ಬ್ರೇಕಿಂಗ್ ನ್ಯೂಸ್
03-12-24 01:46 pm HK News Desk ದೇಶ - ವಿದೇಶ
ತಿರುವಣ್ಣಾಮಲೈ, ಡಿ 03: ‘ಫೆಂಜಲ್’ ಚಂಡಮಾರುತದ ಪರಿಣಾಮ ಸುರಿದ ನಿರಂತರ ಮಳೆಯಿಂದಾಗಿ ಮನೆಯೊಂದರ ಮೇಲೆ ಬೃಹತ್ ಬಂಡೆಯೊಂದು ಬಿದ್ದು ಐವರು ಮಕ್ಕಳು ಸೇರಿದಂತೆ 7 ಮಂದಿ ಮೃತಪಟ್ಟಿದ್ದಾರೆ.
ಎನ್ಡಿಆರ್ಎಫ್ ತಂಡ ಮತ್ತು ಪೊಲೀಸ್ ಸಿಬ್ಬಂದಿಯ ಸತತ ಕಾರ್ಯಾಚರಣೆ ಬಳಿಕ ಅವಶೇಷಗಳಡಿ ಸಿಲುಕಿದ್ದ ಮಗು ಸೇರಿದಂತೆ ಐವರ ಶವಗಳನ್ನು ಹೊರತೆಗೆದಿದ್ದಾರೆ. ಇನ್ನು ಇಬ್ಬರಿಗಾಗಿ ಶೋಧ ಮುಂದುವರಿದಿದೆ.
ಮೃತದೇಹಗಳನ್ನು ಹೊರತೆಗೆದು ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರ ಕುಟುಂಬಕ್ಕೆ ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ 5 ಲಕ್ಷ ಪರಿಹಾರ ಘೋಷಿಸಿದ್ದಾರೆ.

/pratidin/media/media_files/2024/12/02/VPSbKqRHKQFar6mmlRRC.jpg)


ಫೆಂಜಲ್ ಚಂಡಮಾರುತದ ಪರಿಣಾಮ ಉಂಟಾದ ಮಳೆಯಿಂದಾಗಿ ಚೆನ್ನೈ ಮತ್ತು ಅದರ ನೆರೆಯ ಜಿಲ್ಲೆಗಳಾದ ತಿರುವಳ್ಳೂರ್, ಕಾಂಚೀಪುರಂ ಮತ್ತು ಚೆಂಗಲ್ಪಟ್ಟುನಲ್ಲಿ ಚಂಡಮಾರುತವು ಮೊದಲು ಪ್ರಭಾವ ಬೀರಿತ್ತು. ನಂತರ ತಮಿಳುನಾಡಿನ ವಿಲ್ಲುಪುರಂ, ಕಡಲೂರು ಮತ್ತು ಪುದುಚೇರಿಯತ್ತ ಸಾಗಿ ಅಧಿಕ ಮಳೆ ಸುರಿಸಿದೆ. ಬಳಿಕ ತಿರುವಣ್ಣಮಲೈ, ರಾಣಿಪೇಟ್, ವೆಲ್ಲೂರು, ಧರ್ಮಪುರಿ, ಕೃಷ್ಣಗಿರಿ, ಸೇಲಂನಲ್ಲೂ ಮಳೆ ಸುರಿಸಿದೆ.


ಉತ್ತರ ತಮಿಳುನಾಡಿನ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ವಿಲ್ಲುಪುರಂ ಮತ್ತು ಕಡಲೂರಿನ ಹಲವು ಕಡೆಗಳಲ್ಲಿ ರಸ್ತೆಗಳು ಸಂಪೂರ್ಣವಾಗಿ ಜಲಾವೃತವಾಗಿದ್ದು, ವಾಹನಗಳು ಎರಡು ಅಡಿವರೆಗೆ ಮುಳುಗಿದ್ದವು. ಹಲವೆಡೆ ಮನೆಗಳು ಮುಳುಗಿದ್ದು, ಮರಗಳು ಬುಡಮೇಲಾಗಿ ಉರುಳಿ ಬಿದ್ದಿವೆ.
ಭಾರಿ ಮಳೆಯ ಪರಿಣಾಮ ತಿರುವಣ್ಣಾಮಲೈ ಸಮೀಪದ ಸೇತುವೆಯೊಂದು ಭಾಗಶಃ ಮುರಿದುಬಿದ್ದಿದೆ. ಕರುಣಾಪುರಂ ಸಮೀಪದ ಸೇತುವೆ ಮುಳುಗಿ ಸಮೀಪದ ಪ್ರದೇಶಗಳಿಗೆ ನೀರು ನುಗ್ಗಿದೆ. ಗಿಂಗಿ ಸರ್ಕಾರಿ ಆಸ್ಪತ್ರೆಗೆ ನೀರು ನುಗ್ಗಿದ್ದು, ಎಚ್ಚೆತ್ತ ಅಧಿಕಾರಿಗಳು ಕೂಡಲೇ ರೋಗಿಗಳನ್ನು ಸ್ಥಳಾಂತರಿಸಿದ್ದಾರೆ.
ಭಾನುವಾರ ಚಂಡಮಾರುತದ ಕಾರಣದಿಂದಾಗಿ ಪುದುಚೇರಿ, ತಮಿಳುನಾಡಿನಲ್ಲಿ ತಲಾ ನಾಲ್ವರು ಮೃತಪಟ್ಟಿದ್ದರು.
A second landslide hit the Tamil Nadu temple town of Tiruvannamalai Monday afternoon, a day after a first led to a boulder falling on a residential building and killing a family of seven people. The first took place Sunday at 4.30 pm on the lower slopes of the famous Annamalaiyar Hill after heavy rainfall - courtesy Cyclone Fengal, which crossed the coast Saturday afternoon near capital Chennai - battered the district.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
ಗಣೇಶ ಹಬ್ಬದ ಮುಗಿಸಿ ಬೆಂಗಳೂರಿಗೆ ತೆರಳುತ್ತಿದ್ದ ವೇಳ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm