ಬ್ರೇಕಿಂಗ್ ನ್ಯೂಸ್
17-12-24 05:31 pm HK News ದೇಶ - ವಿದೇಶ
ನವದೆಹಲಿ, ಡಿ.17: ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಕೇಂದ್ರ ಸರ್ಕಾರ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ 'ಒಂದು ದೇಶ- ಒಂದು ಚುನಾವಣೆ' ತಿದ್ದುಪಡಿ ಮಸೂದೆಯನ್ನು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದೆ.
ಒಂದು ದೇಶ, ಒಂದು ಚುನಾವಣೆ" ಮಸೂದೆ ಎಂದು ಕರೆಯಲ್ಪಡುವ ಸಂವಿಧಾನ (129ನೇ ತಿದ್ದುಪಡಿ) ತಿದ್ದುಪಡಿ ಮಸೂದೆ, 2024 ಅನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಲೋಕಸಭೆಯಲ್ಲಿ ಮಂಡಿಸಿದರು. ಈ ವೇಳೆ, ಪ್ರಧಾನಿ ಮೋದಿ ಸಹಿತ ಆಡಳಿತ ಪಕ್ಷದ ಎಲ್ಲಾ ಸದಸ್ಯರು ಮೇಜು ತಟ್ಟುವ ಮೂಲಕ ಮಸೂದೆಗೆ ಬೆಂಬಲ ಸೂಚಿಸಿದರೆ, ವಿಪಕ್ಷ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಇದು ಅಸಾಂವಿಧಾನಿಕ, ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತದೆ ಮತ್ತು ಸಂವಿಧಾನದ ಮೂಲ ರಚನೆಯನ್ನು ಉಲ್ಲಂಘಿಸುತ್ತದೆ. ಹೀಗಾಗಿ ಮಸೂದೆ ಹಿಂಪಡೆಯಬೇಕು ಎಂದು ವಿಪಕ್ಷ ಸದಸ್ಯರು ಒತ್ತಾಯಿಸಿದರು.
ಬಳಿಕ ಮಸೂದೆಗೆ ಒಪ್ಪಿಗೆ ಪಡೆಯಲು ಮತಯಂತ್ರದ ಮೂಲಕ ಮತಕ್ಕೆ ಹಾಕಲಾಯಿತು. ಮಸೂದೆ ಪರವಾಗಿ 269 ಮತ ಹಾಗೂ ವಿರುದ್ಧವಾಗಿ 198 ಮತಗಳು ಚಲಾವಣೆಯಾದವು. 70 ಸದಸ್ಯರು ಸದನಕ್ಕೆ ಈ ವೇಳೆ ಗೈರಾಗಿದ್ದರು. ಹೊಸ ಸಂಸತ್ ಭವನದಲ್ಲಿ ಇದೇ ಮೊದಲ ಬಾರಿಗೆ ವಿದ್ಯುನ್ಮಾನ ಮತಯಂತ್ರವನ್ನು ಬಳಸಲಾಯಿತು. ಮತದಾನದ ನಂತರ ಕಲಾಪವನ್ನು ಮಧ್ಯಾಹ್ನ 3 ಗಂಟೆಯ ವರೆಗೆ ಒಂದು ಗಂಟೆಗೂ ಹೆಚ್ಚು ಕಾಲ ಮುಂದೂಡಲಾಯಿತು.
ಮಸೂದೆಗೆ ಕಾಂಗ್ರೆಸ್, ಟಿಎಂಸಿ, ಎಸ್ಪಿ ಸೇರಿದಂತೆ ಹಲವು ಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಈ ಮಸೂದೆ ತರುವ ಅಗತ್ಯ ಏನಿದೆ ಎಂದು ಸಮಾಜವಾದಿ ಲಕ್ಷದ ಸಂಸದ ಧರ್ಮೇಂದ್ರ ಯಾದವ್ ಪ್ರಶ್ನಿಸಿದ್ದಾರೆ. ಇದಕ್ಕು ಮುನ್ನ 'ಒಂದು ದೇಶ, ಒಂದು ಚುನಾವಣೆ' ಮಸೂದೆ ಮಂಡಿಸುವುದನ್ನು ವಿರೋಧಿಸಿ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಅವರು ಲೋಕಸಭೆ ಪ್ರಧಾನ ಕಾರ್ಯದರ್ಶಿಗೆ ಔಪಚಾರಿಕ ನೋಟಿಸ್ ಸಲ್ಲಿಸಿದ್ದರು.
Two bills that lay down the mechanism to hold simultaneous elections – The Constitution (One Hundred and Twenty-Ninth Amendment) Bill, 2024′ and ‘The Union Territories Laws (Amendment) Bill, 2024’, were formally introduced in the Lok Sabha on Tuesday, amid a fiery debate.
18-02-26 09:02 pm
HK Desk
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:24 pm
Mangaluru Staffer
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್...
18-02-26 10:46 pm
MIR Group, Mangalore: ಮಂಗಳೂರಿನಲ್ಲಿ ಇಟಲಿಯ ಮೀರ್...
18-02-26 10:24 pm
CA Raghavendra Rao, Death: ಶ್ರೀನಿವಾಸ ಸಮೂಹ ಶಿಕ...
18-02-26 11:19 am
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm