ಬ್ರೇಕಿಂಗ್ ನ್ಯೂಸ್
27-11-24 12:36 pm HK News Desk ದೇಶ - ವಿದೇಶ
ತ್ರಿಶ್ಶೂರ್, ನ.27: ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿಯೊಂದು ರಸ್ತೆ ಬದಿ ಮಲಗಿದ್ದ ಅಲೆಮಾರಿಗಳ ಮೇಲೆ ಚಲಿಸಿದ ಪರಿಣಾಮ ಇಬ್ಬರು ಮಕ್ಕಳ ಸಹಿತ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೇರಳದ ತ್ರಿಶ್ಶೂರ್ ಜಿಲ್ಲೆಯ ತ್ರಿಪ್ರಯಾರ್ ಎಂಬಲ್ಲಿ ನಡೆದಿದೆ.
ಕಣ್ಣೂರಿನಿಂದ ಎರ್ನಾಕುಲಂ ಕಡೆಗೆ ತೆರಳುತ್ತಿದ್ದ ಲಾರಿ ನಸುಕಿನಲ್ಲಿ ರಸ್ತೆ ಬದಿ ಮಲಗಿದ್ದ ಅಲೆಮಾರಿ ಕುಟುಂಬಸ್ಥರ ಮೇಲೆ ನುಗ್ಗಿದೆ. ಘಟನೆಯಲ್ಲಿ ಕಾಳಿಯಪ್ಪನ್(50), ನಾಗಮ್ಮ(39), ಬಂಗಾಯಿ(28), ಜೀವನ್ (4) ಮತ್ತು ಇನ್ನೊಂದು ಮಗು ಮೃತಪಟ್ಟಿದೆ. ಗಾಯಗೊಂಡ ಮೂವರ ಸ್ಥಿತಿ ಚಿಂತಾಜನಕವಾಗಿದೆ. ಸ್ಥಳದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ಡೈವರ್ಶನ್ ಬೋರ್ಡ್ ಕಾಣಿಸದೆ ಲಾರಿ ಚಾಲಕ ನೇರವಾಗಿ ನುಗ್ಗಿಸಿದ್ದಾನೆ. ಚಾಲಕ ಮತ್ತು ಕ್ಲೀನರ್ ಮದ್ಯ ಸೇವಿಸಿದ್ದು, ಘಟನೆ ಸಂದರ್ಭದಲ್ಲಿ ಕ್ಲೀನರ್ ಲಾರಿ ಚಲಾಯಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಟಿಂಬರ್ ಲಾರಿ ಚಾಲಕ ಕಣ್ಣೂರು ಆಲಂಗೋಡ್ ನಿವಾಸಿ ಜೋಸ್ (54) ಮತ್ತು ಕ್ಲೀನರ್ ಅಲೆಕ್ಸ್ (35) ಅವರನ್ನು ಬಂಧಿಸಲಾಗಿದೆ. ಲಾರಿ ಚಾಲಕ ಮತ್ತು ಕ್ಲೀನರ್ ಪ್ರಯಾಣದುದ್ದಕ್ಕೂ ಮದ್ಯ ಸೇವಿಸುತ್ತ ಬಂದಿದ್ದರು. ಅತಿಯಾದ ಮದ್ಯ ಸೇವನೆ ತಪಾಸಣೆ ವೇಳೆ ಪತ್ತೆಯಾಗಿದೆ. ಇದಕ್ಕಾಗಿ ಇವರ ಮೇಲೆ ಉದ್ದೇಶಪೂರ್ವಕ ಕೊಲೆ ಎನ್ನುವ ನೆಲೆಯಲ್ಲಿ ಕೇಸು ದಾಖಲಿಸಲಾಗಿದೆ. ಪೊನ್ನಾನಿಯಿಂದ ಕ್ಲೀನರ್ ಅಲೆಕ್ಸ್ ಲಾರಿ ಚಲಾಯಿಸಿದ್ದು, ಆತನಲ್ಲಿ ಡ್ರೈವಿಂಗ್ ಲೈಸನ್ಸ್ ಇಲ್ಲ. ಡಿವೈಡರ್ ಮತ್ತು ಬ್ಯಾರಿಕೇಡ್ ನೋಡದೆ ಲಾರಿ ಚಲಾಯಿಸಿದ್ದು, 50 ಮೀಟರ್ ಮುನ್ನುಗ್ಗಿ ಬಂದ ಮೇಲೆ ರಸ್ತೆ ಬದಿ ಮಲಗಿದ್ದವರ ಮೇಲೆ ಹಾಯಿಸಿದ್ದಾನೆ. ಸಾರಿಗೆ ಆಯುಕ್ತರು ಮತ್ತು ಜಿಲ್ಲಾಧಿಕಾರಿ ಸರಕಾರಕ್ಕೆ ವರದಿ ಸಲ್ಲಿಸಿದ್ದಾರೆ.
In a tragic incident at Nattika in Thrissur district, a lorry carrying timber lost control and rammed into a group of people who were sleeping, killing five of them, including two children. The accident took place around 4 a.m. on Tuesday (November 26, 2024).
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm