ಬ್ರೇಕಿಂಗ್ ನ್ಯೂಸ್
08-02-25 12:14 pm HK News Desk ದೇಶ - ವಿದೇಶ
ನವದೆಹಲಿ, ಫೆ.8: ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು 70 ಸದಸ್ಯ ಬಲದ ಅಸೆಂಬ್ಲಿಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸುವ ಲಕ್ಷಣ ಕಂಡುಬಂದಿದೆ. ಬಿಜೆಪಿ 45 ಸ್ಥಾನಗಳಲ್ಲಿ ಮುನ್ನಡೆ ಹೊಂದಿದ್ದರೆ, ಆಪ್ ಪಕ್ಷವು 25 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಆಮೂಲಕ ಬಿಜೆಪಿ 27 ವರ್ಷಗಳ ಬಳಿಕ ದೆಹಲಿ ಗದ್ದುಗೆ ಹಿಡಿಯುವತ್ತ ಹೊರಟಿದೆ.
ಸತತ ಎರಡು ಬಾರಿ ದೆಹಲಿ ಅಧಿಕಾರ ಹಿಡಿದ ಆಮ್ ಆದ್ಮಿ ಪಕ್ಷ ಈ ಬಾರಿ ಸೋಲುತ್ತದೆ ಎಂದೇ ಬಹುತೇಕ ಸಮೀಕ್ಷೆಗಳು ಭವಿಷ್ಯ ಹೇಳಿದ್ದವು. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ನಾಯಕತ್ವಕ್ಕೆ ಜನ ಮತ ನೀಡಲಿದ್ದಾರೆ, 40-45 ಸ್ಥಾನಗಳೊಂದಿಗೆ ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ಎಂಟಕ್ಕೂ ಅಧಿಕ ಸಮೀಕ್ಷೆಗಳು ಹೇಳಿದ್ದವು. 11 ಎಕ್ಸಿಟ್ ಪೋಲ್ಗಳಲ್ಲಿ 8 ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದು ಭವಿಷ್ಯ ನುಡಿದಿದ್ದವು. ಕಾಂಗ್ರೆಸ್ ಒಂದು ಸ್ಥಾನವನ್ನೂ ಗಳಿಸಲ್ಲ ಎಂದೂ ಹೇಳಿವೆ.
ಸದ್ಯಕ್ಕೆ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ಮತ್ತು ಹಾಲಿ ಸಿಎಂ ಅತಿಷಿ ವಿರುದ್ಧ ಬಿಜೆಪಿ ಅಭ್ಯರ್ಥಿಗಳು ನಿಕಟ ಸ್ಪರ್ಧೆ ಒಡ್ಡಿದ್ದಾರೆ. ಆರಂಭಿಕ ಸುತ್ತಿನಲ್ಲಿ ಕೇಜ್ರಿವಾಲ್ ಮತ್ತು ಅತಿಷಿ ಹಿನ್ನಡೆ ಅನುಭವಿಸಿದ್ದಾರೆ. ಡಿಸಿಎಂ ಮನೀಶ್ ಸಿಸೋಡಿಯಾ, ಪ್ರಮುಖ ನಾಯಕರಾದ ಸೌರಭ್ ಭಾರದ್ವಾಜ್, ಗೋಪಾಲ್ ರಾಯ್ ಮುನ್ನಡೆ ಗಳಿಸಿದ್ದಾರೆ. ಎರಡು ಅವಧಿಯಲ್ಲಿ ಕೇಂದ್ರದಲ್ಲಿ ಅಧಿಕಾರ ಹಿಡಿದರೂ, ರಾಜಧಾನಿ ಜನರು ಬಿಜೆಪಿಗೆ ದೆಹಲಿಯಲ್ಲಿ ಮತ ನೀಡಿರಲಿಲ್ಲ. ಈ ಬಾರಿ ಪೊರಕೆ ಹಿಡಿದ ಆಮ್ ಆದ್ಮಿಯನ್ನು ಲಿಕ್ಕರ್ ಹಗರಣದ ಧೂಳು ಧೂಳೀಪಟ ಮಾಡಿದೆ. ಕಾಂಗ್ರೆಸ್ ಛಾರ್ಮ್ ನೇಪಥ್ಯಕ್ಕೆ ಸರಿದಿದ್ದರಿಂದ ಬಿಜೆಪಿ ಮತ್ತೆ ಮೇಲೆದ್ದು ಕುಳಿತಿದೆ.
ಫಲಿತಾಂಶದ ಬಗ್ಗೆ ಹಲವರು ನಾನಾ ರೀತಿಯ ಟೀಕೆ ಮಾಡಿದ್ದಾರೆ. ಎಐಎಂಐಎಂ ಪಕ್ಷದ ಒವೈಸಿ, ಇಂಡಿಯಾ ಒಕ್ಕೂಟ ಜೊತೆಗೂಡಿ ಸ್ಪರ್ಧೆ ಮಾಡದಿರುವುದಕ್ಕೇ ಸೋಲಾಗಿದೆ ಎಂದು ಹೇಳಿದ್ದಾರೆ. ಅರವಿಂದ ಕೇಜ್ರಿವಾಲ್ ಜೊತೆಗೆ ಭ್ರಷ್ಟಾಚಾರ ವಿರುದ್ಧ ಹೋರಾಟ ನಡೆಸಿದ್ದ ಅಣ್ಣಾ ಹಜಾರೆ, ದೆಹಲಿ ಲಿಕ್ಕರ್ ಹಗರಣದಿಂದಾಗಿ ಕೇಜ್ರಿವಾಲ್ ಇಮೇಜ್ ಗೆ ಧಕ್ಕೆಯಾಗಿದೆ. ರಾಜಕೀಯ ಕ್ಷೇತ್ರಕ್ಕೆ ಹೋಗುವುದಾದರೆ, ಸ್ವಚ್ಛ ವ್ಯಕ್ತಿತ್ವ ಇರಬೇಕು ಎಂದು ಹೇಳಿದ್ದೆ. ಅದನ್ನು ಅರವಿಂದ ಕೇಜ್ರಿವಾಲ್ ಉಳಿಸಿಕೊಂಡಿಲ್ಲ ಎಂದಿದ್ದಾರೆ.
The BJP is on its way to make a grand Delhi-waapsi, show the current official trends by the Election Commission of India. As per the latest trends, the BJP is leading on 45 seats. On the other hand, the Aam Aadmi Party is leading on 25 seats, way off mark than the magic figure of 36.
04-06-25 10:48 pm
Bangalore Correspondent
RCB celebration, Bangalore, Stampede, update:...
04-06-25 09:07 pm
R Ashok, RCB, Bangalore, Death: ಕಿಲ್ಲರ್ RCB ;...
04-06-25 08:06 pm
RCB Victory Celebration, Death, Stampede, Ban...
04-06-25 06:21 pm
ಕ್ಷಮೆ ಕೇಳಲ್ಲ, ಮಾತುಕತೆಗೆ ಸಿದ್ಧ ; ಹೈಕೋರ್ಟಿನಲ್ಲಿ...
03-06-25 10:50 pm
04-06-25 05:05 pm
HK News Desk
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
04-06-25 10:43 pm
Mangalore Correspondent
Mangalore Police, Social Media, Arrest: ಜಾಲತಾ...
04-06-25 09:34 pm
RCB, Mangalore celebration, IPL Cricket 2025:...
04-06-25 02:26 pm
Bomb Threat, Mangalore, Kanachur Hospital: ದೇ...
04-06-25 01:38 pm
ಮಂಗಳೂರಿನಲ್ಲಿ ಟಿಂಟ್ ಗ್ಲಾಸ್ ಕಾರುಗಳ ವಿರುದ್ಧ ವಿಶೇ...
03-06-25 08:13 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm