ಬ್ರೇಕಿಂಗ್ ನ್ಯೂಸ್
14-01-25 07:18 pm HK News Desk ದೇಶ - ವಿದೇಶ
ಪ್ರಯಾಗರಾಜ್, ಜ.14: ಮಹಾಕುಂಭ ಮೇಳಕ್ಕೆ ಗೂಗಲ್ ಸಂಸ್ಥೆಯು ಗುಲಾಬಿ ದಳಗಳಿಂದ ಪುಷ್ಪ ವೃಷ್ಟಿ ಮಾಡಿದೆ. ಗೂಗಲ್ ಸರ್ಚ್ ಬಾಕ್ಸ್ನಲ್ಲಿ ಕುಂಭ ಮೇಳ ಎಂದು ಟೈಪ್ ಮಾಡಿ ಸರ್ಚ್ ಮಾಡಿದರೆ ತಕ್ಷಣ ಮೊಬೈಲ್ ಸ್ಕ್ರೀನ್ ಮೇಲೆ ಗುಲಾಬಿ ದಳಗಳು ಸುರಿಯುತ್ತವೆ.
ಕುಂಭಮೇಳ ಭಾರತದ ಆಧ್ಯಾತ್ಮಿಕ ವೈಭವವನ್ನು ಸಾರುವ ಕಾರ್ಯಕ್ರಮ. 45 ದಿನಗಳಲ್ಲಿ ಸುಮಾರು 40 ಕೋಟಿಗೂ ಹೆಚ್ಚು ಜನರು ಕುಂಭ ಮೇಳದಲ್ಲಿ ಭಾಗವಹಿಸುತ್ತಿದ್ದಾರೆ. ಇದೇ ಕಾರಣಕ್ಕೆ ಗೂಗಲ್ ಸಂಸ್ಥೆಯು ಮಹಾ ಕುಂಭಮೇಳಕ್ಕೆ ಆದ್ಯತೆ ನೀಡಿದ್ದು ಹೂ ಮಳೆ ಸುರಿಸಲು ತೊಡಗಿದೆ. ನ.14ರ ಮಕರ ಸಂಕ್ರಾಂತಿಯ ದಿನದಂದು ಗೂಗಲ್ ಕುಂಭಮೇಳದ ಬಗ್ಗೆ ಸರ್ಚ್ ಮಾಡುವ ಗ್ರಾಹಕರಿಗೆ ಹೂಮಳೆ ಸುರಿಸಿದೆ.
ಹೂವು ಸುರಿಯುವಾಗ ಸ್ಕ್ರೀನ್ ಕೆಳಗೆ ಕಾಣುವ ಮೂರು ಬಟನ್ ಪೈಕಿ ಮಧ್ಯದಲ್ಲಿರುವ ಹೂವಿನ ಬಟನ್ ಕ್ಲಿಕ್ ಮಾಡಿದರೆ, ಹೆಚ್ಚು ಹೆಚ್ಚು ಹೂವುಗಳು ಉದುರುತ್ತವೆ. ಹೀಗೆ ನೀವು ಹೆಚ್ಚು ಕ್ಲಿಕ್ ಮಾಡಿದರೆ ಹೆಚ್ಚು ಹೂವುಗಳು ಬೀಳುತ್ತವೆ. ಇದನ್ನು ಯಾರೊಂದಿಗಾದರೂ ಹಂಚಿಕೊಳ್ಳಲು ಬಯಸಿದರೆ, ಕೆಳಗಿನ ಬಲಭಾಗದ ಮೂರನೇ ಬಟನ್ ಕ್ಲಿಕ್ ಮಾಡಿ ಹಂಚಿಕೊಳ್ಳಬಹುದು. ಗೂಗಲ್ ತಂದಿರುವ ಈ ವಿಶೇಷ ಗ್ರಾಫಿಕ್ಸ್ ಅನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ.
ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಭಕ್ತರು ಹರ ಹರ ಮಹಾದೇವ, ಜೈ ಶ್ರೀರಾಮ್ ಘೋಷಣೆಗಳನ್ನು ಹಾಕುತ್ತಿದ್ದಾರೆ. 12 ಕಿಮೀ ವ್ಯಾಪ್ತಿಯಲ್ಲಿ ವ್ಯವಸ್ಥೆ ಮಾಡಿರುವ ಸ್ನಾನ ಘಟ್ಟಗಳಲ್ಲಿ ಸಂತರು, ಯಾತ್ರಿಕರು, ಅಘೋರಿಗಳು ಮತ್ತು ಭಕ್ತರು ತುಂಬಿ ತುಳುಕಿದ್ದಾರೆ. ಮಕರ ಸಂಕ್ರಾಂತಿಯ ದಿನ ಮಂಗಳವಾರ ಬೆಳಗ್ಗೆ 8.30ಕ್ಕೆ ಶಾಹಿ ಸ್ನಾನ ಆರಂಭವಾಗಿದೆ. ಸೋಮವಾರ ಪುಷ್ಯ ಹುಣ್ಣಿಮೆಯಂದು ನಿರ್ವಾಣಿ ಅಖಾಡದ ನಾಗಾ ಸಾಧುಗಳು ಪವಿತ್ರ ಸ್ನಾನ ಮಾಡುವ ಮೂಲಕ ಕುಂಭಮೇಳ ಆರಂಭಿಸಿದ್ದಾರೆ. ಲೋಕದ ಪರಿವೇ ಇಲ್ಲದಂತೆ ದೇವರ ಧ್ಯಾನದಲ್ಲೇ ತಲ್ಲೀನವಾಗಿರುವ ನಾಗಾ ಸಾಧುಗಳು, ಅಘೋರಿಗಳ ಪಾಲಿಗೆ ಕುಂಭ ಮೇಳ ಮಹೋನ್ನತ ಉತ್ಸವ ಎನ್ನುವಂತಾಗಿದೆ.
Google pays homage to Maha Kumbh Mela 2025—the largest religious gathering in the world—through a unique, interactive feature available on its search platform for Indian users. This captivating digital tribute highlights the cultural and spiritual significance of the event that attracts millions of devotees from across the globe.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm