ಬ್ರೇಕಿಂಗ್ ನ್ಯೂಸ್
28-01-25 08:08 pm HK News Desk ದೇಶ - ವಿದೇಶ
ಕಾಸರಗೋಡು, ಜ.28: ನಿಧಿ ಶೋಧಕ್ಕಾಗಿ ಕುಂಬಳೆ ಆರಿಕ್ಕಾಡಿಯ ಹಳೆಯದಾದ ಕೋಟೆಯ ಆವರಣದಲ್ಲಿ ಅಗೆತ ಮಾಡಿದ್ದಕ್ಕಾಗಿ ಮೊಗ್ರಾಲ್ ಪುತ್ತೂರು ಪಂಚಾಯತ್ ಉಪಾಧ್ಯಕ್ಷ ಸೇರಿದಂತೆ ಐವರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಆರಿಕ್ಕಾಡಿ ಕೋಟೆ ಪ್ರಾಚ್ಯವಸ್ತು ಇಲಾಖೆಯ ಅಧೀನದಲ್ಲಿದ್ದು, ಅಲ್ಲಿನ ಪಾಳುಬಿದ್ದ ಬಾವಿಯ ಒಳಗಡೆ ನಿಧಿಗಾಗಿ ಅಗೆಯಲಾಗಿದೆ.
ಕೋಟೆಯ ಒಳಗಡೆ ಕೆಲವು ಯುವಕರು ಅಗೆಯುತ್ತಿದ್ದಾರೆಂದು ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದರು. ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮೊಗ್ರಾಲ್ ಪುತ್ತೂರು ಪಂಚಾಯ್ತಿ ಉಪಾಧ್ಯಕ್ಷ ಮುಜೀಬ್ ಕಂಬಾರ್ ಎಂಬಾತನ ಸೂಚನೆಯಂತೆ ನಿಧಿ ಶೋಧ ಮಾಡಿದ್ದಾಗಿ ತಿಳಿಸಿದ್ದಾರೆ. ಸ್ಥಳದಲ್ಲಿ ಹಾರೆ, ಇನ್ನಿತರ ವಸ್ತುಗಳು ಸಿಕ್ಕಿದ್ದು ವಶಕ್ಕೆ ಪಡೆಯಲಾಗಿದೆ.



ಕೋಟೆಯ ಒಳಗಡೆ ಜನರು ಇರುವ ಬಗ್ಗೆ ಸದ್ದು ಕೇಳಿಬಂದಿದ್ದು, ಯಾರೆಂದು ನೋಡಲು ಸ್ಥಳೀಯರು ತೆರಳಿದ್ದರು. ಜನರು ಬರುತ್ತಿದ್ದುದನ್ನು ನೋಡಿ ಯುವಕರು ಪರಾರಿಯಾಗಲು ಯತ್ನಿಸಿದ್ದು, ಅಷ್ಟರಲ್ಲಿ ಒಂದಿಬ್ಬರನ್ನು ಹಿಡಿದು ಪೊಲೀಸರನ್ನು ಕರೆಸಿದ್ದಾರೆ. ಪೊಲೀಸರು ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಕಣ್ಣೂರಿನ ಕುಟುಂಬಶ್ರೀ ಕಾರ್ಯಕರ್ತರು ಈ ಬಗ್ಗೆ ಮಾತನಾಡುತ್ತಿದ್ದು ಕೋಟೆ ಒಳಗಡೆ ನಿಧಿ ಇರುವ ಬಗ್ಗೆ ವದಂತಿ ಇತ್ತು. ಹೀಗಾಗಿ ಬಾವಿ ಒಳಗಡೆ ಅಗೆದಿದ್ದಾಗಿ ಮಾಹಿತಿ ನೀಡಿದ್ದಾರೆ. ಪೊಲೀಸರು ಆರೋಪಿಗಳನ್ನು ಸ್ಟೇಶನ್ ಜಾಮೀನಿನಲ್ಲಿ ಬಿಡುಗಡೆ ಮಾಡಿದ್ದಾರೆ.
The Kumbala Police on Monday detained five people, including a panchayat vice-president, for attempting to dig for treasure in a well at the Kumbla Arikady Fort, which is under the control of the Department of Archaeology.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm