ಬ್ರೇಕಿಂಗ್ ನ್ಯೂಸ್
08-08-20 03:22 pm Headline Karnataka News Network ದೇಶ - ವಿದೇಶ
ತಿರುವನಂತಪುರಂ, ಆಗಸ್ಟ್ 08: ಮುನ್ನಾರ್ನಲ್ಲಿ ಭೂಕುಸಿತ ಉಂಟಾಗಿದ್ದು, 24 ಮಂದಿ ಮೃತಪಟ್ಟಿದ್ದು, 50 ಮಂದಿ ಕಾಣೆಯಾಗಿದ್ದಾರೆ. ಇನ್ನು ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ಅವರು 2 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ 50 ಸಾವಿರ ರುಪಾಯಿ ಪರಿಹಾರ ಘೋಷಿಸಿದ್ದಾರೆ.
ಇನ್ನು ಅವಶೇಷಗಳಡಿಯಲ್ಲಿ 80 ಮಂದಿ ಸಿಕ್ಕಿ ಹಾಕಿಕೊಂಡಿದ್ದಾರೆ ಎಂದು ಶಂಕಿಸಲಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಭೂಕುಸಿತಕ್ಕೆ ಕ್ವಾರ್ಟರ್ಸ್ ಮತ್ತು ಚರ್ಚ್ ಧರೆಗುರುಳಿದ್ದು ಹಲವರು ಸಿಕ್ಕಿಹಾಕಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ನಸುಕಿನ ಜಾವ ಈ ದುರಂತ ಸಂಭವಿಸಿದ್ದರಿಂದ ನಿದ್ದೆಯಲ್ಲಿದ್ದ ಜನರಿಗೆ ಬೆಟ್ಟ ಕುಸಿದು ಬೀಳುವಾಗ ಎದ್ದು ಓಡಿಹೋಗಿ ತಪ್ಪಿಸಿಕೊಳ್ಳಲು ಸಮಯ ಇರಲಿಲ್ಲ. ಇದರಿಂದ ಸಾವು ನೋವು ಹೆಚ್ಚಾಗಿದೆ. ಭಾರೀ ಮಳೆಗೆ ಪ್ರವಾಹ ಉಂಟಾಗಿ ಪೆರಿಯವರ ಸೇತುವೆ ನೀರಿನಲ್ಲಿ ಕೊಚ್ಚಿ ಹೋಗಿದ್ದರಿಂದ ರಕ್ಷಣಾ ಪಡೆಗಳಿಗೆ ದುರ್ಘಟನೆ ನಡೆದ ಸ್ಥಳಕ್ಕೆ ಬೇಗ ತಲುಪಲು ಸಾಧ್ಯವಾಗಿಲ್ಲ.
ಇದುವರೆಗೆ 24 ಮಂದಿಯ ಶವಗಳನ್ನು ಮಣ್ಣಿನಡಿಯಿಂದ ಹೊರತೆಗೆಯಲಾಗಿದೆ. ಪ್ರತಿಕೂಲ ಹವಾಮಾನದಿಂದಾಗಿ ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿದೆ. ಏಳು ಮಂದಿಯನ್ನು ಮಣ್ಣಿನಡಿಯಿಂದ ರಕ್ಷಿಸಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಕ್ಕಿಹಾಕಿಕೊಂಡವರಲ್ಲಿ ಬಹುತೇಕರು ಟೀ ಎಸ್ಟೇಟ್ ನಲ್ಲಿ ಕೆಲಸ ಮಾಡುವ ಕಾರ್ಮಿಕರಾಗಿದ್ದಾರೆ. ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಕೇರಳಕ್ಕೆ ತೆರಳಿ ಅಲ್ಲಿಯ ಜನರಿಗೆ ಸಹಾಯ ಮಾಡಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವಿಟ್ಟರ್ನಲ್ಲಿ ಮನವಿ ಮಾಡಿದ್ದಾರೆ.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm