ಬ್ರೇಕಿಂಗ್ ನ್ಯೂಸ್
12-12-24 08:56 pm HK News Desk ದೇಶ - ವಿದೇಶ
ನವದೆಹಲಿ, ಡಿ.12: ಪ್ಲಾಸ್ಟಿಕ್ ಈಗ ಮನುಷ್ಯನ ಪಾಲಿಗೆ ಅನಿವಾರ್ಯ ಎನ್ನುವಷ್ಟರ ಮಟ್ಟಿಗೆ ಬೆಳೆದುಬಿಟ್ಟಿದೆ. ಆದರೆ, ಇದೇ ಪ್ಲಾಸ್ಟಿಕ್ ಮನುಷ್ಯನ ಆರೋಗ್ಯಕ್ಕೂ ಮುಳುವಾಗುತ್ತಿದೆ ಎನ್ನುವ ಅಧ್ಯಯನ ವರದಿ ಬಂದಿದೆ. ಪರಿಸರದಲ್ಲಿ ಕರಗುವ ಮೈಕ್ರೋ ಪ್ಲಾಸ್ಟಿಕ್ ಅಂಶಗಳು ಮನುಷ್ಯನ ರಕ್ತ ಸೇರುತ್ತಿದ್ದು, ಇದರಿಂದ ಹೃದಯಾಘಾತಕ್ಕೆ ಕಾರಣವಾಗುತ್ತಿದೆ ಎಂದು ದಕ್ಷಿಣ ಕೊರಿಯಾದಲ್ಲಿ ನಡೆಸಿದ ಸಂಶೋಧನಾ ವರದಿ ಹೇಳಿದೆ.
ಅಲ್ಲಿ 36 ಮಂದಿ ಆರೋಗ್ಯವಂತರನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ಅವರ ರಕ್ತದಲ್ಲಿ ಎಷ್ಟು ಮೈಕ್ರೋ ಪ್ಲಾಸ್ಟಿಕ್ ಅಂಶ ಇದೆ ಮತ್ತು ರಕ್ತ ಹೆಪ್ಪುಗಟ್ಟುವ ಅಂಶ ಎಷ್ಟಿದೆ ಎಂದು ತಪಾಸಣೆ ನಡೆಸಿದಾಗ, ಅಚ್ಚರಿ ವರದಿ ಬಂದಿದೆ. ಇವರಲ್ಲಿ 89 ಶೇಕಡಾದಷ್ಟು ಮಂದಿಗೆ ದೇಹದಲ್ಲಿ ಮೈಕ್ರೋ ಪ್ಲಾಸ್ಟಿಕ್ ಇರುವುದು ಪತ್ತೆಯಾಗಿದ್ದು, ಪ್ರತಿ ಮೈಕ್ರೋ ಮಿಲಿ ಲೀಟರ್ ರಕ್ತದಲ್ಲಿ 4.2ರಷ್ಟು ಸರಾಸರಿಯಷ್ಟು ಪ್ಲಾಸ್ಟಿಕ್ ಸಿಕ್ಕಿದೆ.
ಹೆಚ್ಚಿನವರಲ್ಲಿ ಪಾಲಿ ಸ್ಟಿರೈನ್ ಎನ್ನುವ ರೀತಿಯ ಪ್ಲಾಸ್ಟಿಕ್ ಅಂಶ ಪತ್ತೆಯಾಗಿದೆ. ಬಳಸಿ ಎಸೆಯುವ ಕಪ್, ಇನ್ನಿತರ ವಸ್ತುಗಳಲ್ಲಿ ಈ ಮಾದರಿಯ ಪ್ಲಾಸ್ಟಿಕ್ ಅಂಶ ಇರುತ್ತದೆ. ಇದಲ್ಲದೆ, ಫುಡ್ ಪ್ಯಾಕೇಜಿಂಗ್ ಪ್ಲಾಸ್ಟಿಕ್ ನಲ್ಲಿ ಬಳಸುವ ಪಾಲಿ ಪ್ರೊಪೈಲಿನ್ ಅಂಶವೂ ರಕ್ತದಲ್ಲಿ ಪತ್ತೆಯಾಗಿದೆ. ಆಧುನಿಕ ಜೀವನ ಕ್ರಮ, ಪ್ಲಾಸ್ಟಿಕ್ ನಲ್ಲಿ ಕಟ್ಟಿರುವ ಆಹಾರ ಪದಾರ್ಥಗಳ ಬಳಕೆಯಿಂದ ದೇಹಕ್ಕೆ ಪ್ಲಾಸ್ಟಿಕ್ ಸೇರುತ್ತಿದೆ ಎನ್ನಲಾಗುತ್ತಿದೆ. ರಕ್ತದಲ್ಲಿ ಮೈಕ್ರೋ ಪ್ಲಾಸ್ಟಿಕ್ ಅಂಶ ಇರುವ ಮಂದಿಗೆ ಬ್ಲಡ್ ಕ್ಲಾಟಿಂಗ್ (ರಕ್ತ ಹೆಪ್ಪುಗಟ್ಟುವ) ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ ಎನ್ನುವುದು ಅಧ್ಯಯನದಲ್ಲಿ ಕಂಡುಬಂದ ಅಂಶ.
ಆಧುನಿಕ ಜೀವನ ಕ್ರಮದಿಂದಾಗಿ ಜಗತ್ತಿನಾದ್ಯಂತ ಹಾರ್ಟ್ ಅಟ್ಯಾಕ್, ಬ್ರೇನ್ ಹೇಮರೇಜ್ ಆಗುವುದು ಹೆಚ್ಚುತ್ತಿದೆ. ಹೀಗಾಗಿ ಪ್ಲಾಸ್ಟಿಕ್ ಕೇವಲ ಪರಿಸರಕ್ಕೆ ಮಾತ್ರ ಹಾನಿ ಮಾಡುವುದಲ್ಲ. ಮನುಷ್ಯನ ಆರೋಗ್ಯ, ಹೃದಯಕ್ಕೂ ಹಾನಿ ಮಾಡುತ್ತಿದೆ. ಇದರಿಂದಾಗಿ ಪ್ಲಾಸ್ಟಿಕ್ ನಲ್ಲಿ ಪ್ಯಾಕೇಟ್ ಮಾಡುವ ಆಹಾರ ವಸ್ತುಗಳನ್ನು ಆದಷ್ಟು ಕಡಿಮೆ ಮಾಡುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ವೈದ್ಯರು ಸಲಹೆ ಮಾಡಿದ್ದಾರೆ.
A recent study has highlighted an unsettling connection between tiny plastic particles or microplastics in human blood and the potential health risks.
18-02-26 09:02 pm
HK Desk
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:24 pm
Mangaluru Staffer
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್...
18-02-26 10:46 pm
MIR Group, Mangalore: ಮಂಗಳೂರಿನಲ್ಲಿ ಇಟಲಿಯ ಮೀರ್...
18-02-26 10:24 pm
CA Raghavendra Rao, Death: ಶ್ರೀನಿವಾಸ ಸಮೂಹ ಶಿಕ...
18-02-26 11:19 am
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm