ಬ್ರೇಕಿಂಗ್ ನ್ಯೂಸ್
03-12-24 01:46 pm HK News Desk ದೇಶ - ವಿದೇಶ
ತಿರುವಣ್ಣಾಮಲೈ, ಡಿ 03: ‘ಫೆಂಜಲ್’ ಚಂಡಮಾರುತದ ಪರಿಣಾಮ ಸುರಿದ ನಿರಂತರ ಮಳೆಯಿಂದಾಗಿ ಮನೆಯೊಂದರ ಮೇಲೆ ಬೃಹತ್ ಬಂಡೆಯೊಂದು ಬಿದ್ದು ಐವರು ಮಕ್ಕಳು ಸೇರಿದಂತೆ 7 ಮಂದಿ ಮೃತಪಟ್ಟಿದ್ದಾರೆ.
ಎನ್ಡಿಆರ್ಎಫ್ ತಂಡ ಮತ್ತು ಪೊಲೀಸ್ ಸಿಬ್ಬಂದಿಯ ಸತತ ಕಾರ್ಯಾಚರಣೆ ಬಳಿಕ ಅವಶೇಷಗಳಡಿ ಸಿಲುಕಿದ್ದ ಮಗು ಸೇರಿದಂತೆ ಐವರ ಶವಗಳನ್ನು ಹೊರತೆಗೆದಿದ್ದಾರೆ. ಇನ್ನು ಇಬ್ಬರಿಗಾಗಿ ಶೋಧ ಮುಂದುವರಿದಿದೆ.
ಮೃತದೇಹಗಳನ್ನು ಹೊರತೆಗೆದು ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರ ಕುಟುಂಬಕ್ಕೆ ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ 5 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಫೆಂಜಲ್ ಚಂಡಮಾರುತದ ಪರಿಣಾಮ ಉಂಟಾದ ಮಳೆಯಿಂದಾಗಿ ಚೆನ್ನೈ ಮತ್ತು ಅದರ ನೆರೆಯ ಜಿಲ್ಲೆಗಳಾದ ತಿರುವಳ್ಳೂರ್, ಕಾಂಚೀಪುರಂ ಮತ್ತು ಚೆಂಗಲ್ಪಟ್ಟುನಲ್ಲಿ ಚಂಡಮಾರುತವು ಮೊದಲು ಪ್ರಭಾವ ಬೀರಿತ್ತು. ನಂತರ ತಮಿಳುನಾಡಿನ ವಿಲ್ಲುಪುರಂ, ಕಡಲೂರು ಮತ್ತು ಪುದುಚೇರಿಯತ್ತ ಸಾಗಿ ಅಧಿಕ ಮಳೆ ಸುರಿಸಿದೆ. ಬಳಿಕ ತಿರುವಣ್ಣಮಲೈ, ರಾಣಿಪೇಟ್, ವೆಲ್ಲೂರು, ಧರ್ಮಪುರಿ, ಕೃಷ್ಣಗಿರಿ, ಸೇಲಂನಲ್ಲೂ ಮಳೆ ಸುರಿಸಿದೆ.
ಉತ್ತರ ತಮಿಳುನಾಡಿನ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ವಿಲ್ಲುಪುರಂ ಮತ್ತು ಕಡಲೂರಿನ ಹಲವು ಕಡೆಗಳಲ್ಲಿ ರಸ್ತೆಗಳು ಸಂಪೂರ್ಣವಾಗಿ ಜಲಾವೃತವಾಗಿದ್ದು, ವಾಹನಗಳು ಎರಡು ಅಡಿವರೆಗೆ ಮುಳುಗಿದ್ದವು. ಹಲವೆಡೆ ಮನೆಗಳು ಮುಳುಗಿದ್ದು, ಮರಗಳು ಬುಡಮೇಲಾಗಿ ಉರುಳಿ ಬಿದ್ದಿವೆ.
ಭಾರಿ ಮಳೆಯ ಪರಿಣಾಮ ತಿರುವಣ್ಣಾಮಲೈ ಸಮೀಪದ ಸೇತುವೆಯೊಂದು ಭಾಗಶಃ ಮುರಿದುಬಿದ್ದಿದೆ. ಕರುಣಾಪುರಂ ಸಮೀಪದ ಸೇತುವೆ ಮುಳುಗಿ ಸಮೀಪದ ಪ್ರದೇಶಗಳಿಗೆ ನೀರು ನುಗ್ಗಿದೆ. ಗಿಂಗಿ ಸರ್ಕಾರಿ ಆಸ್ಪತ್ರೆಗೆ ನೀರು ನುಗ್ಗಿದ್ದು, ಎಚ್ಚೆತ್ತ ಅಧಿಕಾರಿಗಳು ಕೂಡಲೇ ರೋಗಿಗಳನ್ನು ಸ್ಥಳಾಂತರಿಸಿದ್ದಾರೆ.
ಭಾನುವಾರ ಚಂಡಮಾರುತದ ಕಾರಣದಿಂದಾಗಿ ಪುದುಚೇರಿ, ತಮಿಳುನಾಡಿನಲ್ಲಿ ತಲಾ ನಾಲ್ವರು ಮೃತಪಟ್ಟಿದ್ದರು.
A second landslide hit the Tamil Nadu temple town of Tiruvannamalai Monday afternoon, a day after a first led to a boulder falling on a residential building and killing a family of seven people. The first took place Sunday at 4.30 pm on the lower slopes of the famous Annamalaiyar Hill after heavy rainfall - courtesy Cyclone Fengal, which crossed the coast Saturday afternoon near capital Chennai - battered the district.
18-01-25 05:05 pm
Bangalore Correspondent
ಗದಗ ; ಪ್ರೀತಿಸಲು ಪೀಡಿಸುತ್ತಿದ್ದ ಇಬ್ಬರು ಯುವಕರು,...
16-01-25 05:30 pm
Sp Belagavi, Minister Laxmi Hebbalkar car acc...
15-01-25 09:17 pm
ಮುಡಾ ಪ್ರಕರಣ ; ಸಿಬಿಐ ತನಿಖೆ ಕೋರಿದ್ದ ಅರ್ಜಿ ಜ.27ಕ...
15-01-25 08:22 pm
Dolly Chaiwala, Mangalore; ಅಮೆರಿಕದ ಬಿಲ್ ಗೇಟ್ಸ...
15-01-25 06:37 pm
18-01-25 06:20 pm
HK News Desk
Vijay Kiran Anand 2025: ಮಹಾ ಕುಂಭ ಮೇಳದ ಮುಖ್ಯ ಉ...
16-01-25 09:01 pm
Actor Saif Ali Khan attack stabbed: ಬಾಲಿವುಡ್...
16-01-25 04:24 pm
Bonnie Blue: 12 ಗಂಟೆಯಲ್ಲಿ 1,000ಕ್ಕೂ ಅಧಿಕ ಪುರು...
15-01-25 10:51 pm
Mallikarjun Kharges, L N T chairman: ಕಾಂಗ್ರೆಸ...
15-01-25 10:06 pm
18-01-25 09:27 pm
Mangalore Correspondent
Mangalore Dinesh Gundu Rao, belthandy: ತಾಲೂಕು...
18-01-25 06:16 pm
CM Siddaramaiah, multicultural fest, Mangalor...
17-01-25 11:10 pm
Mangalore court, Rape, Crime: ಇನ್ಸ್ಟಾಗ್ರಾಮ್ ನ...
17-01-25 10:58 pm
Ullal News, Mangalore: ಸೋಮೇಶ್ವರ ; ಬಾಡಿಗೆ ಮನೆಯ...
17-01-25 10:50 pm
18-01-25 10:47 pm
Mangalore Correspondent
Sullia, Mangalore crime: ಸುಳ್ಯ ; ಕುಡಿದ ಅಮಲಿನಲ...
18-01-25 10:28 am
Kotekar Bank Robbery, Latest Update, Mangalor...
17-01-25 07:58 pm
Kotekar Bank Robbery, Mangalore Crime; ಬೀದರ್...
17-01-25 03:02 pm
Bidar SBI Bank Robbery Update, Hyderabad Firi...
17-01-25 02:48 pm