ಬ್ರೇಕಿಂಗ್ ನ್ಯೂಸ್
09-02-25 09:32 pm HK News Desk ದೇಶ - ವಿದೇಶ
ಮೆಕ್ಸಿಕೋ, ಫೆ.9: 48 ಜನರನ್ನು ಒಯ್ಯುತ್ತಿದ್ದ ಬಸ್ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡು ಧಗ ಧಗನೆ ಉರಿದಿದ್ದು 41 ಜನರು ಸಜೀವ ದಹನವಾದ ಘಟನೆ ದಕ್ಷಿಣ ಮೆಕ್ಸಿಕೋ ನಗರದಲ್ಲಿ ನಡೆದಿದೆ.
ಪ್ರಯಾಣಿಕರಿದ್ದ ಬಸ್ಸಿನಲ್ಲಿ ಬೆಂಕಿ ಉಂಟಾಗಿದ್ದರಿಂದ 38 ಪ್ರಯಾಣಿಕರು ಮತ್ತು ಟ್ರಕ್ ಹಾಗೂ ಬಸ್ಸಿನ ಇಬ್ಬರು ಚಾಲಕರು ನೋಡ ನೋಡುತ್ತಲೇ ಸುಟ್ಟು ಕರಕಲಾಗಿದ್ದಾರೆ. ಅಪಘಾತದ ಕಾರಣಗಳ ಬಗ್ಗೆ ತನಿಖೆ ಆರಂಭಿಸಲಾಗಿದೆ.
ಅಧಿಕಾರಿಗಳ ಪ್ರಕಾರ, ಈ ಘಟನೆ ಶನಿವಾರ ಬೆಳಗಿನ ಜಾವ ತಬಾಸ್ಕೊ ರಾಜ್ಯದಲ್ಲಿ ಸಂಭವಿಸಿದೆ. ಘಟನೆಯಲ್ಲಿ ಟ್ರಕ್ ಚಾಲಕನೂ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳದಲ್ಲಿ ಇದುವರೆಗೆ 18 ಜನರ ಅವಶೇಷಗಳನ್ನು ಗುರುತಿಸಲಾಗಿದೆ. ಹಲವರು ಗಂಭೀರ ಗಾಯಗೊಂಡಿದ್ದು ಸಾವು- ನೋವು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಬಸ್ ಪೂರ್ತಿ ಸುಟ್ಟು ಹೋಗಿದ್ದು ಕೊನೆಗೆ ಕೇವಲ ಲೋಹದ ವಸ್ತುಗಳು ಮಾತ್ರ ಉಳಿದುಕೊಂಡಿವೆ. ಬೆಂಕಿಯ ಕೆನ್ನಾಲಿಗೆ ಬಾನೆತ್ತರಕ್ಕೆ ಏರಿದ್ದು ಇದರ ವಿಡಿಯೋಗಳು ಹರಿದಾಡಿವೆ. ಹೀಗಾಗಿ ಮೃತದೇಗದ ಅವಶೇಷಗಳು ಗುರುತೇ ಸಿಗದಂತಾಗಿದ್ದು ಗುರುತು ಪತ್ತೆಹಚ್ಚುವ ಕಾರ್ಯ ಮುಂದುವರೆದಿದೆ. ಅಪಘಾತದ ಕಾರಣಗಳ ಬಗ್ಗೆ ತನಿಖೆ ಆರಂಭಿಸಲಾಗಿದೆ. ಬಸ್ ಅತಿ ವೇಗವೇ ಅಪಘಾತಕ್ಕೆ ಕಾರಣವೇ, ಬೆಂಕಿ ಹೊತ್ತಿಕೊಂಡಿದ್ದು ಹೇಗೆ ಮತ್ತು ಟ್ರಕ್ ನಲ್ಲಿ ಏನಾದರೂ ಹೊತ್ತಿಕೊಳ್ಳಬಲ್ಲ ಪದಾರ್ಥ ಇತ್ತೇ ಎಂಬ ಬಗ್ಗೆ ತನಿಖೆ ಮಾಡಲಾಗುತ್ತಿದೆ. ಪ್ರಯಾಣಿಕರನ್ನು ಹೊತ್ತ ಬಸ್ ಕಾನ್ಕೂನ್ ನಗರದಿಂದ ತಬಾಸ್ಕೋ ನಗರಕ್ಕೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.
A traffic accident involving a bus in southern Mexico, which took place in the early hours of Saturday morning, killed 41 people, the government of Tabasco state said in a statement, adding that recovery work was still ongoing.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm