ಬ್ರೇಕಿಂಗ್ ನ್ಯೂಸ್
29-11-24 06:26 pm HK News Desk ದೇಶ - ವಿದೇಶ
ಮುಂಬೈ, ನ.29: ಮಹಾರಾಷ್ಟ್ರದಲ್ಲಿ ನೂತನ ಸರಕಾರ ರಚನೆ ಕಗ್ಗಂಟು ಮುಂದುವರಿದಿದೆ. ದೆಹಲಿಯಲ್ಲಿ ಶುಕ್ರವಾರ ಬೆಳಗ್ಗೆ ಕರೆಯಲಾಗಿದ್ದ ಮಹಾಯುತಿ ಒಕ್ಕೂಟದ ಸಭೆ ದಿಢೀರ್ ರದ್ದುಗೊಂಡಿದ್ದು, ಹಂಗಾಮಿ ಮುಖ್ಯಮಂತ್ರಿ ಏಕನಾಥ ಶಿಂಧೆ, ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಮತ್ತು ಎನ್ ಸಿಪಿ ನಾಯಕ ಅಜಿತ್ ಪವಾರ್ ಮುಂಬೈಗೆ ಹಿಂತಿರುಗಿದ್ದಾರೆ.
ಗುರುವಾರ ಸಂಜೆ ಕೇಂದ್ರ ಗೃಹ ಸಚಿವ ಅಮಿತ್ ಷಾ ನಿವಾಸದಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಜೊತೆಗೆ ಮಾತುಕತೆ ನಡೆದಿತ್ತು. ಸಚಿವ ಸ್ಥಾನ ಹಂಚಿಕೆ ಕುರಿತಾಗಿ ಮಾತುಕತೆ ಅಂತಿಮ ಆಗಿರಲಿಲ್ಲ. ಶುಕ್ರವಾರ ಬೆಳಗ್ಗೆ ಮತ್ತೆ ಮಹಾಯುತಿ ಒಕ್ಕೂಟ ಸದಸ್ಯರು ಸಭೆ ನಡೆಸುವುದಕ್ಕೆ ಮುಂದಾಗಿದ್ದರು. ಈ ವೇಳೆ, ಸಭೆ ರದ್ದುಗೊಳಿಸಿದ್ದು ಮತ್ತೆ ಅತಂತ್ರ ಸ್ಥಿತಿ ಮುಂದುವರಿದಿದೆ. 132 ಸ್ಥಾನ ಪಡೆದಿರುವ ಬಿಜೆಪಿಗೆ ಮುಖ್ಯಮಂತ್ರಿ ಸ್ಥಾನ ಸಿಗುವುದು ಅಂತಿಮವಾಗಿದೆ. ಅನುಭವದ ನೆಲೆಯಲ್ಲಿ ರಾಜ್ಯ ಮತ್ತು ಕೇಂದ್ರ ನಾಯಕರು ಫಡ್ನವಿಸ್ ಅವರನ್ನು ಸಿಎಂ ಸ್ಥಾನಕ್ಕೇರಿಸುವುದಕ್ಕೆ ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ. ಆದರೆ ಶಿವಸೇನೆ ಮತ್ತು ಎನ್ ಸಿಪಿ ಬಣವು ಪ್ರಮುಖ ಖಾತೆಗಳಿಗೆ ಪಟ್ಟು ಹಿಡಿದಿದ್ದಾರೆ.
ಏಕನಾಥ ಶಿಂಧೆ ಗೃಹ ಸಚಿವ ಮತ್ತು ನಗರಾಭಿವೃದ್ಧಿ ಖಾತೆ ಜೊತೆಗೆ 12 ಸಚಿವ ಸ್ಥಾನಗಳನ್ನು ತಮ್ಮ ಬಣಕ್ಕೆ ನೀಡುವಂತೆ ಕೇಳಿಕೊಂಡಿದ್ದಾರೆ. ಇದಲ್ಲದೆ, ತಮ್ಮ ಮಗನಿಗೆ ಕೇಂದ್ರದಲ್ಲಿ ಸಚಿವ ಸ್ಥಾನ ನೀಡುವಂತೆ ಬೇಡಿಕೆ ಇರಿಸಿದ್ದಾರೆ. ಈ ನಡುವೆ, ಅಜಿತ್ ಪವಾರ್ ಕೂಡ ಪ್ರಮುಖ ಸ್ಥಾನಗಳಿಗೆ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಮಾತುಕತೆ ನಡೆಯುತ್ತಿದ್ದು, ಕೇಂದ್ರದಲ್ಲಿ ಒಬ್ಬರಿಗೆ ಸಚಿವ ಸ್ಥಾನ ನೀಡುವುದಕ್ಕೆ ಬಿಜೆಪಿ ಒಪ್ಪಿದೆ. ಆದರೆ, ರಾಜ್ಯದಲ್ಲಿ ಸಚಿವ ಸ್ಥಾನ ಹಂಚಿಕೆ ಬಗ್ಗೆ ಅಂತಿಮ ಮುದ್ರೆ ಬಿದ್ದಿಲ್ಲ.
ಈ ನಡುವೆ, ಶಿವಸೇನೆ ಕಾರ್ಯಕರ್ತರು ಏಕನಾಥ ಶಿಂಧೆ ಅವರನ್ನೇ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಸಬೇಕೆಂದು ಒತ್ತಾಯಿಸಿದ್ದಾರೆ. ಶಿಂಧೆ ಜಾರಿಗೆ ತಂದ ಲಡ್ಕ್ ಬಹೀನ್ ಯೋಜನೆಯಿಂದಾಗಿ ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನ ಬಂದಿದೆ ಎಂದು ಹೇಳುತ್ತಿದ್ದಾರೆ. ಮುಖ್ಯಮಂತ್ರಿ ಸ್ಥಾನ ಸಿಗದಿದ್ದರೆ ಉಪ ಮುಖ್ಯಮಂತ್ರಿ ಸ್ಥಾನವನ್ನು ನೀಡಲೇಬೇಕೆಂದು ಒತ್ತಾಯ ಮಾಡುತ್ತಿದ್ದಾರೆ.
The formation of the new Maharashtra government remains shrouded in uncertainty as a crucial meeting of the Mahayuti alliance, scheduled for Friday, was cancelled after caretaker Chief Minister Eknath Shinde unexpectedly left for his village in Satara district, delaying discussions on portfolio distribution.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm