ಬ್ರೇಕಿಂಗ್ ನ್ಯೂಸ್
03-02-25 02:57 pm HK News Desk ದೇಶ - ವಿದೇಶ
ಪ್ರಯಾಗರಾಜ್, ಫೆ.3: ಮೌನಿ ಅಮಾವಾಸ್ಯೆಯಂದು ಉತ್ತರ ಪ್ರದೇಶದ ಪ್ರಯಾಗರಾಜ್ ಮಹಾಕುಂಭ ಮೇಳದಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ದೊಡ್ಡ ಸಂಚು ಇದ್ಯಾ ಎನ್ನುವ ಶಂಕೆ ಈಗ ಎದ್ದಿದೆ. ತನಿಖೆ ನಡೆಸುತ್ತಿರುವ ಪೊಲೀಸರು ಕಾಲ್ತುಳಿತ ಸಂಭವಿಸಿದ ದಿನದಲ್ಲಿ ಪಾಲ್ಗೊಂಡ ಜನರ ಮೊಬೈಲ್ ಸಂಖ್ಯೆಗಳು, ಸಿಸಿಟಿವಿಗಳನ್ನು ತನಿಖೆ ನಡೆಸುತ್ತಿದ್ದಾರೆ.
ಕಾಲ್ತುಳಿತ ಸಂಭವಿಸಿದ ಸ್ಥಳದಲ್ಲಿ ಸಕ್ರಿಯವಾಗಿದ್ದ ಸುಮಾರು 16 ಸಾವಿರ ಮೊಬೈಲ್ ಫೋನ್ ದತ್ತಾಂಶಗಳನ್ನು ತನಿಖೆ ಮಾಡಲಾಗಿದ್ದು ಈ ಪೈಕಿ ಬಹುತೇಕ ಮೊಬೈಲ್ ಫೋನ್ಗಳು ಸ್ವಿಚ್ ಆಫ್ ಆಗಿರುವುದು ಅನುಮಾನಕ್ಕೆ ಕಾರಣವಾಗಿದೆ. ತನಿಖಾ ತಂಡ ಸ್ವಿಚ್ ಆಫ್ ಆಗಿರುವ ಮೊಬೈಲ್ ಸಂಖ್ಯೆಗಳ ಗ್ರಾಹಕರ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.
ಪೊಲೀಸ್ ಕಂಟ್ರೋಲ್ ರೂಮ್ನಲ್ಲಿ ಸಂಗ್ರಹಿಸಲಾದ ಸಿಸಿಟಿವಿ ದೃಶ್ಯಗಳಿಂದ ಮುಖ ಗುರುತಿಸುವಿಕೆ ಅಪ್ಲಿಕೇಶನ್ ಮೂಲಕ ಶಂಕಿತರನ್ನು ಗುರುತಿಸಲಾಗುತ್ತಿದೆ. ಜನವರಿ 29ರಂದು ಮೌನಿ ಅಮಾವಾಸ್ಯೆಯಂದು ಸ್ನಾನ ಮಾಡಲು ನೂಕು ನುಗ್ಗಲು ಉಂಟಾಗಿ ಸುಮಾರು 30 ಮಂದಿ ಕಾಲ್ತುಳಿತಕ್ಕೆ ಬಲಿಯಾಗಿದ್ದರು. ಜನಸಮೂಹವು ಬ್ಯಾರಿಕೇಡ್ಗಳನ್ನು ಹಾರಿ ಮುನ್ನುಗ್ಗಿದ್ದರಿಂದ ಈ ದುರಂತ ಸಂಭವಿಸಿತ್ತು. ಯೋಗಿ ಅದಿತ್ಯನಾಥ್ ಸರ್ಕಾರ ಈ ಪ್ರಕರಣ ಸಂಬಂಧ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಮೂವರು ಸದಸ್ಯರ ನ್ಯಾಯಾಂಗ ಆಯೋಗವು ಶುಕ್ರವಾರ ಘಟನೆಯ ಸ್ಥಳಕ್ಕೆ ಭೇಟಿ ನೀಡಿತ್ತು. ಸಮಿತಿ ತನಿಖೆ ಮುಗಿಸಿ ವರದಿ ಸಲ್ಲಿಸಲು ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ.
ಕುಂಭಮೇಳದಲ್ಲಿ ಪವಿತ್ರ ಬಸಂತ ಪಂಚಮಿ ಹಿನ್ನೆಲೆಯಲ್ಲಿ ಫೆ.3ರಂದು ಸೋಮವಾರ ಕನಿಷ್ಠ ಮೂರು ಕೋಟಿ ಜನರು ಪವಿತ್ರ ಸ್ನಾನ ಮಾಡುವ ನಿರೀಕ್ಷೆಯಿದೆ.
Investigators probing the January 29 stampede at the ongoing Maha Kumbh Mela in Prayagraj have shifted their focus to a conspiracy angle that might have played a part in the tragic incident that left 30 pilgrims dead, sources. According to the sources, investigators are conducting data analysis of more than 16,000 mobile numbers which were said to be active in the Sangam Nose area -- ground zero of stampede -- on the day of the incident.
18-09-25 05:34 pm
Bangalore Correspondent
Ksrtc Bus, Driver, Heart Attack: ಬಸ್ ಓಡಿಸುವಾಗ...
17-09-25 06:02 pm
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
18-09-25 08:14 pm
HK News Desk
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
18-09-25 11:11 pm
Mangalore Correspondent
Mangalore, UT Khader: ಹಿಂದುಳಿದ ವರ್ಗಗಳ ಆಯೋಗ ಸ್...
18-09-25 09:12 pm
ಮಾಜಿ ಸೈನಿಕರಿಗೆ ಸರ್ಕಾರಿ ಸವಲತ್ತು ನೀಡದೆ ನಿರ್ಲಕ್ಷ...
18-09-25 09:09 pm
Banglegudde, Dharmasthala, SIT: ಬಂಗ್ಲೆಗುಡ್ಡೆ...
18-09-25 07:40 pm
Ajith Kumar Rai, Mangalore: ಬಂಟ- ನಾಡವರು ಒಂದೇ,...
18-09-25 06:11 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm