ಬ್ರೇಕಿಂಗ್ ನ್ಯೂಸ್
25-12-24 04:21 pm HK News Desk ದೇಶ - ವಿದೇಶ
ನವದೆಹಲಿ, ಡಿ.25: ಗಲಭೆ ಪೀಡಿತ ಮಣಿಪುರ ಸೇರಿದಂತೆ ಐದು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಕೇಂದ್ರ ಸರ್ಕಾರ ಸಲ್ಲಿಸಿದ್ದ ಮನವಿಗೆ ರಾಷ್ಟ್ರಪತಿ ಒಪ್ಪಿಗೆ ನೀಡಿದ್ದಾರೆ. ಕೇರಳ ರಾಜ್ಯಪಾಲರಾಗಿದ್ದ ಆರಿಫ್ ಮೊಹಮ್ಮದ್ ಖಾನ್ ಅವರನ್ನು ಬಿಹಾರಕ್ಕೆ ವರ್ಗಾವಣೆ ಮಾಡಲಾಗಿದೆ.
ಒಂದು ವರ್ಷಕ್ಕೂ ಹೆಚ್ಚು ಕಾಲದಿಂದ ಘರ್ಷಣೆಗೆ ತುತ್ತಾಗಿರುವ ಮಣಿಪುರ ರಾಜ್ಯಪಾಲರಾಗಿ ಕೇಂದ್ರದ ಮಾಜಿ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರನ್ನು ನೇಮಕ ಮಾಡಲಾಗಿದೆ. ಅಜಯ್ ಕುಮಾರ್ ಭಲ್ಲಾ 1984ರ ಬ್ಯಾಚಿನ ಅಸ್ಸಾಂ-ಮೇಘಾಲಯ ಕೇಡರ್ ಐಎಎಸ್ ಅಧಿಕಾರಿಯಾಗಿದ್ದು ಕಳೆದ ಆಗಸ್ಟ್ನಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಹುದ್ದೆಯಿಂದ ನಿವೃತ್ತಿ ಹೊಂದಿದ್ದರು.
ಕೇಂದ್ರ ಸರಕಾರದಲ್ಲಿ ಸಚಿವರಾಗಿದ್ದ ನಿವೃತ್ತ ಸೇನಾ ಮುಖ್ಯಸ್ಥ ಡಾ.ವಿಜಯ ಕುಮಾರ್ ಸಿಂಗ್ (ವಿ.ಕೆ.ಸಿಂಗ್) ಅವರನ್ನು ಮಿಜೋರಾಂ ರಾಜ್ಯಪಾಲರಾಗಿ ನೇಮಕ ಮಾಡಲಾಗಿದೆ. ಮಿಜೋರಾಂ ರಾಜ್ಯಪಾಲರಾಗಿದ್ದ ಹರಿಬಾಬು ಕಂಭಮ್ಪತಿ ಅವರನ್ನು ಒಡಿಶಾ ಗವರ್ನರ್ ಆಗಿ ನೇಮಿಸಲಾಗಿದೆ. ಒಡಿಶಾ ರಾಜ್ಯಪಾಲ ರಘುಬರ್ ದಾಸ್ ತಮ್ಮ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ರಾಷ್ಟ್ರಪತಿ ಅಂಗೀಕರಿಸಿದ್ದಾರೆ.
ಕೇರಳ ರಾಜ್ಯಪಾಲರಾಗಿ ತನ್ನ ನಿಷ್ಠುರ ನಡೆಗಳಿಂದ ಹೆಸರು ಗಳಿಸಿದ್ದ ಆರಿಫ್ ಮೊಹಮ್ಮದ್ ಖಾನ್ ಅವರನ್ನು ಬಿಹಾರ ರಾಜ್ಯಪಾಲರಾಗಿ ವರ್ಗಾವಣೆ ಮಾಡಲಾಗಿದೆ. ಅದೇ ರೀತಿ ಬಿಹಾರ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಕೇರಳಕ್ಕೆ ವರ್ಗಾವಣೆ ಮಾಡಲಾಗಿದೆ. ಕೇರಳದಲ್ಲಿ ಎಡರಂಗ ಸರ್ಕಾರದ ಜೊತೆ ಆರಿಫ್ ಮೊಹಮ್ಮದ್ ಖಾನ್ ಜಟಾಪಟಿ ನಡೆಸಿದ್ದರು. ಹೀಗಾಗಿ ಖಾನ್ ವಿರುದ್ಧ ಸಿಎಂ ಪಿಣರಾಯಿ ವಿಜಯನ್ ರಾಷ್ಟ್ರಪತಿಗೆ ದೂರು ನೀಡಿದ್ದರು.
Former Home Secretary Ajay Kumar Bhalla has been appointed as the Governor of Manipur, an official notification said on Tuesday. Bhalla's appointment has come at a time when Manipur is reeling under a resurgence in ethnic violence that has rocked the state since May 2023.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm