ಬ್ರೇಕಿಂಗ್ ನ್ಯೂಸ್
08-02-25 12:14 pm HK News Desk ದೇಶ - ವಿದೇಶ
ನವದೆಹಲಿ, ಫೆ.8: ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು 70 ಸದಸ್ಯ ಬಲದ ಅಸೆಂಬ್ಲಿಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸುವ ಲಕ್ಷಣ ಕಂಡುಬಂದಿದೆ. ಬಿಜೆಪಿ 45 ಸ್ಥಾನಗಳಲ್ಲಿ ಮುನ್ನಡೆ ಹೊಂದಿದ್ದರೆ, ಆಪ್ ಪಕ್ಷವು 25 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಆಮೂಲಕ ಬಿಜೆಪಿ 27 ವರ್ಷಗಳ ಬಳಿಕ ದೆಹಲಿ ಗದ್ದುಗೆ ಹಿಡಿಯುವತ್ತ ಹೊರಟಿದೆ.
ಸತತ ಎರಡು ಬಾರಿ ದೆಹಲಿ ಅಧಿಕಾರ ಹಿಡಿದ ಆಮ್ ಆದ್ಮಿ ಪಕ್ಷ ಈ ಬಾರಿ ಸೋಲುತ್ತದೆ ಎಂದೇ ಬಹುತೇಕ ಸಮೀಕ್ಷೆಗಳು ಭವಿಷ್ಯ ಹೇಳಿದ್ದವು. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ನಾಯಕತ್ವಕ್ಕೆ ಜನ ಮತ ನೀಡಲಿದ್ದಾರೆ, 40-45 ಸ್ಥಾನಗಳೊಂದಿಗೆ ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ಎಂಟಕ್ಕೂ ಅಧಿಕ ಸಮೀಕ್ಷೆಗಳು ಹೇಳಿದ್ದವು. 11 ಎಕ್ಸಿಟ್ ಪೋಲ್ಗಳಲ್ಲಿ 8 ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದು ಭವಿಷ್ಯ ನುಡಿದಿದ್ದವು. ಕಾಂಗ್ರೆಸ್ ಒಂದು ಸ್ಥಾನವನ್ನೂ ಗಳಿಸಲ್ಲ ಎಂದೂ ಹೇಳಿವೆ.
ಸದ್ಯಕ್ಕೆ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ಮತ್ತು ಹಾಲಿ ಸಿಎಂ ಅತಿಷಿ ವಿರುದ್ಧ ಬಿಜೆಪಿ ಅಭ್ಯರ್ಥಿಗಳು ನಿಕಟ ಸ್ಪರ್ಧೆ ಒಡ್ಡಿದ್ದಾರೆ. ಆರಂಭಿಕ ಸುತ್ತಿನಲ್ಲಿ ಕೇಜ್ರಿವಾಲ್ ಮತ್ತು ಅತಿಷಿ ಹಿನ್ನಡೆ ಅನುಭವಿಸಿದ್ದಾರೆ. ಡಿಸಿಎಂ ಮನೀಶ್ ಸಿಸೋಡಿಯಾ, ಪ್ರಮುಖ ನಾಯಕರಾದ ಸೌರಭ್ ಭಾರದ್ವಾಜ್, ಗೋಪಾಲ್ ರಾಯ್ ಮುನ್ನಡೆ ಗಳಿಸಿದ್ದಾರೆ. ಎರಡು ಅವಧಿಯಲ್ಲಿ ಕೇಂದ್ರದಲ್ಲಿ ಅಧಿಕಾರ ಹಿಡಿದರೂ, ರಾಜಧಾನಿ ಜನರು ಬಿಜೆಪಿಗೆ ದೆಹಲಿಯಲ್ಲಿ ಮತ ನೀಡಿರಲಿಲ್ಲ. ಈ ಬಾರಿ ಪೊರಕೆ ಹಿಡಿದ ಆಮ್ ಆದ್ಮಿಯನ್ನು ಲಿಕ್ಕರ್ ಹಗರಣದ ಧೂಳು ಧೂಳೀಪಟ ಮಾಡಿದೆ. ಕಾಂಗ್ರೆಸ್ ಛಾರ್ಮ್ ನೇಪಥ್ಯಕ್ಕೆ ಸರಿದಿದ್ದರಿಂದ ಬಿಜೆಪಿ ಮತ್ತೆ ಮೇಲೆದ್ದು ಕುಳಿತಿದೆ.

ಫಲಿತಾಂಶದ ಬಗ್ಗೆ ಹಲವರು ನಾನಾ ರೀತಿಯ ಟೀಕೆ ಮಾಡಿದ್ದಾರೆ. ಎಐಎಂಐಎಂ ಪಕ್ಷದ ಒವೈಸಿ, ಇಂಡಿಯಾ ಒಕ್ಕೂಟ ಜೊತೆಗೂಡಿ ಸ್ಪರ್ಧೆ ಮಾಡದಿರುವುದಕ್ಕೇ ಸೋಲಾಗಿದೆ ಎಂದು ಹೇಳಿದ್ದಾರೆ. ಅರವಿಂದ ಕೇಜ್ರಿವಾಲ್ ಜೊತೆಗೆ ಭ್ರಷ್ಟಾಚಾರ ವಿರುದ್ಧ ಹೋರಾಟ ನಡೆಸಿದ್ದ ಅಣ್ಣಾ ಹಜಾರೆ, ದೆಹಲಿ ಲಿಕ್ಕರ್ ಹಗರಣದಿಂದಾಗಿ ಕೇಜ್ರಿವಾಲ್ ಇಮೇಜ್ ಗೆ ಧಕ್ಕೆಯಾಗಿದೆ. ರಾಜಕೀಯ ಕ್ಷೇತ್ರಕ್ಕೆ ಹೋಗುವುದಾದರೆ, ಸ್ವಚ್ಛ ವ್ಯಕ್ತಿತ್ವ ಇರಬೇಕು ಎಂದು ಹೇಳಿದ್ದೆ. ಅದನ್ನು ಅರವಿಂದ ಕೇಜ್ರಿವಾಲ್ ಉಳಿಸಿಕೊಂಡಿಲ್ಲ ಎಂದಿದ್ದಾರೆ.
The BJP is on its way to make a grand Delhi-waapsi, show the current official trends by the Election Commission of India. As per the latest trends, the BJP is leading on 45 seats. On the other hand, the Aam Aadmi Party is leading on 25 seats, way off mark than the magic figure of 36.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm