ಬ್ರೇಕಿಂಗ್ ನ್ಯೂಸ್
03-02-25 02:57 pm HK News Desk ದೇಶ - ವಿದೇಶ
ಪ್ರಯಾಗರಾಜ್, ಫೆ.3: ಮೌನಿ ಅಮಾವಾಸ್ಯೆಯಂದು ಉತ್ತರ ಪ್ರದೇಶದ ಪ್ರಯಾಗರಾಜ್ ಮಹಾಕುಂಭ ಮೇಳದಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ದೊಡ್ಡ ಸಂಚು ಇದ್ಯಾ ಎನ್ನುವ ಶಂಕೆ ಈಗ ಎದ್ದಿದೆ. ತನಿಖೆ ನಡೆಸುತ್ತಿರುವ ಪೊಲೀಸರು ಕಾಲ್ತುಳಿತ ಸಂಭವಿಸಿದ ದಿನದಲ್ಲಿ ಪಾಲ್ಗೊಂಡ ಜನರ ಮೊಬೈಲ್ ಸಂಖ್ಯೆಗಳು, ಸಿಸಿಟಿವಿಗಳನ್ನು ತನಿಖೆ ನಡೆಸುತ್ತಿದ್ದಾರೆ.
ಕಾಲ್ತುಳಿತ ಸಂಭವಿಸಿದ ಸ್ಥಳದಲ್ಲಿ ಸಕ್ರಿಯವಾಗಿದ್ದ ಸುಮಾರು 16 ಸಾವಿರ ಮೊಬೈಲ್ ಫೋನ್ ದತ್ತಾಂಶಗಳನ್ನು ತನಿಖೆ ಮಾಡಲಾಗಿದ್ದು ಈ ಪೈಕಿ ಬಹುತೇಕ ಮೊಬೈಲ್ ಫೋನ್ಗಳು ಸ್ವಿಚ್ ಆಫ್ ಆಗಿರುವುದು ಅನುಮಾನಕ್ಕೆ ಕಾರಣವಾಗಿದೆ. ತನಿಖಾ ತಂಡ ಸ್ವಿಚ್ ಆಫ್ ಆಗಿರುವ ಮೊಬೈಲ್ ಸಂಖ್ಯೆಗಳ ಗ್ರಾಹಕರ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.
ಪೊಲೀಸ್ ಕಂಟ್ರೋಲ್ ರೂಮ್ನಲ್ಲಿ ಸಂಗ್ರಹಿಸಲಾದ ಸಿಸಿಟಿವಿ ದೃಶ್ಯಗಳಿಂದ ಮುಖ ಗುರುತಿಸುವಿಕೆ ಅಪ್ಲಿಕೇಶನ್ ಮೂಲಕ ಶಂಕಿತರನ್ನು ಗುರುತಿಸಲಾಗುತ್ತಿದೆ. ಜನವರಿ 29ರಂದು ಮೌನಿ ಅಮಾವಾಸ್ಯೆಯಂದು ಸ್ನಾನ ಮಾಡಲು ನೂಕು ನುಗ್ಗಲು ಉಂಟಾಗಿ ಸುಮಾರು 30 ಮಂದಿ ಕಾಲ್ತುಳಿತಕ್ಕೆ ಬಲಿಯಾಗಿದ್ದರು. ಜನಸಮೂಹವು ಬ್ಯಾರಿಕೇಡ್ಗಳನ್ನು ಹಾರಿ ಮುನ್ನುಗ್ಗಿದ್ದರಿಂದ ಈ ದುರಂತ ಸಂಭವಿಸಿತ್ತು. ಯೋಗಿ ಅದಿತ್ಯನಾಥ್ ಸರ್ಕಾರ ಈ ಪ್ರಕರಣ ಸಂಬಂಧ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಮೂವರು ಸದಸ್ಯರ ನ್ಯಾಯಾಂಗ ಆಯೋಗವು ಶುಕ್ರವಾರ ಘಟನೆಯ ಸ್ಥಳಕ್ಕೆ ಭೇಟಿ ನೀಡಿತ್ತು. ಸಮಿತಿ ತನಿಖೆ ಮುಗಿಸಿ ವರದಿ ಸಲ್ಲಿಸಲು ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ.
ಕುಂಭಮೇಳದಲ್ಲಿ ಪವಿತ್ರ ಬಸಂತ ಪಂಚಮಿ ಹಿನ್ನೆಲೆಯಲ್ಲಿ ಫೆ.3ರಂದು ಸೋಮವಾರ ಕನಿಷ್ಠ ಮೂರು ಕೋಟಿ ಜನರು ಪವಿತ್ರ ಸ್ನಾನ ಮಾಡುವ ನಿರೀಕ್ಷೆಯಿದೆ.
Investigators probing the January 29 stampede at the ongoing Maha Kumbh Mela in Prayagraj have shifted their focus to a conspiracy angle that might have played a part in the tragic incident that left 30 pilgrims dead, sources. According to the sources, investigators are conducting data analysis of more than 16,000 mobile numbers which were said to be active in the Sangam Nose area -- ground zero of stampede -- on the day of the incident.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm