ಬ್ರೇಕಿಂಗ್ ನ್ಯೂಸ್
13-01-25 09:58 am HK News Desk ದೇಶ - ವಿದೇಶ
ಮುಂಬೈ, ಜ.13: ಲಾರ್ಸೆನ್ ಅಂಡ್ ಟಬ್ರೊ (L&T) ಅಧ್ಯಕ್ಷ ಎಸ್.ಎನ್ ಸುಬ್ರಹ್ಮಣ್ಯನ್ ಅವರ 90 ಗಂಟೆ ಕೆಲಸದ ಹೇಳಿಕೆ ದೇಶದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದೀಗ ಸುಬ್ರಹ್ಮಣ್ಯನ್ ಅವರ ಹೇಳಿಕೆಗೆ ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟಾಂಗ್ ಕೊಟ್ಟಿದ್ದಾರೆ. ನನ್ನ ಹೆಂಡತಿ ಸುಂದರವಾಗಿದ್ದಾಳೆ, ಅವಳನ್ನು ನೋಡುವುದನ್ನು ಇಷ್ಟಪಡುತ್ತೇನೆ ಎಂದವರು ಹೇಳಿದ್ದಾರೆ.
ಇನ್ಫೋಸಿಸ್ ನಾರಾಯಣ ಮೂರ್ತಿ ಅವರು ದಿನಕ್ಕೆ 12 ಗಂಟೆ ವಾರಕ್ಕೆ 70 ಗಂಟೆ ಕೆಲಸ ಮಾಡುವಂತೆ ಸಲಹೆ ಕೊಟ್ಟಿದ್ದರು. ಇದರ ಬೆನ್ನಲ್ಲೇ ಎಲ್ ಅಂಡ್ ಟಿ ಕಂಪನಿಯ ಅಧ್ಯಕ್ಷ ಎಸ್.ಎನ್ ಸುಬ್ರಹ್ಮಣ್ಯ ವಾರಕ್ಕೆ 90 ಗಂಟೆ ಕೆಲಸ ಮಾಡುವಂತೆ ಹೇಳಿದ್ದಲ್ಲದೆ, ಭಾನುವಾರದ ರಜೆ ಪಡೆದು ಎಷ್ಟೂಂತ ಹೆಂಡ್ತಿ ಮುಖ ನೋಡಿರುತ್ತೀರಿ. ಅದರ ಬದಲು ಚೆನ್ನಾಗಿ ಕೆಲಸ ಮಾಡಿ ಎಂದಿದ್ದು ವಿವಾದಕ್ಕೆ ತಿರುಗಿತ್ತು.
ಇದೇ ವಿಚಾರವಾಗಿ ಖಾಸಗಿ ವಾಹಿನಿಯ ಪ್ರಶ್ನೆಗೆ ಉತ್ತರಿಸಿದ ಆನಂದ್ ಮಹೀಂದ್ರಾ, ನನ್ನ ಹೆಂಡತಿ ಸುಂದರವಾಗಿದ್ದಾಳೆ, ಅವಳನ್ನು ನೋಡುವುದನ್ನು ಇಷ್ಟಪಡುತ್ತೇನೆ ಎಂದು ಹೇಳುವ ಮೂಲಕ ಟಾಂಗ್ ಕೊಟ್ಟಿದ್ದಾರೆ. ಉದ್ಯೋಗಿಗಳು ಮಾಡುವ ಕೆಲಸದ ಪ್ರಮಾಣಕ್ಕಿಂತಲೂ ಕೆಲಸದ ಗುಣಮಟ್ಟದ ಮುಖ್ಯ ಎಂದಿದ್ದಾರೆ.
ನನ್ನ ಹೆಂಡತಿ ಸುಂದರವಾಗಿದ್ದಾಳೆ, ನಾನು ಅವಳನ್ನು ನೋಡಲು ಇಷ್ಟಪಡುತ್ತೇನೆ. ಅಂದ ಮಾತ್ರಕ್ಕೆ ನಾನು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ತೊಡಗಿಸಿಲ್ಲ. ಸಾಮಾಜಿಕ ಜಾಲತಾಣ ಅದ್ಭುತ ವ್ಯಾಪಾರ ಕೇಂದ್ರ ಎನ್ನುವ ಕಾರಣಕ್ಕೆ ಇದ್ದೇನೆ. ಆದ್ದರಿಂದಲೇ ನನ್ನ ಒಂದು ಸಾಮಾಜಿಕ ಜಾಲತಾಣದ ಖಾತೆಯಲ್ಲಿ 11 ಮಿಲಿಯನ್ ಅನುಯಾಯಿಗಳಿದ್ದಾರೆ ಎಂದಿದ್ದಾರೆ.
Focus on the quality of work and not on the quantity, as one can change the world in 10 hours, Mahindra Group Chairman Anand Mahindra said on Saturday (January 11, 2025), joining the debate on a 90-hour work week.
18-02-26 09:02 pm
HK Desk
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:24 pm
Mangaluru Staffer
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್...
18-02-26 10:46 pm
MIR Group, Mangalore: ಮಂಗಳೂರಿನಲ್ಲಿ ಇಟಲಿಯ ಮೀರ್...
18-02-26 10:24 pm
CA Raghavendra Rao, Death: ಶ್ರೀನಿವಾಸ ಸಮೂಹ ಶಿಕ...
18-02-26 11:19 am
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm