ಬ್ರೇಕಿಂಗ್ ನ್ಯೂಸ್
12-01-25 05:07 pm HK News Desk ದೇಶ - ವಿದೇಶ
ನವದೆಹಲಿ, ಜ.12: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಿಂದ ಪಾಕಿಸ್ತಾನ ಪರಮಾಣು ಇಂಧನ ಆಯೋಗದ (PAEC) 18 ವಿಜ್ಞಾನಿಗಳನ್ನು ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ್ ಉಗ್ರರು ಅಪಹರಿಸಿದ್ದಾರೆ. ಸ್ಥಳೀಯ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಎಂಟು ಮಂದಿಯನ್ನು ರಕ್ಷಿಸಿದ್ದಾರೆ.
ಕಾಬೂಲ್ ಖೇಲ್ ಪರಮಾಣು ವಿದ್ಯುತ್ ಯೋಜನೆಯಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಕಾರ್ಮಿಕರ ಮೇಲೆ ಭಾರೀ ಶಸ್ತ್ರಸಜ್ಜಿತ ಭಯೋತ್ಪಾದಕರು ದಾಳಿ ನಡೆಸಿದ್ದು 18 ಜನರನ್ನು ಬಂದೂಕು ತೋರಿಸಿ ಒತ್ತೆಯಾಳಾಗಿ ಇರಿಸಿದ್ದರು. ದಾಳಿಕೋರರು ವಿಜ್ಞಾನಿಗಳಿದ್ದ ವಾಹನಕ್ಕೆ ಬೆಂಕಿ ಹಚ್ಚಿ ಪರಾರಿಯಾಗಿದ್ದರು. ಈ ವೇಳೆ, ಸ್ಥಳೀಯ ಪೊಲೀಸರು ಕಾರ್ಯಾಚರಣೆ ನಡೆಸಿ ಎಂಟು ಒತ್ತೆಯಾಳುಗಳನ್ನು ರಕ್ಷಿಸಿದ್ದಾರೆ. ಕಾರ್ಯಾಚರಣೆ ವೇಳೆ ರಕ್ಷಣೆ ಆದವರ ಪೈಕಿ ಮೂವರು ಗಾಯಗೊಂಡಿದ್ದು, ಅವರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ.
ತಾಲಿಬಾನ್ ಪ್ರೇರಿತ ಉಗ್ರರು ಅಪಹರಣದ ಹೊಣೆ ಹೊತ್ತಿದ್ದು, ಅಪಹರಿಸಿದ ಉದ್ಯೋಗಿಗಳ ವೀಡಿಯೊವನ್ನು ಬಿಡುಗಡೆ ಮಾಡಿದ್ದಾರೆ. ದೃಶ್ಯಾವಳಿಯಲ್ಲಿ ಕೆಲವು ಒತ್ತೆಯಾಳುಗಳು ಟಿಟಿಪಿಯ ಬೇಡಿಕೆಗಳನ್ನು ಪೂರೈಸಿ ತಮ್ಮ ಜೀವ ಕಾಪಾಡುವಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಉಗ್ರರ ಬೇಡಿಕೆಗಳಲ್ಲಿ ಪಾಕಿಸ್ತಾನದ ಜೈಲಿನಲ್ಲಿರುವ ಕೈದಿಗಳ ಬಿಡುಗಡೆಯೂ ಸೇರಿದೆ. ಭಯೋತ್ಪಾದಕರು ಯುರೇನಿಯಂ ಅನ್ನು ಸಹ ಲೂಟಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದ್ದು ಪರಮಾಣು ಬಾಂಬ್ ತಯಾರಿಸಿ ವಿಧ್ವಂಸಕ ಕೃತ್ಯಕ್ಕೆ ಸಂಚು ಹೆಣೆಯುತ್ತಿದ್ದಾರೆಯೇ ಎಂಬ ಆತಂಕ ವ್ಯಕ್ತವಾಗಿದೆ.
ಟಿಟಿಪಿ ಮತ್ತು ಬಲೂಚ್ ದಂಗೆಕೋರರು ಅಫ್ಘಾನಿಸ್ತಾನದ ಆಶ್ರಯ ತಾಣಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಪಾಕಿಸ್ತಾನಿ ಅಧಿಕಾರಿಗಳು ಹೇಳುತ್ತಿದ್ದಾರೆ. ವಿಶ್ವಸಂಸ್ಥೆಯಿಂದ ಜಾಗತಿಕ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲ್ಪಟ್ಟ ಟಿಟಿಪಿ ಅಫ್ಘಾನಿಸ್ತಾನದ ಅತಿದೊಡ್ಡ ಉಗ್ರಗಾಮಿ ಗುಂಪು ಎಂದು ಹೇಳಲಾಗಿದೆ.
The Tehrik-i-Taliban Pakistan (TTP) has captured 18 Pakistani nuclear engineers in Dera Ismail Khan district of Khyber Pakhtunkhwa province, according to a report. A video of engineers has surfaced that purportedly shows them in custody. The engineers are said to be requesting their government to rescue them in the video.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 03:07 pm
Mangalore Correspondent
ದಶಮ ಸಂಭ್ರಮದಲ್ಲಿ ಮಿಥುನ್ ರೈ ಸಾರಥ್ಯದ ಪಿಲಿನಲಿಕೆ ;...
09-09-25 02:30 pm
Mangalore Accident, Kulur, Death: ಕುಳೂರಿನಲ್ಲಿ...
09-09-25 11:48 am
Gopadi Beach Drowning, Kundapura: ಕುಂದಾಪುರ ;...
08-09-25 12:08 pm
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm