ಬ್ರೇಕಿಂಗ್ ನ್ಯೂಸ್
03-12-24 01:46 pm HK News Desk ದೇಶ - ವಿದೇಶ
ತಿರುವಣ್ಣಾಮಲೈ, ಡಿ 03: ‘ಫೆಂಜಲ್’ ಚಂಡಮಾರುತದ ಪರಿಣಾಮ ಸುರಿದ ನಿರಂತರ ಮಳೆಯಿಂದಾಗಿ ಮನೆಯೊಂದರ ಮೇಲೆ ಬೃಹತ್ ಬಂಡೆಯೊಂದು ಬಿದ್ದು ಐವರು ಮಕ್ಕಳು ಸೇರಿದಂತೆ 7 ಮಂದಿ ಮೃತಪಟ್ಟಿದ್ದಾರೆ.
ಎನ್ಡಿಆರ್ಎಫ್ ತಂಡ ಮತ್ತು ಪೊಲೀಸ್ ಸಿಬ್ಬಂದಿಯ ಸತತ ಕಾರ್ಯಾಚರಣೆ ಬಳಿಕ ಅವಶೇಷಗಳಡಿ ಸಿಲುಕಿದ್ದ ಮಗು ಸೇರಿದಂತೆ ಐವರ ಶವಗಳನ್ನು ಹೊರತೆಗೆದಿದ್ದಾರೆ. ಇನ್ನು ಇಬ್ಬರಿಗಾಗಿ ಶೋಧ ಮುಂದುವರಿದಿದೆ.
ಮೃತದೇಹಗಳನ್ನು ಹೊರತೆಗೆದು ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರ ಕುಟುಂಬಕ್ಕೆ ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ 5 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಫೆಂಜಲ್ ಚಂಡಮಾರುತದ ಪರಿಣಾಮ ಉಂಟಾದ ಮಳೆಯಿಂದಾಗಿ ಚೆನ್ನೈ ಮತ್ತು ಅದರ ನೆರೆಯ ಜಿಲ್ಲೆಗಳಾದ ತಿರುವಳ್ಳೂರ್, ಕಾಂಚೀಪುರಂ ಮತ್ತು ಚೆಂಗಲ್ಪಟ್ಟುನಲ್ಲಿ ಚಂಡಮಾರುತವು ಮೊದಲು ಪ್ರಭಾವ ಬೀರಿತ್ತು. ನಂತರ ತಮಿಳುನಾಡಿನ ವಿಲ್ಲುಪುರಂ, ಕಡಲೂರು ಮತ್ತು ಪುದುಚೇರಿಯತ್ತ ಸಾಗಿ ಅಧಿಕ ಮಳೆ ಸುರಿಸಿದೆ. ಬಳಿಕ ತಿರುವಣ್ಣಮಲೈ, ರಾಣಿಪೇಟ್, ವೆಲ್ಲೂರು, ಧರ್ಮಪುರಿ, ಕೃಷ್ಣಗಿರಿ, ಸೇಲಂನಲ್ಲೂ ಮಳೆ ಸುರಿಸಿದೆ.
ಉತ್ತರ ತಮಿಳುನಾಡಿನ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ವಿಲ್ಲುಪುರಂ ಮತ್ತು ಕಡಲೂರಿನ ಹಲವು ಕಡೆಗಳಲ್ಲಿ ರಸ್ತೆಗಳು ಸಂಪೂರ್ಣವಾಗಿ ಜಲಾವೃತವಾಗಿದ್ದು, ವಾಹನಗಳು ಎರಡು ಅಡಿವರೆಗೆ ಮುಳುಗಿದ್ದವು. ಹಲವೆಡೆ ಮನೆಗಳು ಮುಳುಗಿದ್ದು, ಮರಗಳು ಬುಡಮೇಲಾಗಿ ಉರುಳಿ ಬಿದ್ದಿವೆ.
ಭಾರಿ ಮಳೆಯ ಪರಿಣಾಮ ತಿರುವಣ್ಣಾಮಲೈ ಸಮೀಪದ ಸೇತುವೆಯೊಂದು ಭಾಗಶಃ ಮುರಿದುಬಿದ್ದಿದೆ. ಕರುಣಾಪುರಂ ಸಮೀಪದ ಸೇತುವೆ ಮುಳುಗಿ ಸಮೀಪದ ಪ್ರದೇಶಗಳಿಗೆ ನೀರು ನುಗ್ಗಿದೆ. ಗಿಂಗಿ ಸರ್ಕಾರಿ ಆಸ್ಪತ್ರೆಗೆ ನೀರು ನುಗ್ಗಿದ್ದು, ಎಚ್ಚೆತ್ತ ಅಧಿಕಾರಿಗಳು ಕೂಡಲೇ ರೋಗಿಗಳನ್ನು ಸ್ಥಳಾಂತರಿಸಿದ್ದಾರೆ.
ಭಾನುವಾರ ಚಂಡಮಾರುತದ ಕಾರಣದಿಂದಾಗಿ ಪುದುಚೇರಿ, ತಮಿಳುನಾಡಿನಲ್ಲಿ ತಲಾ ನಾಲ್ವರು ಮೃತಪಟ್ಟಿದ್ದರು.
A second landslide hit the Tamil Nadu temple town of Tiruvannamalai Monday afternoon, a day after a first led to a boulder falling on a residential building and killing a family of seven people. The first took place Sunday at 4.30 pm on the lower slopes of the famous Annamalaiyar Hill after heavy rainfall - courtesy Cyclone Fengal, which crossed the coast Saturday afternoon near capital Chennai - battered the district.
09-07-25 01:53 pm
Bangalore Correspondent
Heart attack, Dharwad, Davanagere: ಉದ್ಯಮಿ ಮಗನ...
09-07-25 11:50 am
ಸಿಎಂ ಸೀಟು ಗೊಂದಲ ಕೇವಲ ಮಾಧ್ಯಮಗಳ ಸೃಷ್ಟಿ ; ಮೊದಲು...
08-07-25 08:35 pm
Karnataka Ban Online Betting and Gambling: ಆನ...
08-07-25 05:01 pm
Exorcism Ritual in Shivamogga, Death; ದೆವ್ವ ಬ...
08-07-25 02:47 pm
07-07-25 08:45 pm
HK News Desk
ಅಮೆರಿಕದ ಟೆಕ್ಸಾಸ್ನಲ್ಲಿ ಭೀಕರ ಪ್ರವಾಹ ; 28 ಮಕ್ಕಳ...
07-07-25 04:11 pm
ಟೆಕ್ಸಾಸ್ ನಲ್ಲಿ ದಿಢೀರ್ ಪ್ರವಾಹ ; 27 ಮಂದಿ ಸಾವು,...
06-07-25 03:53 pm
ಹಿಜಾಬ್ ; ಪರೀಕ್ಷಾ ಕೊಠಡಿಗೆ ನುಗ್ಗಿ ಆವಾಜ್, ಪಿಇಎಸ್...
02-07-25 11:05 pm
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
08-07-25 09:33 pm
Mangalore Correspondent
“Mission Possible: KMC Attavar Performs Life-...
08-07-25 03:37 pm
KMC Hospital Mangalore, Attavar, Surgery: ಅಪಘ...
08-07-25 03:27 pm
Mangalore suicide, Thumbe: ಮೊಬೈಲ್ ಗೀಳು ; ತುಂಬ...
08-07-25 10:15 am
ಎಂಟು ವರ್ಷದ ಪ್ರೀತಿ ಸಾವಿನಲ್ಲಿ ಅಂತ್ಯ ; ಪ್ರೀತಿಸುತ...
07-07-25 05:02 pm
08-07-25 10:01 pm
Bengaluru Staffer
Mangalore, Job Fraud, Crime: ಪಾರ್ಟ್ ಟೈಮ್ ಕೆಲಸ...
07-07-25 10:31 pm
Job Fraud, Mangalore, Doctor: ದುಬೈನ ಎನ್ಎಂಸಿ ಹ...
07-07-25 10:18 pm
ಹದಿನಾರರ ವಯಸ್ಸು ಹುಚ್ಚುಕೋಡಿ ಮನಸ್ಸು ; 16ರ ಹುಡುಗಿ...
07-07-25 07:13 pm
Digital Arrest, Cyber Fraud, Mangalore: ಡಿಜಿಟ...
07-07-25 03:30 pm