡಿದರೆ, ಭಾರತದಲ್ಲಿ ಹೊಸ ಕ್ರಾಂತಿಯೇ ಆಗಲಿದೆ.
Indian Railways, one of the largest rail networks in the world, is all set to transform travel with a new, eco-friendly train that won’t need diesel or electricity.This upcoming “water-powered" hydrogen train will soon be hitting the tracks, showcasing the next step in rail transport for India.
15-10-25 03:35 pm
Bangalore Correspondent
ರಘು ದೀಕ್ಷಿತ್ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ; 50ರ...
15-10-25 03:32 pm
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ...
14-10-25 11:24 am
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
15-10-25 12:09 pm
HK News Desk
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
15-10-25 05:36 pm
Mangalore Correspondent
ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು ;...
15-10-25 12:12 pm
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm