ಬ್ರೇಕಿಂಗ್ ನ್ಯೂಸ್
08-01-25 11:07 pm HK News Desk ದೇಶ - ವಿದೇಶ
ಚೆನ್ನೈ, ಜ.8: ಅತ್ಯಂತ ಹಳೆಯದಾದ ಸಿಂಧೂ ನಾಗಕರಿಕತೆಯ ಲಿಪಿಗಳು ಲಭ್ಯವಿದ್ದು ಅದನ್ನು ಅರ್ಥೈಸುವುದು ಇಂದಿಗೂ ಕಠಿಣವೇ ಆಗಿದೆ. ಈ ಲಿಪಿಗಳನ್ನು ಓದಿ ಸರಿಯಾಗಿ ಅರ್ಥೈಸುವವರಿಗೆ ತಮಿಳುನಾಡು ಸರ್ಕಾರ ಬಂಪರ್ ಬಹುಮಾನ ಘೋಷಿಸಿದೆ. ಈ ಲಿಪಿಗಳ ಚೆನ್ನಾಗಿ ವಿವರಣೆ ಮಾಡುವವರಿಗೆ ಬರೋಬ್ಬರಿ 1 ಮಿಲಿಯನ್ ಡಾಲರ್ ಬಹುಮಾನ ನೀಡುವುದಾಗಿ ಘೋಷಿಸಲಾಗಿದೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಸಿಂಧೂ ಕಣಿವೆ ನಾಗರಿಕತೆಯ ಲಿಪಿಯನ್ನು ಯಶಸ್ವಿಯಾಗಿ ಅರ್ಥೈಸುವವರಿಗೆ 1 ಮಿಲಿಯನ್ ಡಾಲರ್ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. ಭಾರತದ ಕರೆನ್ಸಿಯಲ್ಲಿ ಇದರ ಮೌಲ್ಯ ಬರೋಬ್ಬರಿ 8.5 ಕೋಟಿ ರೂಪಾಯಿ ಆಗುತ್ತದೆ. ಒಂದು ಕಾಲದಲ್ಲಿ ಪ್ರವರ್ಧಮಾನಕ್ಕೆ ಬರುತ್ತಿದ್ದ ಸಿಂಧೂ ಕಣಿವೆಯ ಬರವಣಿಗೆಯ ವ್ಯವಸ್ಥೆಯನ್ನು ನಾವು ಸ್ಪಷ್ಟವಾಗಿ ಅರ್ಥ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಕಾರ್ಯಕ್ರಮ ಒಂದರಲ್ಲಿ ಸ್ಟಾಲಿನ್ ಅಭಿಪ್ರಾಯ ಪಟ್ಟಿದ್ದಾರೆ.
ಪುರಾತತ್ವ ಶಾಸ್ತ್ರಜ್ಞರು ಮತ್ತು ತಜ್ಞರ ಹಲವಾರು ಪ್ರಯತ್ನಗಳ ಹೊರತಾಗಿಯೂ ಸಿಂಧೂ ಕಣಿವೆ ನಾಗರಿಕತೆ ಕುರಿತ ಹಲವು ಪ್ರಶ್ನೆಗಳಿಗೆ ಉತ್ತರ ಸಿಕ್ಕಿಲ್ಲ. ಇದಕ್ಕಾಗಿ, ಈ ಲಿಪಿಗಳನ್ನು ಓದಿ ಅರ್ಥೈಸಿದವರಿಗೆ ಒಂದು ಮಿಲಿಯನ್ ಡಾಲರ್ ಬಹುಮಾನ ನೀಡುತ್ತೇನೆ ಎಂದು ಮುಖ್ಯಮಂತ್ರಿ ಸ್ಟಾಲಿನ್ ಘೋಷಿಸಿದರು.
ಸಿಂಧೂ ಕಣಿವೆಯಲ್ಲಿ ಗೂಳಿಗಳ ಚಿತ್ರಗಳಿದ್ದವು. ಗೂಳಿ ದ್ರಾವಿಡ ಸಂಕೇತವಾಗಿದ್ದು ಸಿಂಧೂ ಕಣಿವೆಯಿಂದ ಅಲಂಗನಲ್ಲೂರ್ (ಜಲ್ಲಿಕಟ್ಟುಗೆ ಪ್ರಸಿದ್ಧವಾದ ಮಧುರೈ ಬಳಿಯ ಗ್ರಾಮ) ವರೆಗೆ ಹರಡಿದ್ದನ್ನು ತೋರಿಸುತ್ತದೆ. ಇದು ನಮ್ಮ ಸಂಸ್ಕೃತಿಗೆ ಬಹಳ ಹತ್ತಿರವಾಗಿದೆ. ಹೀಗಾಗಿ ಸಿಂಧೂ ಕಣಿವೆಯ ಲಿಪಿ ಅರಿಯುವುದು ನಮ್ಮ ಹಿನ್ನೆಲೆ ಅರಿಯಲು ಅವಶ್ಯಕ ಎಂದಿದ್ದಾರೆ.
ಜಾನ್ ಮಾರ್ಷಲ್ ನೆನೆದ ಸ್ಟಾಲಿನ್!
1924 ರಲ್ಲಿ ಬ್ರಿಟಿಷ್ ವ್ಯಕ್ತಿ ಸರ್ ಜಾನ್ ಮಾರ್ಷಲ್ ಸಿಂಧೂ ಕಣಿವೆ ನಾಗರಿಕತೆಯನ್ನು ಜಗತ್ತಿಗೆ ಪರಿಚಯಿಸಿದರು. ಈ ಆವಿಷ್ಕಾರವು ಭಾರತೀಯ ನಾಗರಿಕತೆ ಎಷ್ಟು ಪ್ರಾಚೀನವಾದದ್ದು ಎಂಬುದರ ಮೇಲೆ ಬೆಳಕು ಚೆಲ್ಲಿತ್ತು. ಸಿಂಧೂ ಕಣಿವೆಯಲ್ಲಿದ್ದವರು ಕ್ರಮೇಣ ವಲಸೆ ಹೋಗಿ ದಕ್ಷಿಣದ ಕಡೆಗೆ ಬಂದು ನೆಲೆಸಲು ಆರಂಭಿಸಿದ್ದರು ಎಂಬ ವಾದವಾಗಿತ್ತು. ದ್ರಾವಿಡ ಸಂಸ್ಕೃತಿಯ ಪ್ರಾತಿನಿಧ್ಯವೆಂದು ಪರಿಗಣಿಸಲಾದ ಗೂಳಿಗಳ ಚಿಹ್ನೆಗಳು ಸಿಂಧೂ ಕಣಿವೆಯ ಕಲಾಕೃತಿಗಳಲ್ಲಿ ಪ್ರಚಲಿತದಲ್ಲಿವೆ ಎಂದು ಅಧ್ಯಯನಗಳು ತೋರಿಸುತ್ತವೆ. ತಮಿಳುನಾಡಿನ ಶಿವಕಲೈ, ಆದಿಚನಲ್ಲೂರು, ಮೈಲಾಡುಂಪರೈ ಮುಂತಾದ ಸ್ಥಳಗಳಲ್ಲಿ ಈ ರೀತಿಯ ಚಿಹ್ನೆಗಳು ಮತ್ತು ಶಾಸನಗಳು ಕಂಡುಬರುತ್ತವೆ. ಇಲ್ಲಿನ ಕುಂಬಾರಿಕೆ ಪ್ರಕಾರವೂ ಶೇ.60 ರಷ್ಟು ಸಿಂಧೂ ಕಣಿವೆ ನಾಗರಿಕತೆಗೆ ಹೋಲಿಕೆಯಾಗುತ್ತದೆ ಎಂದು ಸ್ಟಾಲಿನ್ ಹೇಳಿದ್ದಾರೆ.
With the script of the Indus Valley Civilisation (IVC) remaining a mystery even after a 100 years after its discovery, Tamil Nadu chief minister MK Stalin on Sunday announced a prize of $1 million to those who decipher the ancient script.
18-01-25 05:05 pm
Bangalore Correspondent
ಗದಗ ; ಪ್ರೀತಿಸಲು ಪೀಡಿಸುತ್ತಿದ್ದ ಇಬ್ಬರು ಯುವಕರು,...
16-01-25 05:30 pm
Sp Belagavi, Minister Laxmi Hebbalkar car acc...
15-01-25 09:17 pm
ಮುಡಾ ಪ್ರಕರಣ ; ಸಿಬಿಐ ತನಿಖೆ ಕೋರಿದ್ದ ಅರ್ಜಿ ಜ.27ಕ...
15-01-25 08:22 pm
Dolly Chaiwala, Mangalore; ಅಮೆರಿಕದ ಬಿಲ್ ಗೇಟ್ಸ...
15-01-25 06:37 pm
18-01-25 06:20 pm
HK News Desk
Vijay Kiran Anand 2025: ಮಹಾ ಕುಂಭ ಮೇಳದ ಮುಖ್ಯ ಉ...
16-01-25 09:01 pm
Actor Saif Ali Khan attack stabbed: ಬಾಲಿವುಡ್...
16-01-25 04:24 pm
Bonnie Blue: 12 ಗಂಟೆಯಲ್ಲಿ 1,000ಕ್ಕೂ ಅಧಿಕ ಪುರು...
15-01-25 10:51 pm
Mallikarjun Kharges, L N T chairman: ಕಾಂಗ್ರೆಸ...
15-01-25 10:06 pm
18-01-25 09:27 pm
Mangalore Correspondent
Mangalore Dinesh Gundu Rao, belthandy: ತಾಲೂಕು...
18-01-25 06:16 pm
CM Siddaramaiah, multicultural fest, Mangalor...
17-01-25 11:10 pm
Mangalore court, Rape, Crime: ಇನ್ಸ್ಟಾಗ್ರಾಮ್ ನ...
17-01-25 10:58 pm
Ullal News, Mangalore: ಸೋಮೇಶ್ವರ ; ಬಾಡಿಗೆ ಮನೆಯ...
17-01-25 10:50 pm
19-01-25 12:13 pm
HK News Desk
Mangalore Kotekar bank robbery, Update, Crime...
18-01-25 10:47 pm
Sullia, Mangalore crime: ಸುಳ್ಯ ; ಕುಡಿದ ಅಮಲಿನಲ...
18-01-25 10:28 am
Kotekar Bank Robbery, Latest Update, Mangalor...
17-01-25 07:58 pm
Kotekar Bank Robbery, Mangalore Crime; ಬೀದರ್...
17-01-25 03:02 pm