ಬ್ರೇಕಿಂಗ್ ನ್ಯೂಸ್
09-02-25 09:32 pm HK News Desk ದೇಶ - ವಿದೇಶ
ಮೆಕ್ಸಿಕೋ, ಫೆ.9: 48 ಜನರನ್ನು ಒಯ್ಯುತ್ತಿದ್ದ ಬಸ್ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡು ಧಗ ಧಗನೆ ಉರಿದಿದ್ದು 41 ಜನರು ಸಜೀವ ದಹನವಾದ ಘಟನೆ ದಕ್ಷಿಣ ಮೆಕ್ಸಿಕೋ ನಗರದಲ್ಲಿ ನಡೆದಿದೆ.
ಪ್ರಯಾಣಿಕರಿದ್ದ ಬಸ್ಸಿನಲ್ಲಿ ಬೆಂಕಿ ಉಂಟಾಗಿದ್ದರಿಂದ 38 ಪ್ರಯಾಣಿಕರು ಮತ್ತು ಟ್ರಕ್ ಹಾಗೂ ಬಸ್ಸಿನ ಇಬ್ಬರು ಚಾಲಕರು ನೋಡ ನೋಡುತ್ತಲೇ ಸುಟ್ಟು ಕರಕಲಾಗಿದ್ದಾರೆ. ಅಪಘಾತದ ಕಾರಣಗಳ ಬಗ್ಗೆ ತನಿಖೆ ಆರಂಭಿಸಲಾಗಿದೆ.
ಅಧಿಕಾರಿಗಳ ಪ್ರಕಾರ, ಈ ಘಟನೆ ಶನಿವಾರ ಬೆಳಗಿನ ಜಾವ ತಬಾಸ್ಕೊ ರಾಜ್ಯದಲ್ಲಿ ಸಂಭವಿಸಿದೆ. ಘಟನೆಯಲ್ಲಿ ಟ್ರಕ್ ಚಾಲಕನೂ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳದಲ್ಲಿ ಇದುವರೆಗೆ 18 ಜನರ ಅವಶೇಷಗಳನ್ನು ಗುರುತಿಸಲಾಗಿದೆ. ಹಲವರು ಗಂಭೀರ ಗಾಯಗೊಂಡಿದ್ದು ಸಾವು- ನೋವು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಬಸ್ ಪೂರ್ತಿ ಸುಟ್ಟು ಹೋಗಿದ್ದು ಕೊನೆಗೆ ಕೇವಲ ಲೋಹದ ವಸ್ತುಗಳು ಮಾತ್ರ ಉಳಿದುಕೊಂಡಿವೆ. ಬೆಂಕಿಯ ಕೆನ್ನಾಲಿಗೆ ಬಾನೆತ್ತರಕ್ಕೆ ಏರಿದ್ದು ಇದರ ವಿಡಿಯೋಗಳು ಹರಿದಾಡಿವೆ. ಹೀಗಾಗಿ ಮೃತದೇಗದ ಅವಶೇಷಗಳು ಗುರುತೇ ಸಿಗದಂತಾಗಿದ್ದು ಗುರುತು ಪತ್ತೆಹಚ್ಚುವ ಕಾರ್ಯ ಮುಂದುವರೆದಿದೆ. ಅಪಘಾತದ ಕಾರಣಗಳ ಬಗ್ಗೆ ತನಿಖೆ ಆರಂಭಿಸಲಾಗಿದೆ. ಬಸ್ ಅತಿ ವೇಗವೇ ಅಪಘಾತಕ್ಕೆ ಕಾರಣವೇ, ಬೆಂಕಿ ಹೊತ್ತಿಕೊಂಡಿದ್ದು ಹೇಗೆ ಮತ್ತು ಟ್ರಕ್ ನಲ್ಲಿ ಏನಾದರೂ ಹೊತ್ತಿಕೊಳ್ಳಬಲ್ಲ ಪದಾರ್ಥ ಇತ್ತೇ ಎಂಬ ಬಗ್ಗೆ ತನಿಖೆ ಮಾಡಲಾಗುತ್ತಿದೆ. ಪ್ರಯಾಣಿಕರನ್ನು ಹೊತ್ತ ಬಸ್ ಕಾನ್ಕೂನ್ ನಗರದಿಂದ ತಬಾಸ್ಕೋ ನಗರಕ್ಕೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.
A traffic accident involving a bus in southern Mexico, which took place in the early hours of Saturday morning, killed 41 people, the government of Tabasco state said in a statement, adding that recovery work was still ongoing.
18-02-26 09:02 pm
HK Desk
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:24 pm
Mangaluru Staffer
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್...
18-02-26 10:46 pm
MIR Group, Mangalore: ಮಂಗಳೂರಿನಲ್ಲಿ ಇಟಲಿಯ ಮೀರ್...
18-02-26 10:24 pm
CA Raghavendra Rao, Death: ಶ್ರೀನಿವಾಸ ಸಮೂಹ ಶಿಕ...
18-02-26 11:19 am
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm