ಬ್ರೇಕಿಂಗ್ ನ್ಯೂಸ್
27-11-24 12:36 pm HK News Desk ದೇಶ - ವಿದೇಶ
ತ್ರಿಶ್ಶೂರ್, ನ.27: ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿಯೊಂದು ರಸ್ತೆ ಬದಿ ಮಲಗಿದ್ದ ಅಲೆಮಾರಿಗಳ ಮೇಲೆ ಚಲಿಸಿದ ಪರಿಣಾಮ ಇಬ್ಬರು ಮಕ್ಕಳ ಸಹಿತ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೇರಳದ ತ್ರಿಶ್ಶೂರ್ ಜಿಲ್ಲೆಯ ತ್ರಿಪ್ರಯಾರ್ ಎಂಬಲ್ಲಿ ನಡೆದಿದೆ.
ಕಣ್ಣೂರಿನಿಂದ ಎರ್ನಾಕುಲಂ ಕಡೆಗೆ ತೆರಳುತ್ತಿದ್ದ ಲಾರಿ ನಸುಕಿನಲ್ಲಿ ರಸ್ತೆ ಬದಿ ಮಲಗಿದ್ದ ಅಲೆಮಾರಿ ಕುಟುಂಬಸ್ಥರ ಮೇಲೆ ನುಗ್ಗಿದೆ. ಘಟನೆಯಲ್ಲಿ ಕಾಳಿಯಪ್ಪನ್(50), ನಾಗಮ್ಮ(39), ಬಂಗಾಯಿ(28), ಜೀವನ್ (4) ಮತ್ತು ಇನ್ನೊಂದು ಮಗು ಮೃತಪಟ್ಟಿದೆ. ಗಾಯಗೊಂಡ ಮೂವರ ಸ್ಥಿತಿ ಚಿಂತಾಜನಕವಾಗಿದೆ. ಸ್ಥಳದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ಡೈವರ್ಶನ್ ಬೋರ್ಡ್ ಕಾಣಿಸದೆ ಲಾರಿ ಚಾಲಕ ನೇರವಾಗಿ ನುಗ್ಗಿಸಿದ್ದಾನೆ. ಚಾಲಕ ಮತ್ತು ಕ್ಲೀನರ್ ಮದ್ಯ ಸೇವಿಸಿದ್ದು, ಘಟನೆ ಸಂದರ್ಭದಲ್ಲಿ ಕ್ಲೀನರ್ ಲಾರಿ ಚಲಾಯಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಟಿಂಬರ್ ಲಾರಿ ಚಾಲಕ ಕಣ್ಣೂರು ಆಲಂಗೋಡ್ ನಿವಾಸಿ ಜೋಸ್ (54) ಮತ್ತು ಕ್ಲೀನರ್ ಅಲೆಕ್ಸ್ (35) ಅವರನ್ನು ಬಂಧಿಸಲಾಗಿದೆ. ಲಾರಿ ಚಾಲಕ ಮತ್ತು ಕ್ಲೀನರ್ ಪ್ರಯಾಣದುದ್ದಕ್ಕೂ ಮದ್ಯ ಸೇವಿಸುತ್ತ ಬಂದಿದ್ದರು. ಅತಿಯಾದ ಮದ್ಯ ಸೇವನೆ ತಪಾಸಣೆ ವೇಳೆ ಪತ್ತೆಯಾಗಿದೆ. ಇದಕ್ಕಾಗಿ ಇವರ ಮೇಲೆ ಉದ್ದೇಶಪೂರ್ವಕ ಕೊಲೆ ಎನ್ನುವ ನೆಲೆಯಲ್ಲಿ ಕೇಸು ದಾಖಲಿಸಲಾಗಿದೆ. ಪೊನ್ನಾನಿಯಿಂದ ಕ್ಲೀನರ್ ಅಲೆಕ್ಸ್ ಲಾರಿ ಚಲಾಯಿಸಿದ್ದು, ಆತನಲ್ಲಿ ಡ್ರೈವಿಂಗ್ ಲೈಸನ್ಸ್ ಇಲ್ಲ. ಡಿವೈಡರ್ ಮತ್ತು ಬ್ಯಾರಿಕೇಡ್ ನೋಡದೆ ಲಾರಿ ಚಲಾಯಿಸಿದ್ದು, 50 ಮೀಟರ್ ಮುನ್ನುಗ್ಗಿ ಬಂದ ಮೇಲೆ ರಸ್ತೆ ಬದಿ ಮಲಗಿದ್ದವರ ಮೇಲೆ ಹಾಯಿಸಿದ್ದಾನೆ. ಸಾರಿಗೆ ಆಯುಕ್ತರು ಮತ್ತು ಜಿಲ್ಲಾಧಿಕಾರಿ ಸರಕಾರಕ್ಕೆ ವರದಿ ಸಲ್ಲಿಸಿದ್ದಾರೆ.
In a tragic incident at Nattika in Thrissur district, a lorry carrying timber lost control and rammed into a group of people who were sleeping, killing five of them, including two children. The accident took place around 4 a.m. on Tuesday (November 26, 2024).
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm