ಬ್ರೇಕಿಂಗ್ ನ್ಯೂಸ್
17-12-24 05:31 pm HK News ದೇಶ - ವಿದೇಶ
ನವದೆಹಲಿ, ಡಿ.17: ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಕೇಂದ್ರ ಸರ್ಕಾರ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ 'ಒಂದು ದೇಶ- ಒಂದು ಚುನಾವಣೆ' ತಿದ್ದುಪಡಿ ಮಸೂದೆಯನ್ನು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದೆ.
ಒಂದು ದೇಶ, ಒಂದು ಚುನಾವಣೆ" ಮಸೂದೆ ಎಂದು ಕರೆಯಲ್ಪಡುವ ಸಂವಿಧಾನ (129ನೇ ತಿದ್ದುಪಡಿ) ತಿದ್ದುಪಡಿ ಮಸೂದೆ, 2024 ಅನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಲೋಕಸಭೆಯಲ್ಲಿ ಮಂಡಿಸಿದರು. ಈ ವೇಳೆ, ಪ್ರಧಾನಿ ಮೋದಿ ಸಹಿತ ಆಡಳಿತ ಪಕ್ಷದ ಎಲ್ಲಾ ಸದಸ್ಯರು ಮೇಜು ತಟ್ಟುವ ಮೂಲಕ ಮಸೂದೆಗೆ ಬೆಂಬಲ ಸೂಚಿಸಿದರೆ, ವಿಪಕ್ಷ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಇದು ಅಸಾಂವಿಧಾನಿಕ, ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತದೆ ಮತ್ತು ಸಂವಿಧಾನದ ಮೂಲ ರಚನೆಯನ್ನು ಉಲ್ಲಂಘಿಸುತ್ತದೆ. ಹೀಗಾಗಿ ಮಸೂದೆ ಹಿಂಪಡೆಯಬೇಕು ಎಂದು ವಿಪಕ್ಷ ಸದಸ್ಯರು ಒತ್ತಾಯಿಸಿದರು.
ಬಳಿಕ ಮಸೂದೆಗೆ ಒಪ್ಪಿಗೆ ಪಡೆಯಲು ಮತಯಂತ್ರದ ಮೂಲಕ ಮತಕ್ಕೆ ಹಾಕಲಾಯಿತು. ಮಸೂದೆ ಪರವಾಗಿ 269 ಮತ ಹಾಗೂ ವಿರುದ್ಧವಾಗಿ 198 ಮತಗಳು ಚಲಾವಣೆಯಾದವು. 70 ಸದಸ್ಯರು ಸದನಕ್ಕೆ ಈ ವೇಳೆ ಗೈರಾಗಿದ್ದರು. ಹೊಸ ಸಂಸತ್ ಭವನದಲ್ಲಿ ಇದೇ ಮೊದಲ ಬಾರಿಗೆ ವಿದ್ಯುನ್ಮಾನ ಮತಯಂತ್ರವನ್ನು ಬಳಸಲಾಯಿತು. ಮತದಾನದ ನಂತರ ಕಲಾಪವನ್ನು ಮಧ್ಯಾಹ್ನ 3 ಗಂಟೆಯ ವರೆಗೆ ಒಂದು ಗಂಟೆಗೂ ಹೆಚ್ಚು ಕಾಲ ಮುಂದೂಡಲಾಯಿತು.
ಮಸೂದೆಗೆ ಕಾಂಗ್ರೆಸ್, ಟಿಎಂಸಿ, ಎಸ್ಪಿ ಸೇರಿದಂತೆ ಹಲವು ಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಈ ಮಸೂದೆ ತರುವ ಅಗತ್ಯ ಏನಿದೆ ಎಂದು ಸಮಾಜವಾದಿ ಲಕ್ಷದ ಸಂಸದ ಧರ್ಮೇಂದ್ರ ಯಾದವ್ ಪ್ರಶ್ನಿಸಿದ್ದಾರೆ. ಇದಕ್ಕು ಮುನ್ನ 'ಒಂದು ದೇಶ, ಒಂದು ಚುನಾವಣೆ' ಮಸೂದೆ ಮಂಡಿಸುವುದನ್ನು ವಿರೋಧಿಸಿ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಅವರು ಲೋಕಸಭೆ ಪ್ರಧಾನ ಕಾರ್ಯದರ್ಶಿಗೆ ಔಪಚಾರಿಕ ನೋಟಿಸ್ ಸಲ್ಲಿಸಿದ್ದರು.
Two bills that lay down the mechanism to hold simultaneous elections – The Constitution (One Hundred and Twenty-Ninth Amendment) Bill, 2024′ and ‘The Union Territories Laws (Amendment) Bill, 2024’, were formally introduced in the Lok Sabha on Tuesday, amid a fiery debate.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm