ಬ್ರೇಕಿಂಗ್ ನ್ಯೂಸ್
25-12-24 04:21 pm HK News Desk ದೇಶ - ವಿದೇಶ
ನವದೆಹಲಿ, ಡಿ.25: ಗಲಭೆ ಪೀಡಿತ ಮಣಿಪುರ ಸೇರಿದಂತೆ ಐದು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಕೇಂದ್ರ ಸರ್ಕಾರ ಸಲ್ಲಿಸಿದ್ದ ಮನವಿಗೆ ರಾಷ್ಟ್ರಪತಿ ಒಪ್ಪಿಗೆ ನೀಡಿದ್ದಾರೆ. ಕೇರಳ ರಾಜ್ಯಪಾಲರಾಗಿದ್ದ ಆರಿಫ್ ಮೊಹಮ್ಮದ್ ಖಾನ್ ಅವರನ್ನು ಬಿಹಾರಕ್ಕೆ ವರ್ಗಾವಣೆ ಮಾಡಲಾಗಿದೆ.
ಒಂದು ವರ್ಷಕ್ಕೂ ಹೆಚ್ಚು ಕಾಲದಿಂದ ಘರ್ಷಣೆಗೆ ತುತ್ತಾಗಿರುವ ಮಣಿಪುರ ರಾಜ್ಯಪಾಲರಾಗಿ ಕೇಂದ್ರದ ಮಾಜಿ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರನ್ನು ನೇಮಕ ಮಾಡಲಾಗಿದೆ. ಅಜಯ್ ಕುಮಾರ್ ಭಲ್ಲಾ 1984ರ ಬ್ಯಾಚಿನ ಅಸ್ಸಾಂ-ಮೇಘಾಲಯ ಕೇಡರ್ ಐಎಎಸ್ ಅಧಿಕಾರಿಯಾಗಿದ್ದು ಕಳೆದ ಆಗಸ್ಟ್ನಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಹುದ್ದೆಯಿಂದ ನಿವೃತ್ತಿ ಹೊಂದಿದ್ದರು.
ಕೇಂದ್ರ ಸರಕಾರದಲ್ಲಿ ಸಚಿವರಾಗಿದ್ದ ನಿವೃತ್ತ ಸೇನಾ ಮುಖ್ಯಸ್ಥ ಡಾ.ವಿಜಯ ಕುಮಾರ್ ಸಿಂಗ್ (ವಿ.ಕೆ.ಸಿಂಗ್) ಅವರನ್ನು ಮಿಜೋರಾಂ ರಾಜ್ಯಪಾಲರಾಗಿ ನೇಮಕ ಮಾಡಲಾಗಿದೆ. ಮಿಜೋರಾಂ ರಾಜ್ಯಪಾಲರಾಗಿದ್ದ ಹರಿಬಾಬು ಕಂಭಮ್ಪತಿ ಅವರನ್ನು ಒಡಿಶಾ ಗವರ್ನರ್ ಆಗಿ ನೇಮಿಸಲಾಗಿದೆ. ಒಡಿಶಾ ರಾಜ್ಯಪಾಲ ರಘುಬರ್ ದಾಸ್ ತಮ್ಮ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ರಾಷ್ಟ್ರಪತಿ ಅಂಗೀಕರಿಸಿದ್ದಾರೆ.
ಕೇರಳ ರಾಜ್ಯಪಾಲರಾಗಿ ತನ್ನ ನಿಷ್ಠುರ ನಡೆಗಳಿಂದ ಹೆಸರು ಗಳಿಸಿದ್ದ ಆರಿಫ್ ಮೊಹಮ್ಮದ್ ಖಾನ್ ಅವರನ್ನು ಬಿಹಾರ ರಾಜ್ಯಪಾಲರಾಗಿ ವರ್ಗಾವಣೆ ಮಾಡಲಾಗಿದೆ. ಅದೇ ರೀತಿ ಬಿಹಾರ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಕೇರಳಕ್ಕೆ ವರ್ಗಾವಣೆ ಮಾಡಲಾಗಿದೆ. ಕೇರಳದಲ್ಲಿ ಎಡರಂಗ ಸರ್ಕಾರದ ಜೊತೆ ಆರಿಫ್ ಮೊಹಮ್ಮದ್ ಖಾನ್ ಜಟಾಪಟಿ ನಡೆಸಿದ್ದರು. ಹೀಗಾಗಿ ಖಾನ್ ವಿರುದ್ಧ ಸಿಎಂ ಪಿಣರಾಯಿ ವಿಜಯನ್ ರಾಷ್ಟ್ರಪತಿಗೆ ದೂರು ನೀಡಿದ್ದರು.
Former Home Secretary Ajay Kumar Bhalla has been appointed as the Governor of Manipur, an official notification said on Tuesday. Bhalla's appointment has come at a time when Manipur is reeling under a resurgence in ethnic violence that has rocked the state since May 2023.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm